ಪ್ರಧಾನಿಗೆ ಶಿಕ್ಷಣ ಬೇಕೆಂದು ಅದಕ್ಕೇ ಹೇಳೋದು; 2 ಸಾವಿರ ರೂ. ನೋಟ್ ಬ್ಯಾನ್‌ ಬಗ್ಗೆ ಕೇಜ್ರಿವಾಲ್ ವ್ಯಂಗ್ಯ

Date:

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ₹2 ಸಾವಿರ ಮೌಲ್ಯದ ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಜ್ರಿವಾಲ್, “2000 ರೂ. ನೋಟು ತರುವುದರಿಂದ ಭ್ರಷ್ಟಾಚಾರ ನಿಲ್ಲುತ್ತದೆ ಎಂದು ಮೊದಲು ಹೇಳಿದ್ದರು. ಈಗ 2000 ನೋಟು ನಿಷೇಧಿಸಿರುವುದರಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎನ್ನುತ್ತಿದ್ದಾರೆ. ಅದಕ್ಕಾಗಿಯೇ ನಾವು ಹೇಳುತ್ತೇವೆ, ಪ್ರಧಾನಿ ವಿದ್ಯಾವಂತರಾಗಿರಬೇಕು. ಅನಕ್ಷರಸ್ಥ ಪ್ರಧಾನಿಗೆ ಯಾರು ಬೇಕಾದರೂ ಏನು ಬೇಕಾದರೂ ಹೇಳಬಹುದು. ಅವರಿಗೆ ಅದು ಅರ್ಥವಾಗುವುದಿಲ್ಲ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸಬೇಕಾಗಿದೆ” ಎಂದು ಬರೆದುಕೊಂಡಿದ್ದಾರೆ.

2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವ ನಿರ್ಧಾರ ಮಾಡಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ಘೋಷಿಸಿದೆ. ಸದ್ಯ ಚಲಾವಣೆಯಲ್ಲಿರುವ ನೋಟುಗಳನ್ನು ಸೆಪ್ಟೆಂಬರ್ 30ರೊಳಗಾಗಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವಂತೆ ಅಥವಾ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿ ಕೊಳ್ಳುವಂತೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ₹2 ಸಾವಿರ ನೋಟುಗಳನ್ನು ಹಿಂಪಡೆಯಲು ನಿರ್ಧರಿಸಿದ ಆರ್‌ಬಿಐ; ಸೆ.30 ಕೊನೆ ದಿನ!

2 ಸಾವಿರ ಮುಖಬೆಲೆಯ ನೋಟುಗಳನ್ನು ಬೇರೆ ಮುಖಬೆಲೆಯ ನೋಟುಗಳೊಂದಿಗೆ ಒಂದು ಬಾರಿಗೆ 20 ಸಾವಿರದವರೆಗೆ ಮಾತ್ರವೇ ಬದಲಾಯಿಸಿಕೊಳ್ಳಬಹುದು ಎನ್ನುವ ಮಿತಿಯನ್ನು ಆರ್‌ಬಿಐ ವಿಧಿಸಿದೆ. ಬ್ಯಾಂಕ್ ಶಾಖೆಗಳ ದೈನಂದಿನ ಕೆಲಸಗಳಿಗೆ ಅಡಚಣೆ ಆಗಬಾರದು ಎಂಬ ಕಾರಣಕ್ಕೆ ಈ ಮಿತಿಯನ್ನು ಹೇರಲಾಗಿದೆ.

2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ದೊಡ್ಡ ನೋಟುಗಳನ್ನು ರದ್ದುಗೊಳಿಸಿ ಸಂಚಲನ ಮೂಡಿಸಿದ್ದರು. ಭ್ರಷ್ಟಾಚಾರ ಮತ್ತು ಕಪ್ಪುಹಣ ಹೆಚ್ಚುತ್ತಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಒಂದು ಸಾವಿರ ರೂಪಾಯಿ ಬ್ಯಾನ್ ಮಾಡಿ 2000 ನೋಟು ಪರಿಚಯಿಸಿತ್ತು. 1000 ರೂಪಾಯಿ ನೋಟುಗಳಿಂದ ಕಪ್ಪುಹಣ ಹೆಚ್ಚುತ್ತದೆ ಎಂದು ಹೇಳಿದಾಗ 2000 ನೋಟು ಚಲಾವಣೆಗೆ ಟೀಕೆ ವ್ಯಕ್ತವಾಗಿತ್ತು. ಮತ್ತೊಂದೆಡೆ 500 ರೂಪಾಯಿಯ ಹಳೆಯ ನೋಟು ರದ್ದು ಮಾಡಿ ಹೊಸ 500 ರೂಪಾಯಿ ನೋಟು ಚಲಾವಣೆಗೆ ಬಂದಿತ್ತು.

ಆಗಿನ ಸಮಯದಲ್ಲಿ ದೇಶದ ಜನತೆ ಕರೆನ್ಸಿ ವಿನಿಮಯಕ್ಕೆ ಬ್ಯಾಂಕ್‌ಗಳ ಮೊರೆ ಹೋಗಿದ್ದನ್ನು ಯಾರೂ ಮರೆಯುವಂತಿಲ್ಲ. ಇದೀಗ ಮತ್ತೊಮ್ಮೆ ಅದೇ ರೀತಿ ಆರ್‌ಬಿಐ ಶಾಕ್ ನೀಡಿದ್ದಕ್ಕೆ ವಿಪಕ್ಷಗಳು ಕಿಡಿಕಾರಿವೆ. 2000 ರೂಪಾಯಿ ನೋಟು ರದ್ದತಿ ಘೋಷಣೆಗೆ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...