ಕಂದಕಕ್ಕೆ ಬಿದ್ದ ಕಾರು; ಯುವತಿ ಸಾವು

Date:

ಇತ್ತೀಚಿಗಷ್ಟೇ ಕಾರು ಓಡಿಸುವುದನ್ನು ಕಲಿತಿದ್ದ ಯುವತಿಯೊಬ್ಬರು ಕಾರು ಚಲಾವಣೆ ಮಾಡುವ ವೇಳೆ, ರಿವರ್ಸ್‌ ಗೇರನಲ್ಲಿದ್ದಾಗ ಏಕಾಏಕಿ ಎಕ್ಸ್‌ಲೇಟರ್ ಒತ್ತಿದ ಪರಿಣಾಮ ಕಾರು ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಛತ್ರಿಪತಿ ಸಂಭಾಜಿನಗರದಲ್ಲಿ ನಡೆದಿದೆ.

ಶ್ವೇತಾ ಸುರ್ವಾಸೆ (23) ಸಾವನ್ನಪ್ಪಿದ ಯುವತಿ. ಸುಲಿಭಂಜನ್ ಪ್ರದೇಶದಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದೆ.  ಕಾರು ರಿವರ್ಸ್ ಗೇರ್‌ನಲ್ಲಿದ್ದಾಗ ಯುವತಿ ಕ್ಲಚ್ ಬದಲು ಎಕ್ಸಲೇಟರ್ ಒತ್ತಿದ ಪರಿಣಾಮ ಕಾರು ಕ್ರ್ಯಾಶ್​ ಬ್ಯಾರಿಯರ್​ ಅನ್ನು ಮುರಿದು ನೇರವಾಗಿ ಕಂದಕಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತ ಶಿವರಾಜ್ ಇತ್ತೀಚೆಗಷ್ಟೇ ಶ್ವೇತಾಳಿಗೆ ಕಾರು ಓಡಿಸಲು ಕಲಿಸಿದ್ದರು. ಇವರು ಕಾರಿನಲ್ಲಿ ಸಂಭಾಜಿನಗರದಿಂದ ದತ್ ಮಂದಿರ ಪ್ರದೇಶಕ್ಕೆ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರು ಓಡಿಸುವಾಗ ರೀಲ್ಸ್‌ ಮಾಡಬೇಕೆಂಬುದು ಮೃತ ಯುವತಿ ಶ್ವೇತಾಗೆ ಆಸೆ ಇತ್ತು. ಮೊಬೈಲ್‌ ಅನ್ನು ತನ್ನ ಸ್ನೇಹಿತೆ ಶಿವಾರಾಜ್‌ಗೆ ಕೊಟ್ಟು ವಿಡಿಯೋ ಮಾಡಲು ಹೇಳಿದ್ದಳು. ಕಾರು ಆರಂಭ ಮಾಡಿದಾಗ ರಿವರ್ಸ್‌ಗೇರಿನಲ್ಲಿತ್ತು. ಅಲ್ಲದೇ, ಶ್ವೇತಾ ಎಕ್ಸಲೇಟರ್ ಅನ್ನು ಒತ್ತಿದ್ದಾಳೆ. ಇದ್ದಕ್ಕಿದ್ದಂತೆ ಕಾರು ಹಿಂದೆ ಚಲಿಸಲು ಆರಂಭಿಸಿತು. ವಿಡಿಯೋ ಮಾಡುತ್ತಿದ್ದ ಶಿವರಾಜ್​ ‘ಕ್ಲಚ್, ಕ್ಲಚ್’​ ಎಂದು ಎಷ್ಟೇ ಕೂಗಿದರೂ ಆಕೆಗೆ ಕೇಳಿಸೇ ಇಲ್ಲ.

ಈ ಸುದ್ದಿ ಓದಿದ್ದೀರಾ?ದರ್ಶನ್ ಬಂಧನ | ಪೊಲೀಸರ ಪ್ರಾಮಾಣಿಕ ತನಿಖೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ಘಟನೆ ಬೆಳಕಿಗೆ: ಪೊಲೀಸ್ ಆಯುಕ್ತ ದಯಾನಂದ

ಆ ವೇಳೆಗಾಗಲೇ ಕಾರು ಕಂದಕಕ್ಕೆ ಬಿದ್ದಿದೆ. ಯುವ ತಿಯನ್ನು ರಕ್ಷಣೆ ಮಾಡಲು ಬರುವ ರಕ್ಷಣಾ ಸಿಬ್ಬಂದಿ ಆ ಪ್ರದೇಶವನ್ನು ತಲುಪಲು ಸುಮಾರು ಸಮಯ ತೆಗೆದುಕೊಂಡರು. ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಪ್ರಯೋಜನವಾಗಿಲ್ಲ. ಆ ವೇಳೆಗಾಗಲೇ, ಯುವತಿ ಸಾವನ್ನಪ್ಪಿದ್ದಾಳೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...