ದಿ ಕೇರಳ ಸ್ಟೋರಿ | ʼಕಾಲ್ಪನಿಕ ಕಥೆʼ ಎಂದು ಅಳವಡಿಸಲು ಸುಪ್ರೀಂಕೋರ್ಟ್‌ ಸೂಚನೆ

Date:

  • ಪಶ್ಚಿಮ ಬಂಗಾಳ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ತಡೆ
  • ʻಡಿಸ್‌ಕ್ಲೈಮರ್‌ನಲ್ಲಿ ಕಾಲ್ಪನಿಕ ಕಥೆ ಎಂದು ಸ್ಪಷ್ಟಪಡಿಸಿʼ

ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ʻಕೇರಳದಲ್ಲಿ 32,000 ಮಹಿಳೆಯರನ್ನು ಮೋಸದಿಂದ ಇಸ್ಲಾಂಗೆ ಮತಾಂತರ ಮಾಡಲಾಗಿದೆ ಮತ್ತು ಐಸಿಸ್‌ಗೆ ನೇಮಕ ಮಾಡಲಾಗಿದೆʼ ಎಂದು ಹೇಳಿರುವುದನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ಪಶ್ಚಿಮ ಬಂಗಾಳದಲ್ಲಿ ಸಿನಿಮಾ ಪ್ರದರ್ಶನದ ಮೇಲಿನ ನಿಷೇಧ ಮತ್ತು ತಮಿಳುನಾಡಿನಲ್ಲಿ ಪರೋಕ್ಷ ನಿಷೇಧದ ವಿರುದ್ಧ ‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ಡಿವಾಲಾ ಅವರನ್ನು ಒಳಗೊಂಡ ನ್ಯಾಯಪೀಠವು ʼಈ ಸಿನಿಮಾದ  ಕಥೆಯು ಕಲ್ಪನೆಯ ಆವೃತ್ತಿಯನ್ನು ಪ್ರತಿನಿಧಿಸುತ್ತದೆ ಎಂಬುದನ್ನು ಡಿಸ್‌ಕ್ಲೈಮರ್‌ನಲ್ಲಿ ಸ್ಪಷ್ಟಪಡಿಸಿʼ ಎಂದು ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʻಮತಾಂತರ ಮಾಡಲಾದ ಮಹಿಳೆಯರ ಸಂಖ್ಯೆಯು 32 ಸಾವಿರ ಎಂದು ಹೇಳಲು ಯಾವುದೇ ಅಧಿಕೃತ ದಾಖಲೆಗಳು ಲಭ್ಯವಿಲ್ಲ ಅಥವಾ ಬೇರೆ ಯಾವುದೇ ನಿಖರ ಅಂಕಿ ಅಂಶಗಳಿಲ್ಲ ಎಂಬುದನ್ನು ಮೇ 20ರಂದು ಸಂಜೆ 5 ಗಂಟೆಯ ಒಳಗಾಗಿ ಚಿತ್ರದ ಡಿಸ್‌ಕ್ಲೈಮರ್‌ನಲ್ಲಿ ಸ್ಪಷ್ಟಪಡಿಸಿʼ ಎಂದು ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ?: ಲೋಕಸಭಾ ಚುನಾವಣೆ | ಕಾಂಗ್ರೆಸ್ ಪ್ರಬಲವಾಗಿರುವಲ್ಲಿ ಬೆಂಬಲಿಸಲು ಸಿದ್ಧ; ಮಮತಾ ಬ್ಯಾನರ್ಜಿ

ನಿಷೇಧಕ್ಕೆ ತಡೆ

‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ಗುರುವಾರ ಸುಪ್ರೀಂಕೋರ್ಟ್ ತಡೆ ನೀಡಿದೆ. ʻಸಾರ್ವಜನಿಕರ ಅಸಹಿಷ್ಣುತೆಗೆ ಶಾಸನಬದ್ಧ ನಿಬಂಧನೆಗಳನ್ನು ಬಳಸಲಾಗದುʼಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ.

ʻಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆʼ ಎಂದು ನ್ಯಾಯಪೀಠ ಹೇಳಿದೆ. ʻಚಿತ್ರ ಪ್ರದರ್ಶನವಾಗುತ್ತಿರುವ ಚಿತ್ರಮಂದಿರಗಳಲ್ಲಿ ಸಾಕಷ್ಟು ಭದ್ರತೆ ಒದಗಿಸಬೇಕು ಮತ್ತು ಪ್ರೇಕ್ಷಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಾದ ವ್ಯವಸ್ಥೆಗಳನ್ನು ಮಾಡಬೇಕುʼ ಎಂದು ಪೀಠ ನಿರ್ದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...