ಮೊದಲ ಮಳೆಗೆ ಸೋರಲು ಆರಂಭಿಸಿದ ಅಯೋಧ್ಯೆಯ ರಾಮಮಂದಿರದ ಛಾವಣಿ!

Date:

ಭಾರೀ ಪ್ರಚಾರದೊಂದಿಗೆ ಪ್ರಧಾನಿ ನರೇಂದ್ರ ಮೋದಿ 2024ರ ಜ.22ರಂದು ಅಯೋಧ್ಯೆಯಲ್ಲಿ ಉದ್ಘಾಟಿಸಿದ್ದ ರಾಮಮಂದಿರ ಮತ್ತೆ ಸುದ್ದಿಯಲ್ಲಿದೆ. ಉತ್ತರ ಪ್ರದೇಶದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಅಯೋಧ್ಯೆಯಲ್ಲೂ ಕೂಡ ಮೊದಲ ಮಳೆ ಸುರಿದಿದೆ. ಈ ಮೊದಲ ಮಳೆಗೆ ರಾಮಮಂದಿರದ ಛಾವಣಿಯಲ್ಲಿ ನೀರು ಸೋರಲು ಆರಂಭಗೊಂಡಿರುವುದಾಗಿ ವರದಿಯಾಗಿದೆ.

ಅಲ್ಲದೇ, ಈ ಬಗ್ಗೆ ANI ಸುದ್ದಿಸಂಸ್ಥೆಗೂ ಅಧಿಕೃತ ಹೇಳಿಕೆ ನೀಡಿರುವ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು, “ಅಯೋಧ್ಯೆಯಲ್ಲಿ ಸುರಿದ ಮೊದಲ ಮಳೆಗೆ ಈಗಾಗಲೇ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಸ್ಥಳದಲ್ಲೂ ನೀರು ಸೋರಿಕೆಯಾಗಿದೆ” ಎಂದು ಬಹಿರಂಗಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮ ಮಂದಿರ ನಿರ್ಮಾಣ ಕಾಮಗಾರಿ ಕುರಿತು ಮಾತನಾಡುತ್ತಿದ್ದ ವೇಳೆ ಈ ವಿಚಾರವನ್ನು ಅವರು ಬಹಿರಂಗಪಡಿಸಿದ್ದು, “ಜುಲೈ 2025ರೊಳಗೆ ರಾಮಮಂದಿರದ ಕಾಮಗಾರಿ ಪೂರ್ಣಗೊಳಿಸುವುದು ಅಸಾಧ್ಯ. ಮೊದಲ ಮಳೆಗೆ ರಾಮಲಲ್ಲಾ ಕುಳಿತಿರುವ ಸ್ಥಳದಲ್ಲೇ ನೀರು ಬರಲು ಆರಂಭಿಸಿದೆ. ಹಾಗಾಗಿ, ಇದು ಯಾಕೆ ಹೀಗಾಯಿತು ಎಂಬುದರ ಬಗ್ಗೆ ಸಂಬಂಧಪಟ್ಟವರು ಉತ್ತರಿಸಬೇಕು. ಈಗಾಗಲೇ ನಡೆಸಿರುವ ಕಾಮಗಾರಿಯ ಬಗ್ಗೆ ತನಿಖೆ ಕೂಡ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ayodhya 1
ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಛಾವಣಿ ಸೋರುತ್ತಿರುವ ಫೋಟೋ

“ಈಗಾಗಲೇ ನಿರ್ಮಿಸಿರುವ ರಾಮ ಮಂದಿರದಲ್ಲಿ ನೀರು ಹೊರಹೋಗಲು ಸರಿಯಾದ ದಾರಿ ಇಲ್ಲ. ಈ ಸಮಸ್ಯೆ ಬಹಳ ದೊಡ್ಡದು, ಮೊದಲು ಈ ಸಮಸ್ಯೆ ಬಗೆಹರಿಸಬೇಕು ಎಂದರು. ದೇಗುಲ ನಿರ್ಮಾಣಕ್ಕೆ ಸಂಬಂಧಿಸಿದಂತೆ 2025ರಲ್ಲಿ ಸಂಪೂರ್ಣ ದೇಗುಲ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಹೇಳುತ್ತಿದ್ದಾರೆ. ಆದರೆ ಅದು ಒಳ್ಳೆಯದೇ. ಆದರೆ ಒಂದು ವರ್ಷದಲ್ಲಿ ಪೂರ್ಣಗೊಳಿಸುವುದು ಅಸಾಧ್ಯ ಎಂಬುದು ನನ್ನ ಅನಿಸಿಕೆ” ಎಂದು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.

ರಾಮಮಂದಿರದಲ್ಲಿನ ಪ್ರಸ್ತುತ ಸಮಸ್ಯೆಯ ಬಗ್ಗೆ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನೀಡಿರುವ ಹೇಳಿಕೆಯು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ರಾಮಮಂದಿರದ ಕಾಮಗಾರಿಯಲ್ಲಿ ಲೋಪ ಹಾಗೂ ಭ್ರಷ್ಟಾಚಾರದ ವಾಸನೆ ಬಡಿದಿದೆ. ಈ ವಿಚಾರವು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡುವ ಸಾಧ್ಯತೆಗಳಿವೆ.

ಇದೇ ವರ್ಷದ ಜ.22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮ ಪ್ರಾಣಪ್ರತಿಷ್ಠೆ ಸಮಾರಂಭ ಜರುಗಿತ್ತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನಡೆದಿತ್ತು. ಆದರೆ ಇದು 2024ರ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿಗೆ ಯಾವುದೇ ಲಾಭ ನೀಡಿರಲಿಲ್ಲ.

ಅಯೋಧ್ಯೆ ಇರುವ ಫೈಝಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಬಿಜೆಪಿಯ ಸೋಲಿನಿಂದ ಸಂಘಪರಿವಾರ, ಬಲಪಂಥೀಯರ ಸಹಿತ ಬಿಜೆಪಿಯ ಬೆಂಬಲಿಗರು ಆಘಾತಕ್ಕೊಳಗಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...