ಬಾಬಾ ಸಿದ್ದೀಕಿ ಸತ್ತಿದ್ದಾರೆಂದು ದೃಢಪಡಿಸಿಕೊಳ್ಳಲು ಆಸ್ಪತ್ರೆ ಬಳಿಯೇ 30 ನಿಮಿಷ ಕಾದುಕುಳಿತಿದ್ದ ಶೂಟರ್

Date:

ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಗೌತಮ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಸಿದ್ದೀಕಿ ಅವರನ್ನು ಹತ್ಯೆಗೈದ ಬಳಿಕ, ಅವರು ಸತ್ತಿದ್ದಾರೆ ಎಂಬುದನ್ನು ದೃಢಪಡಿಸಿಕೊಳ್ಳಲು ಲೀಲಾವತಿ ಆಸ್ಪತ್ರೆಯ ಹೊರಗೆಯೇ ಸುಮಾರು 30 ನಿಮಿಷಗಳ ಕಾಲ ಕಾದುಕುಳಿತಿದ್ದ ಎಂಬುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಸಿದ್ದೀಕಿ ಅವರ ಮೆಲೆ ಗುಂಡಿನ ದಾಳಿ ನಡೆಸಿದ ಶೂಟರ್, ತಕ್ಷಣವೇ ತನ್ನ ಅಂಗಿಯನ್ನು ಬದಲಾಯಿಸಿದ್ದಾನೆ. ಆಸ್ಪತ್ರೆಯ ಹೊರಗೆ 30 ನಿಮಿಷಗಳ ಕಾಲ ಜನರ ಗುಂಪಿನ ನಡುವೆ ನಿಂತಿದ್ದಾಗಿಯೂ, ಅವರು ಬದುಕುಳಿಯುವುದಿಲ್ಲ ಎಂಬುದು ಖಚಿತವಾದ ಬಳಿಕ, ಅಲ್ಲಿಂದ ತೆರಳಿದ್ದಾಗಿಯೂ ತಿಳಿಸಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.

ಅಕ್ಟೋಬರ್ 12ರಂದು ರಾತ್ರಿ 9:11ರಲ್ಲಿ ಮುಂಬೈನ ಬಾಂದ್ರಾದಲ್ಲಿ ಸಿದ್ದೀಕಿ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಎದೆಗೆ ಎರಡು ಗುಂಡುಗಳು ತಗುಲಿದ್ದ ಅವರನ್ನು, ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಸ್ಪಂದಿಸದೆ ಅವರು ಸಾವನ್ನಪ್ಪಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಹೇಳುವಂತೆ, ಅವರ ಆರಂಭಿಕ ಯೋಜನೆಯಂತೆ ಆರೋಪಿಗಳು ತಮ್ಮ ಸಹಚರರಾದ ಧರ್ಮರಾಜ್ ಕಶ್ಯಪ್ ಮತ್ತು ಗುರ್ಮೈಲ್ ಸಿಂಗ್ ಅವರನ್ನು ಉಜ್ಜಯಿನಿ ರೈಲು ನಿಲ್ದಾಣದಲ್ಲಿ ಭೇಟಿಯಾಗಬೇಕಿತ್ತು. ಅಲ್ಲಿಂದ ಅವರನ್ನು ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರೊಬ್ಬರು ವೈಷ್ಣೋ ದೇವಿಗೆ ಕರೆದೊಯ್ಯಬೇಕಿತ್ತು. ಆದರೆ, ಕಶ್ಯಪ್ ಮತ್ತು ಸಿಂಗ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದರಿಂದ ಅವರ ಯೋಜನೆ ವಿಫಲವಾಗಿದೆ.

ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಿದ್ದು ಹೇಗೆ?

ಸಿದ್ದೀಕಿ ಮೇಲೆ ದುಂಡಿನ ದಾಳಿ ನಡೆಸಿದ ಗೌತಮ್, ಬಳಿಕ ಕುರ್ಲಾಗೆ ತೆರಳಿದ್ದಾನೆ. ಅಲ್ಲಿಂದ, ಥಾಣೆಗೆ ರೈಲಿನಲ್ಲಿ ತೆರಳಿದ್ದಾನೆ. ಬಳಿಕ, ಪುಣೆಗೆ ಹೋಗಿದ್ದಾನೆ. ಅಲ್ಲಿ ಆತ ತನ್ನ ಬಳಿಯಿದ್ದ ಫೋನ್‌ಅನ್ನು ಬಿಸಾಡಿದ್ದಾನೆ. ಏಳು ದಿನಗಳ ಕಾಲ ಪುಣೆಯಲ್ಲಿಯೇ ಉಳಿದಿದ್ದ ಗೌತಮ್, ನಂತರ ಉತ್ತರ ಪ್ರದೇಶದ ಝಾನ್ಸಿ ಮತ್ತು ಲಕ್ನೋಗೆ ಹೋಗಿದ್ದಾನೆ. ಭಾನುವಾರ, ಉತ್ತರ ಪ್ರದೇಶದ ನನ್ಪಾರಾ ಪಟ್ಟಣದಿಂದ ಸುಮಾರು 10 ಕಿಮೀ ದೂರದಲ್ಲಿರುವ ತೀರಾ ಹಿಂದುಳಿದ ಕುಗ್ರಾಮದಲ್ಲಿ ಆತ ಬಚ್ಚಿಟ್ಟುಕೊಂಡಿದ್ದ. ಆತನನ್ನು ಅಲ್ಲಿ ಪೊಲೀಸರು ಬಂಧಿಸಿದ್ದಾರೆ.

ಗೌತಮ್‌ನ ನಾಲ್ವರು ಸ್ನೇಹಿತರ ಮೊಬೈಲ್ ಫೋನ್‌ಗಳಲ್ಲಿ ನಡೆದಿದ್ದ ತಡರಾತ್ರಿಯ ಸಂಭಾಷಣೆಗಳು ಅನುಮಾನ ಹುಟ್ಟುಹಾಕಿದ್ದವು. ಲಕ್ನೋದಲ್ಲಿ ಖರೀದಿಸಿದ ಮೊಬೈಲ್ ಫೋನ್‌ಗಳಲ್ಲಿ ಇಂಟರ್ನೆಟ್ ಕರೆಗಳ ಮೂಲಕ ಗೌತಮ್‌ನೊಂದಿಗೆ ಅವರು ನಿರಂತರ ಸಂಪರ್ಕದಲ್ಲಿದ್ದರು. ಮುಂಬೈ ಕ್ರೈಂ ಬ್ರಾಂಚ್ ಮತ್ತು ಉತ್ತರ ಪ್ರದೇಶ ಪೊಲೀಸ್ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಪ್ರಮುಖ ಆರೋಪಿ ಗೌತಮ್‌ನನ್ನು ಬಂಧಿಸುವಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದವು. ಗೌತಮ್‌ನ ಸಹಚರ ಅನುರಾಗ್ ಕಶ್ಯಪ್, ಜ್ಞಾನ್ ಪ್ರಕಾಶ್ ತ್ರಿಪಾಠಿ, ಆಕಾಶ್ ಶ್ರೀವಾಸ್ತವ ಹಾಗೂ ಅಖಿಲೇಂದ್ರ ಪ್ರತಾಪ್ ಸಿಂಗ್ ಎಂಬ ಆರೋಪಿಗಳನ್ನು ನೇಪಾಳ ಗಡಿಯ ಬಳಿ ಬಂಧಿಸಿದ್ದಾರೆ.

ಈ ನಾಲ್ವರು ಸಹಚರರು ಪ್ರಮುಖ ಆರೋಪಿ ಗೌತಮ್‌ ದೇಶದಿಂದ ಪರಾರಿಯಾಗಲು ಸಹಾಯ ಮಾಡಲು ಯೋಜಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...