ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸುವಂತೆ ಹೇಳಿದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಮಹಿಳೆ

Date:

  • ಲಗೇಜ್‌ ತೂಕ 22 ಕೆಜಿ ಇದ್ದ ಕಾರಣ ಹೆಚ್ಚುವರಿ ಹಣ ಪಾವತಿ ಮಾಡಿ ಎಂದ ಸಿಬ್ಬಂದಿ
  • ಪರಿಶೀಲನೆ ವೇಳೆ ಬ್ಯಾಗ್‌ನಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸುವಂತೆ ಹೇಳಿದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಮಹಿಳೆಯೊಬ್ಬರು ಹೈಡ್ರಾಮಾ ಮಾಡಿದ ಘಟನೆ ನಡೆದಿದೆ.

40 ವರ್ಷದ ಗೃಹಿಣಿಯೊಬ್ಬರು ಕಳೆದ ಸೋಮವಾರ ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.

ಮುಂಬೈ-ಕೋಲ್ಕತ್ತಾ ವಿಮಾನದ ಚೆಕ್-ಇನ್ ಕೌಂಟರ್ ತಲುಪಿದ ಬಳಿಕ ಏರ್‌ಪೋರ್ಟ್‌ ಸಿಬ್ಬಂದಿಗೆ ಮಹಿಳೆಯೂ ತಮ್ಮ ಬೋರ್ಡಿಂಗ್ ಪಾಸ್‌ ಜತೆಗೆ ಎರಡು ಬ್ಯಾಗಗಳನ್ನು ನೀಡಿದ್ದಾರೆ. ಈ ವೇಳೆ, ಅವರ ಲಗೇಜ್‌ ತೂಕ 22 ಕೆಜಿ ಇದ್ದ ಕಾರಣ ಸಿಬ್ಬಂದಿ ಹೆಚ್ಚುವರಿ ಹಣ ಪಾವತಿ ಮಾಡಿ ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏರ್‌ಲೈನ್ಸ್‌ನ ನಿಯಮಗಳ ಪ್ರಕಾರ, ಗರಿಷ್ಠ 15 ಕೆಜಿ ತೂಕದ ಒಂದು ಬ್ಯಾಗ್​ ಅನ್ನು ಮಾತ್ರ ಪ್ರಯಾಣಿಕರು ತಮ್ಮ ಜತೆಗೆ ಉಚಿತವಾಗಿ ತೆಗೆದುಕೊಂಡು ಹೋಗಬಹುದು. ಆದರೆ, ಮಹಿಳೆಯ ಬ್ಯಾಗ್‌ನ ತೂಕ 22 ಕೆಜಿ ಇದ್ದ ಹಿನ್ನೆಲೆ, ಸಿಬ್ಬಂದಿ ಹೆಚ್ಚುವರಿ ಹಣ ಪಾವತಿಸುವಂತೆ ಕೇಳಿದ್ದಾರೆ.

ಮಹಿಳೆಯೂ ಹೆಚ್ಚುವರಿ ಹಣ ಪಾವತಿ ಮಾಡಲು ನಿರಾಕರಿಸಿದ್ದು, ಪ್ರತಿಯಾಗಿ ಸಿಬ್ಬಂದಿ ಜತೆಗೆ ಕೆಲ ಸಮಯ ವಾಗ್ವಾದಕ್ಕೆ ಇಳಿದಿದ್ದಾರೆ. ಈ ವೇಳೆ, ತಮ್ಮ ಬ್ಯಾಗ್‌ನಲ್ಲಿ ಬಾಂಬ್‌ ಇರುವುದಾಗಿ ಹೇಳಿದ್ದಾರೆ.

ಮಹಿಳೆಯ ಈ ಹೇಳಿಕೆಯೂ ಕೆಲ ಸಮಯ ಸಿಬ್ಬಂದಿ ಸೇರಿದಂತೆ ಪ್ರಯಾಣಿಕರಲ್ಲಿಯೂ ಆತಂಕದ ವಾತಾವರಣ ಸೃಷ್ಠಿ ಮಾಡಿತ್ತು. ಈ ಮಾತನ್ನು ಆಲಿಸಿದ ಕರ್ತವ್ಯ ನಿರತ ಭದ್ರತಾ ಪಡೆ ಸಿಬ್ಬಂದಿ ಮಹಿಳೆಯ ಬ್ಯಾಗ್‌ ಅನ್ನು ಪರಿಶೀಲಿಸಿದರು. ಆದರೆ ಬ್ಯಾಗ್‌ನಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ.

ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆಗೆ ಬಿಬಿಎಂಪಿ ಸಿದ್ಧತೆ | ಜು. 21ರಿಂದ ಮತದಾರರ ಪಟ್ಟಿ ಪರಿಷ್ಕರಣೆ

ನಂತರ ಮಹಿಳೆಯನ್ನು ಏರ್‌ಪೋರ್ಟ್‌ ಸಿಬ್ಬಂದಿ ಸಹರಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಹಿಳೆಯ ವಿರುದ್ಧ ಜೀವ ಮತ್ತು ಇತರರ ಸುರಕ್ಷತೆಗೆ ಧಕ್ಕೆ ಆರೋಪದ ಮೇಲೆ ಎಫ್‍ಐಆರ್ ದಾಖಲಿಸಿದ್ದು, ಕೋರ್ಟ್ ಮುಂದೆ ಹಾಜರುಪಡಿಸಿ ಮಹಿಳೆಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸಹರಾ ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ಗುರುತನ್ನು ಗೌಪ್ಯತೆಯ ಕಾರಣದಿಂದಾಗಿ ಪೊಲೀಸರು ಬಿಡುಗಡೆ ಮಾಡಿಲ್ಲ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...