ದೇವರ ಹುಂಡಿಯಲ್ಲಿ 5 ಸಾವಿರ ರೂ. ಕದ್ದ ಕಳ್ಳ; ಕಾಣಿಕೆಯಾಗಿ ದೇವರ ಪಾದಕ್ಕೆ ಎಷ್ಟು ಹಣವಿಟ್ಟ ಗೊತ್ತಾ?

Date:

ಕಳ್ಳರು ಯಾವುದೇ ಜಾಗಕ್ಕೆ ಕಳ್ಳತನಕ್ಕೆ ಹೋದರೂ ಜಾಗರೂಕರಾಗಿರುತ್ತಾರೆ. ಆದರೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಕದಿಯುವುದಕ್ಕೆ ಹೋದಾಗ ಭಯಭಕ್ತಿ ಹೆಚ್ಚಾಗಿ ಕಾಡುತ್ತದೆ. ದೇವಸ್ಥಾನದ ವಸ್ತು ಕಳವು ಮಾಡಿದರೂ ಕೆಲವೊಮ್ಮೆ ಕ್ಷಮಾಪಣೆ, ತಪ್ಪೊಪ್ಪಿಗೆ ಸಲ್ಲಿಸುವುದುಂಟು. ಅಲ್ಲದೆ ದೇವರು ಶಿಕ್ಷೆ ಕೊಡುತ್ತಾನೆ ಎಂಬ ಭಯದಿಂದ ಕಳ್ಳತನವನ್ನು ನಿರಾಕರಿಸುವ ಸಾಧ್ಯತೆಯು ಇರುತ್ತದೆ. ಈಗ ಅದೇ ರೀತಿಯ ಒಂದು ಘಟನೆ ಹರಿಯಾಣ ರಾಜ್ಯದ ದೇವಸ್ಥಾನವೊಂದರಲ್ಲಿ ನಡೆದಿದೆ.

ಹರಿಯಾಣದ ರೇವಾರಿ ಜಿಲ್ಲೆಯ ಹನುಮಾನ್ ದೇವಸ್ಥಾನದೊಳಗೆ ಕಳ್ಳನೊಬ್ಬ ಹಗಲಿನ ವೇಳೆಯೆ ನುಗ್ಗಿದ್ದಾನೆ. ಹಲವು ಭಕ್ತರ ನಡುವೆಯೆ ದೇವರ ಮುಂದೆ ಕುಳಿತ ಕಳ್ಳ ಸುಮಾರು 10 ನಿಮಿಷ ಭಕ್ತಿಯಿಂದ ಹನುಮಾನ್ ಚಾಲೀಸಾವನ್ನು ಪಠಿಸಿದ್ದಾನೆ. ಅರ್ಚಕರ ಸಮ್ಮುಖದಲ್ಲಿಯೇ ದೇವರ ಪಾದಗಳಿಗೆ 10 ರೂಪಾಯಿಗಳನ್ನು ಅರ್ಪಿಸುತ್ತಾನೆ.

ಈ ಸುದ್ದಿ ಓದಿದ್ದೀರಾ? ಪುರುಷತ್ವ ಪರೀಕ್ಷೆಗೆ ರಕ್ತದ ಮಾದರಿ ಬಳಸಿ, ಎರಡು ಬೆರಳು ಪರೀಕ್ಷೆ ನಿಲ್ಲಿಸಿ: ಮದ್ರಾಸ್‌ ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವಾಸ್ಥಾನದಲ್ಲಿದ್ದ ಹತ್ತಾರು ಭಕ್ತರು ಪ್ರಾರ್ಥನೆ ಸಲ್ಲಿಸುವ ಸಮಯದಲ್ಲಿ ಕಾಣಿಕೆ ಡಬ್ಬಿ ಬಳಿ ಹೋದ ಕಳ್ಳ ಯಾರ ಗಮನಕ್ಕೂ ಬಾರದಂತೆ ದೇವರ ಹುಂಡಿಯನ್ನು ಹೊಡೆದು 5 ಸಾವಿರ ರೂ ದೋಚಿ ಪರಾರಿಯಾಗಿದ್ದಾನೆ. ಕಳ್ಳತನ ನಡೆದಿರುವುದು ತಿಳಿಯದ ಅರ್ಚಕರು ರಾತ್ರಿ ದೇವಸ್ಥಾನದ ಬಾಗಿಲು ಮುಚ್ಚಿ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಹಿಂತಿರುಗಿ ನೋಡಿದಾಗ ಕಾಣಿಕೆ ಡಬ್ಬಿಯ ಬೀಗ ಮುರಿದಿರುವುದು ಕಂಡುಬಂದಿದೆ.

ತಕ್ಷಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೇಗುಲಕ್ಕೆ ಆಗಮಿಸಿ ವಿಚಾರಣೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ನಿಜಾಂಶ ಬೆಳಕಿಗೆ ಬಂದಿದೆ. ದೃಶ್ಯಗಳಲ್ಲಿ ಕಳ್ಳನ ಎಲ್ಲ ಚಲನವಲನಗಳು ದಾಖಲಾಗಿದೆ. ಕಳ್ಳತನಕ್ಕೆ ಮೊದಲು ಮೊದಲು ಹನುಮಾನ್ ಚಾಲೀಸಾವನ್ನು ಪಠಿಸುತ್ತಾ ದೇವರ ಪಾದಗಳಿಗೆ ದುಡ್ಡನ್ನು ಅರ್ಪಿಸುತ್ತಿರುವುದು ದಾಖಲಾಗಿದೆ.

ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆತನ ಪತ್ತೆಗೆ ಶೋಧ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...