ಕೇರಳ | ತನ್ನ ಅಂಗಡಿಯಿಂದ ವಸ್ತು ಕದ್ದಾತನಿಗೆ ‘ಮೀಸೆ ಮಾಧವನ್’ ಪ್ರಶಸ್ತಿ ನೀಡಿ ಅಭಿನಂದಿಸಿದ ಮಾಲೀಕ!

Date:

ತನ್ನ ಅಂಗಡಿಯಿಂದ ಆಹಾರ ಪದಾರ್ಥವೊಂದನ್ನು ಕದ್ದಿದ್ದ ಯುವಕನೋರ್ವನಿಗೆ ಆ ಅಂಗಡಿಯ ಮಾಲೀಕ ‘ಮೀಸೆ ಮಾಧವನ್’ ಪ್ರಶಸ್ತಿ ನೀಡಿ ಅಭಿನಂದಿಸಿದ ಘಟನೆ ಕೇರಳದ ಕಡಕ್ಕವೂರಿನಲ್ಲಿಮ ಚಿರಯಿನ್‌ಕೀಜುವಿನಲ್ಲಿ ನಡೆದಿದೆ.

ಇತ್ತೀಚೆಗೆ ಯುವಕನೋರ್ವ ಅನೀಶ್ ಎಂಬವರ ಕಡಕ್ಕವೂರಿನಲ್ಲಿರುವ ಆದಿತ್ಯ ಬೇಕರಿ ಮತ್ತು ಫಾಸ್ಟ್ ಫುಡ್‌ ಅಂಗಡಿಯಿಂದ 500 ರೂ. ಮೌಲ್ಯದ ಆಹಾರ ಪ್ಯಾಕೆಟ್‌ ಕದ್ದು, ಪರಾರಿಯಾಗಿದ್ದ. ಈ ಘಟನೆ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಕೆಲವು ದಿನಗಳ ನಂತರ ಕದ್ದಿದ್ದಾತನ ಮನೆಯ ವಿಳಾಸವನ್ನು ಪತ್ತೆಹಚ್ಚಿದ ಮಾಲೀಕ ಅನೀಶ್, ಆತನ ಮನೆಯ ತನಕ ಹೋಗಿ ‘ಮೀಸೆ ಮಾಧವನ್’ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಪ್ರಶಸ್ತಿ ಫಲಕದಲ್ಲಿ ಘಟನೆಯ ಸಿಸಿಟಿವಿಯ ಚಿತ್ರವನ್ನು ಹಾಕಲಾಗಿದೆ.

ಇದನ್ನು ಓದಿದ್ದೀರಾ? ದಾವಣಗೆರೆ | ಕೇಂದ್ರ ಚುನಾವಣಾ ಆಯೋಗರಿಂದ ನಾಗರೀಕರ ಪೌರತ್ವದ ಕಳ್ಳತನ, ಮತಗಳ್ಳತನ; ಎಸ್ ಯುಸಿಐ ಸದಸ್ಯೆ ಅಪರ್ಣಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ರಾತ್ರಿ ವೇಳೆ ಯುವಕನೊಬ್ಬ ಬೈಕ್‌ನಲ್ಲಿ ಬಂದು ಅಂಗಡಿಗೆ ನುಗ್ಗಿ ಸ್ವಲ್ಪ ಆಹಾರ ತಿಂದು, ಬಳಿಕ ಆಹಾರ ಪ್ಯಾಕೆಟ್ ಒಂದನ್ನು ಕದ್ದು ಪರಾರಿಯಾಗಿದ್ದ. ಅನುಮಾನಗೊಂಡ ಸ್ಥಳೀಯರು ಅನೀಶ್ ಮತ್ತು ಅವರ ಪತ್ನಿಗೆ ಮಾಹಿತಿ ನೀಡಿದ್ದರು. ದಂಪತಿ ಬೇಕರಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಪರಿಶೀಲಿಸಿದಾಗ ಕಳ್ಳತನವಾಗಿರುವುದು ತಿಳಿದುಬಂದಿದೆ.

ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ಅನೀಶ್ ಆ ಯುವಕನ ಮಾಹಿತಿ ಪತ್ತೆ ಹಚ್ಚಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುವ ಬದಲು ಅನೀಶ್ ಮತ್ತು ಅವರ ತಂಡವು ಯುವಕನಿಗೆ ಪ್ರಶಸ್ತಿ ನೀಡಿದೆ. “ಚತುರ ಕಳ್ಳನಾದ” ಕಾರಣ ಯುವಕನಿಗೆ ‘ಮೀಸೆ ಮಾಧವನ್’ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಮಲಯಾಳಂ ನಟ ದಿಲೀಪ್ ಅಭಿನಯಿಸಿದ್ದ ‘ಮೀಸೆ ಮಾಧವನ್’ ಚಿತ್ರದ ಹೆಸರನ್ನು ಪ್ರಶಸ್ತಿಯನ್ನು ನೀಡುವಾಗ ಬಳಸಿದ್ದಾರೆ. ‘ಮೀಸೆ ಮಾಧವನ್’ ಆಗಿ ನಟಿಸಿದ್ದ ದಿಲೀಪ್, ಊರಿನಲ್ಲಿ ಕಳ್ಳನ ಪಾತ್ರ ನಿರ್ವಹಿಸಿದ್ದರು.

ಸದ್ಯ ಈ ಘಟನೆಯ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈವರೆಗೂ ಯುವಕನ ಸಾಮಾಜಿಕ ಹಿನ್ನೆಲೆ, ಆರ್ಥಿಕ ಸ್ಥಿತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...