ಉತ್ತರ ಪ್ರದೇಶ | ಒಬ್ಬನೇ ವೈದ್ಯನ ಹೆಸರಿನಲ್ಲಿ 83 ಅಸ್ಪತ್ರೆಗಳ ನೋಂದಣಿ!

Date:

ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶ ರಾಜ್ಯದಲ್ಲಿ ವಿಚಿತ್ರ ಹಗರಣಗಳು ಬೆಳಕಿಗೆ ಬರುತ್ತಿವೆ. ಇತ್ತೀಚಿಗೆ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳ ಪರವಾನಗಿ ನವೀಕರಣ ಅರ್ಜಿಗಳ ಪರಿಶೀಲನೆಯ ಸಂದರ್ಭದಲ್ಲಿ ಬಯಲುಗೊಂಡ ಹಗರಣ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಪ್ರದೇಶ ರಾಜ್ಯದ ಆಗ್ರಾ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ 449 ವೈದ್ಯಕೀಯ ಸಂಸ್ಥೆಗಳನ್ನು ಕೇವಲ 15 ವೈದ್ಯರು ಕಾನೂನುಬಾಹಿರವಾಗಿ ನಡೆಸುತ್ತಿದ್ದಾರೆ. ಅವರಲ್ಲಿ ಒಬ್ಬನೇ ವೈದ್ಯ ಮೀರತ್, ಕಾನ್ಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಸುಮಾರು 83 ಆಸ್ಪತ್ರೆಗಳನ್ನು ತಮ್ಮ ಹೆಸರಿನಲ್ಲಿ ನೋಂದಾಯಿಸಿಕೊಂಡಿದ್ದಾನೆ.

ಹಗರಣಗಳಲ್ಲಿ ಭಾಗಿಯಾದ ವೈದ್ಯರ ಪಟ್ಟಿಯಲ್ಲಿ, ಹೃದ್ರೋಗ, ಮಕ್ಕಳ ತಜ್ಞರು ಮತ್ತು ಶಸ್ತ್ರಚಿಕಿತ್ಸಕರು ಸೇರಿದ್ದಾರೆ. ರಾಜ್ಯ ಆರೋಗ್ಯ ಇಲಾಖೆಯ ದಾಖಲೆಗಳ ಪ್ರಕಾರ, 2022-2023ರಲ್ಲಿ 1,269 ವೈದ್ಯಕೀಯ ಕೇಂದ್ರಗಳನ್ನು ನೋಂದಾಯಿಸಲಾಗಿದೆ. ಇವುಗಳಲ್ಲಿ 494 ಆಸ್ಪತ್ರೆಗಳು, 493 ಕ್ಲಿನಿಕ್‌ಗಳು, 170 ಪೆಥಾಲಜಿ ಲ್ಯಾಬ್‌ಗಳು, 104 ಡಯಾಗ್ನೋಸ್ಟಿಕ್ ಸೆಂಟರ್‌ಗಳು, ಏಳು ಮಾದರಿ ಸಂಗ್ರಹ ಕೇಂದ್ರಗಳು ಮತ್ತು ಒಂದು ಡಯಾಲಿಸಿಸ್ ಕೇಂದ್ರ ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಬಿಜೆಪಿ ಔರಂಗಜೇಬ್‌ನನ್ನು ಗೋರಿಯಿಂದ ಎಬ್ಬಿಸಿದ್ದೇಕೆ?

ಇನ್ನೂ ಪ್ರಮುಖ ಸಂಗತಿ ಏನಂದರೆ, ಅರ್ಹತೆ ಇಲ್ಲದವರು ಆಸ್ಪತ್ರೆಗಳು, ಕ್ಲಿನಿಕ್‌ಗಳು ಮತ್ತು ಪೆಥಾಲಜಿ ಲ್ಯಾಬ್‌ಗಳನ್ನು ನಿರ್ವಹಿಸಲು ಆರೋಗ್ಯ ಇಲಾಖೆಯಿಂದ ವೈದ್ಯರ ಹೆಸರಿನಲ್ಲಿ ಪರವಾನಗಿ ಪಡೆದು ಜನರನ್ನು ವಂಚಿಸುತ್ತಿದ್ದಾರೆ. ಈ ವರ್ಷ ರಾಜ್ಯ ಸರ್ಕಾರವು ಪರವಾನಗಿ ನವೀಕರಣ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿ ಮಾಡಬೇಕೆಂದು ಆದೇಶಿಸಿದ ನಂತರ ಇವೆಲ್ಲ ಹಗರಣ ಬಹಿರಂಗವಾಗಿವೆ.

ಪರವಾನಗಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳು ತರಬೇತಿ ಪಡೆದ ಅರೆವೈದ್ಯಕೀಯ ಸಿಬ್ಬಂದಿ, ಅಗ್ನಿ ಸುರಕ್ಷತಾ ಮಾನದಂಡಗಳ ಅನುಸರಣೆ ಮತ್ತು ವೈದ್ಯಕೀಯ ತ್ಯಾಜ್ಯದ ವಿಲೇವಾರಿಗೆ ಸಂಬಂಧಿಸಿದ ಅಗತ್ಯ ವಿವರಗಳನ್ನು ಒದಗಿಸಿಲ್ಲ. ಹಾಗೆಯೇ ಹಾಸಿಗೆ ಸಾಮರ್ಥ್ಯ ಮತ್ತು ಇತರ ಸೌಲಭ್ಯಗಳ ಬಗ್ಗೆಯೂ ನೀಡಿರುವ ಮಾಹಿತಿಯು ಅನುಮಾನ ಮೂಡಿಸಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಸದ್ಯ ಹಗರಣಗಳಲ್ಲಿ ಭಾಗಿಯಾದ ವೈದ್ಯರಿಗೆ ನೋಟಿಸ್ ಕಳುಹಿಸಲಾಗಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...