ಗುಜರಾತ್ ವಿಮಾನ ದುರಂತದಲ್ಲಿ ಗತಿಸಿದವರು ಹಿಂದಿನ ಜನ್ಮದಲ್ಲಿ ಕಾಡಿಗೆ ಬೆಂಕಿ ಇಟ್ಟಿದ್ದರು: ಬೊಗಳೆ ಶೂರನಿಗೆ ಉಗಿದ ಜನ!

Date:

“ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟ ಎಲ್ಲರ ಹಿಂದಿನ ಜನ್ಮವನ್ನು ನಾನು ನೋಡಿದೆ. ಅವರೆಲ್ಲರೂ ಸೇರಿ ಹಿಂದಿನ ಜನ್ಮದಲ್ಲಿ ಬೆಂಕಿ ಇಟ್ಟಿದ್ದರು. ಬೆಂಕಿ ಇಟ್ಟಿದ್ದರಿಂದ ಗಿಡ ಮರ, ಪ್ರಾಣಿಗಳು, ಆದಿವಾಸಿ ಜನಗಳು ಸೇರಿದಂತೆ ಹಲವರು ಸುಟ್ಟು ಕರಕಲಾಗಿದ್ದರು. ಆ ಕರ್ಮವನ್ನು ನಿವಾರಣೆ ಮಾಡುವುದಕ್ಕಾಗಿ ಅವರೆಲ್ಲರೂ ವಿಮಾನ ಹತ್ತಿದ್ದರು. ಹಾಸ್ಟೆಲ್‌ನಲ್ಲಿ ಊಟ ಮಾಡುತ್ತಿದ್ದ ವಿದ್ಯಾರ್ಥಿಗಳು ಕೂಡ ಹಿಂದಿನ ಜನ್ಮದಲ್ಲಿ ಈ ಕರ್ಮ ಎಸಗಿದ್ದರು. ಪೈಲಟ್ ಮತ್ತು ಗುಜರಾತ್‌ನ ಮಾಜಿ ಸಿಎಂ ಬೆಂಕಿ ಇಟ್ಟವರ ನಾಯಕರಾಗಿದ್ದರು. ಹಾಗಾಗಿ, ಅವರು ಕೂಡ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ.

ಹೀಗಂತ ಒಬ್ಬ ಬೊಗಳೆ ಶೂರ, ತನ್ನನ್ನು ‘ಸೋ ಕಾಲ್ಡ್‌ ಆಧ್ಯಾತ್ಮಿಕ ತಜ್ಞ’ ಎಂದು ಹೇಳಿಕೊಳ್ಳುವ ಡಾ. ಉದಯ್ ಶಾ ಎಂಬಾತ ಬೊಗಳೆ ಬಿಟ್ಟಿದ್ದು, ಸದ್ಯ ಜನರಿಂದ ಸೋಷಿಯಲ್ ಮೀಡಿಯಾಗಳಲ್ಲಿ ಬೈಸಿಕೊಳ್ಳುತ್ತಿದ್ದಾರೆ.

‘The Mystic Journey’ ಎಂಬ ಯೂಟ್ಯೂಬ್‌ ಚಾನೆಲ್‌ನ ನಿರೂಪಕಿಯ ಜೊತೆಗೆ ನಡೆಸಿದ ಪಾಡ್‌ ಕಾಸ್ಟ್‌ ಸಂದರ್ಶನದಲ್ಲಿ ಈ ವ್ಯಕ್ತಿ ಈ ರೀತಿಯ ಹೇಳಿಕೆ ನೀಡಿದ್ದಾನೆ. ಇದು ಈಗ ಜನರ ಕೆಂಗಣ್ಣಿಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಮಾನ ದುರಂತದಲ್ಲಿ ವಿಶ್ವಾಸ್ ಕುಮಾರ್ ಎಂಬಾತ ಒಬ್ಬನೇ ಬದುಕಿದ್ದಾನೆ. ಅದು ಹೇಗೆ?” ಎಂದು ನಿರೂಪಕಿ ಕೇಳಿದ್ದಕ್ಕೆ ಉತ್ತರಿಸಿರುವ ಈತ, “ಕಾಡಿಗೆ ಬೆಂಕಿ ಇಡುವ ವೇಳೆ ಈತನೊಬ್ಬ ವಿರೋಧಿಸಿದ್ದ ಹಾಗೂ ಆ ಕೃತ್ಯದಲ್ಲಿ ಪಾಲ್ಗೊಂಡಿರಲಿಲ್ಲ. ಹಾಗಾಗಿ, ಆತ ಪ್ರಾಣಾಪಾಯದಿಂದ ಬಚಾವಾಗಿದ್ದಾನೆ” ಎಂದು ಉದಯ್ ಶಾ ಬೊಗಳೆ ಬಿಟ್ಟಿದ್ದಾನೆ. ಸದ್ಯ ಈತನ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

“ಪ್ರಧಾನ ಮಂತ್ರಿ ಮೋದಿಯವರ ಹಿಂದಿನ ಜನ್ಮವನ್ನೂ ಕೂಡ ನಾನು ನೋಡಿದ್ದೇನೆ. ಅವರು ಭೀಷ್ಮರಾಗಿದ್ದರು. ಬಾಲಿವುಡ್ ನಟರಾದ ಶಾರೂಖ್ ಖಾನ್, ಅಮೀರ್ ಖಾನ್ ಹಾಗೂ ಸಲ್ಮಾನ್ ಖಾನ್ ಅವರ ಹಿಂದಿನ ಜನ್ಮವನ್ನು ನೋಡಿದ್ದೇನೆ. ಅವರೆಲ್ಲರೂ ಹಿಂದಿನ ಜನ್ಮದಲ್ಲಿ ಮೌಲಾನಾಗಳಾಗಿದ್ದರು. ಒಬ್ಬರು ಮದುವೆ ಆಗಿಲ್ಲ, ಇನ್ನೊಬ್ಬರು ಹೆಚ್ಚು ಹೆಚ್ಚು ಮದುವೆ ಆಗಿದ್ದಾರೆ. ನಿಧನರಾಗಿರುವ ನಟ ಸುಶಾಂತ್ ಸಿಂಗ್ ರಜಪೂತ್ ಚಂದ್ರನ ಗ್ರಹದಿಂದ ಬಂದಿದ್ದರು” ಎಂದೆಲ್ಲ ಬೊಗಳೆ ಬಿಟ್ಟಿದ್ದಾರೆ.

ಈತನ ವಿಡಿಯೋ ನೋಡಿ ರೊಚ್ಚಿಗೆದ್ದಿರುವ ನೆಟ್ಟಿಗರು, “ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬ ಇನ್ನೂ ಆ ಆಘಾತದಿಂದ ಚೇತರಿಸಿಕೊಂಡಿಲ್ಲ. ಈತ ಬೊಗಳೆ ಬಿಡುತ್ತಿದ್ದಾನೆ. ಈತನ ವಿರುದ್ಧ ಸರ್ಕಾರವೇ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈತನ ವಿಡಿಯೋವನ್ನು ಟ್ವೀಟ್ ಮಾಡಿರುವ ಖ್ಯಾತ ಪತ್ರಕರ್ತ ಮೊಹಮ್ಮದ್ ಝುಬೇರ್, “ಈತನಿಗೆ ನಮ್ಮ ದೇಶದಲ್ಲಿ ಧೀರೇಂದ್ರ ಶಾಸ್ತ್ರಿ, ಶ್ರೀಶ್ರೀ ಮತ್ತು ಜಗ್ಗಿ ಅವರಿಗಿಂತ ಉಜ್ವಲ ಭವಿಷ್ಯವಿದೆ” ಎನ್ನುವ ಮೂಲಕ ವ್ಯಂಗ್ಯವಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...