97 ಸಂಸದರ ಅನುಪಸ್ಥಿತಿಯ ನಡುವೆ ಲೋಕಸಭೆಯಲ್ಲಿ ಮೂರು ಕ್ರಿಮಿನಲ್ ಮಸೂದೆಗಳ ಅಂಗೀಕಾರ

Date:

ಲೋಕಸಭೆಯಲ್ಲಿ 97 ಸಂಸದರ ಅನುಪಸ್ಥಿತಿಯ ನಡುವೆ ನೂತನ ಕ್ರಿಮಿನಲ್ ಮಸೂದೆಗಳಾದ ಭಾರತೀಯ ನ್ಯಾಯ ಸಂಹಿತೆ,ಭಾರತೀಯ ಸುರಕ್ಷಾ ನಾಗರಿಕ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಸಂಹಿತೆಯನ್ನು ಅಂಗೀಕರಿಸಲಾಯಿತು.

ಐಪಿಸಿ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ(ಸಿಆರ್‌ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಇಂಡಿಯನ್ ಎವಿಡೆನ್ಸ್ ಆಕ್ಟ್  1873ರ ಬದಲಿಗೆ ಭಾರತೀಯ ಸಾಕ್ಷ್ಯ ಸಂಹಿತೆ ಸ್ಥಾನ ತುಂಬಲಿವೆ.

ಮೂರು ಕಾಯ್ದೆಗಳನ್ನು ಅಂಗೀಕರಿಸಿದ ನಂತರ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಮೊದಲು ಐಪಿಸಿಯ ಉದ್ದೇಶವು ನ್ಯಾಯದ ಬದಲು ಶಿಕ್ಷೆ ವಿಧಿಸುವುದಾಗಿತ್ತು. ಇದರ ಬದಲಿಗೆ ಭಾರತೀಯ ನ್ಯಾಯ ಸಂಹಿತೆ 2023 ಕಾಯ್ದೆ ಸದನಗಳಲ್ಲಿ ಅಂಗೀಕಾರದ ನಂತರ ಜಾರಿಗೆ ಬರಲಿದೆ. ಹೊಸ ಕ್ರಿಮಿನಲ್ ಕಾನೂನು ಮಸೂದೆಗಳು ‘ಸಂವಿಧಾನದ ಆತ್ಮಕ್ಕೆ ಅನುಗುಣವಾಗಿ’ ಇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

“ಮೂರು ಹೊಸ ಮಸೂದೆಗಳು ಭಾರತೀಯ ಚಿಂತನೆಯ ಆಧಾರದ ಮೇಲೆ ನ್ಯಾಯ ವ್ಯವಸ್ಥೆಯನ್ನು ಸ್ಥಾಪಿಸಲು ಬಯಸುತ್ತವೆ. ಮೂರು ಪ್ರಸ್ತಾವಿತ ಕ್ರಿಮಿನಲ್ ಕಾನೂನುಗಳು ಜನರನ್ನು ವಸಾಹತುಶಾಹಿ ಮನಸ್ಥಿತಿ ಮತ್ತು ಅದರ ಸಂಕೇತಗಳೊಂದಿಗೆ ಮುಕ್ತಗೊಳಿಸುತ್ತವೆ” ಎಂದು ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಗಳನ್ನು ಅಂಗೀಕರಿಸುವ ಮೊದಲು ಅಮಿತ್ ಶಾ ಹೇಳಿದರು.

‘ಬಡವರಿಗೆ ನ್ಯಾಯ ದೊರಕಿಸುವ ದೊಡ್ಡ ಸವಾಲೆಂದರೆ ಆರ್ಥಿಕ ಸವಾಲು. ಈ ಮೊದಲು ದಿನಾಂಕದಿಂದ ದಿನಾಂಕಕ್ಕೆ ನಡೆಯುತ್ತಲೆ ಇರುತ್ತಿತ್ತು. ಪೊಲೀಸರು ನ್ಯಾಯಾಂಗ ವ್ಯವಸ್ಥೆಯನ್ನು ಹೊಣೆ ಮಾಡುತ್ತಾರೆ. ಸರಕಾರವು ಪೊಲೀಸ್ ಮತ್ತು ನ್ಯಾಯಾಂಗವನ್ನು ಹೊಣೆ ಮಾಡುತ್ತದೆ. ಪೊಲೀಸ್ ಮತ್ತು ನ್ಯಾಯಾಂಗ ವಿಳಂಬಕ್ಕೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಬಾರದು ಎಂಬ ಕಾರಣಕ್ಕೆ ಈಗ ನಾವು ಹೊಸ ಕಾನೂನುಗಳಲ್ಲಿ ಹಲವು ವಿಷಯಗಳನ್ನು ಸ್ಪಷ್ಟಪಡಿಸಿದ್ದೇವೆ. ಮೂರು ಪ್ರಸ್ತಾವಿತ ಕಾನೂನುಗಳು ದೇಶದ್ರೋಹವನ್ನು ಅಪರಾಧವೆಂದು ರದ್ದುಗೊಳಿಸಿದವು ಮತ್ತು ‘ರಾಜ್ಯದ ವಿರುದ್ಧದ ಅಪರಾಧಗಳು’ ಎಂಬ ಹೊಸ ವಿಭಾಗವನ್ನು ಪರಿಚಯಿಸಿದವು’ ಎಂದು ಗೃಹ ಸಚಿವರು ಸದನಕ್ಕೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...