ನಾಗಾಲ್ಯಾಂಡ್‌ | ಭಾರೀ ಮಳೆಗೆ ಮೂವರು ಬಲಿ: ವಿಮಾನ ಹಾರಾಟ ಸ್ಥಗಿತ

Date:

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಗಾಲ್ಯಾಂಡ್‌ನಾದ್ಯಂತ ಪ್ರವಾಹ ಉಂಟಾಗಿದ್ದು ಮೂವರು ಬಲಿಯಾಗಿದ್ದಾರೆ. ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ದಿಮಾಪುರದಲ್ಲಿ ಮನೆಯೊಂದರಲ್ಲಿ ಮಳೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಪ್ರವಾಹದ ನೀರು ವಸತಿ ಪ್ರದೇಶಗಳಿಗೆ ನುಗ್ಗಿದ್ದು, ಎದೆಯೆತ್ತರದವರೆಗೆ ತುಂಬಿರುವ ನೀರಿನಲ್ಲೇ ಜನರು ಓಡಾಟ ನಡೆಸುತ್ತಿದ್ದಾರೆ. ಬರ್ಮಾ ಕ್ಯಾಂಪ್ ಮತ್ತು ಕುಡಾ ಗ್ರಾಮದಲ್ಲಿ ಪ್ರವಾಹ ಹೆಚ್ಚಾಗಿದೆ.

ಇದನ್ನು ಓದಿದ್ದೀರಾ? ನಾಗಾಲ್ಯಾಂಡ್‌, ಅರುಣಾಚಲದಲ್ಲಿ 6 ತಿಂಗಳು ಎಎಫ್‌ಎಸ್‌ಪಿಎ ಸ್ಥಾನಮಾನ ವಿಸ್ತರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರೀ ಮಳೆಯಿಂದಾಗಿ ರನ್‌ವೇ ಮತ್ತು ಪಾರ್ಕಿಂಗ್ ಪ್ರದೇಶಗಳು ಜಲಾವೃತವಾಗಿದ್ದು, ದಿಮಾಪುರ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಕಾರ್ಯಾಚರಣೆಯನ್ನು ಭಾನುವಾರ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ನೇರವಾಗಿ ವಿಮಾನಯಾನ ಸಂಸ್ಥೆಗಳಿಂದ ಹೆಚ್ಚಿನ ಮಾಹಿತಿಯನ್ನು ಪಡೆಯುವಂತೆ ಸೂಚಿಸಲಾಗಿದೆ. ದಿಮಾಪುರವನ್ನು ಕೊಹಿಮಾದೊಂದಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 29 ಕೂಡ ಪ್ರವಾಹದಿಂದ ತುಂಬಿದೆ.

ಭೂಕುಸಿತ ಉಂಟಾಗಿ ನಾಲ್ಕು ಪಥದ ಹೆದ್ದಾರಿಯ ಕೆಲವು ಭಾಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ವಾಹನ ಸಂಚಾರಕ್ಕೆ ತೀವ್ರ ಪರಿಣಾಮ ಬೀರಿವೆ. ದಿಮಾಪುರ, ಕೊಹಿಮಾ ಮತ್ತು ನಿಯುಲ್ಯಾಂಡ್ ಜಿಲ್ಲೆಗಳು ಹೆಚ್ಚು ಹಾನಿಗೊಳಗಾಗಿವೆ. ಸೇತುವೆಗಳು ಮುಳುಗಿದ್ದು, ಮನೆಗಳು, ಭತ್ತದ ಗದ್ದೆಗಳಿಗೆ ಹಾನಿಯಾಗಿದೆ. ನಿಯುಲ್ಯಾಂಡ್ ಜಿಲ್ಲೆಯಲ್ಲಿ, 70 ಹಳ್ಳಿಗಳು ಪ್ರವಾಹಕ್ಕೆ ಸಿಲುಕಿದ್ದು, ಜನರು ದೋಣಿ ಬಳಸಿ ಸಂಚರಿಸುತ್ತಿದ್ದಾರೆ. ಸದ್ಯ 52 ಜನರನ್ನು ರಕ್ಷಿಸಲಾಗಿದೆ.

ಇದನ್ನು ಓದಿದ್ದೀರಾ? ಇಳಿ ಹೊತ್ತಿಗೆ ತಂಪಾದ ಇಳೆ; ಗುಡುಗು-ಮಿಂಚುಗಳಿಂದ ಕೂಡಿದ ಮಳೆ

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ದಿಮಾಪುರ ಉಪ ಆಯುಕ್ತ ಡಾ. ಟಿನೋಜೋಂಗ್ಶಿ ಚಾಂಗ್, “ನಿನ್ನೆ ರಾತ್ರಿಯಿಂದ ಮತ್ತೆ ಮಳೆಯಾಗಿಲ್ಲ. ಅದರಿಂದಾಗಿ ನೀರಿನ ಮಟ್ಟ ಕ್ರಮೇಣ ಕಡಿಮೆಯಾಗಲಿದೆ. ಆದರೂ ಮುಂದಿನ ದಿನಗಳಲ್ಲಿ ಮಳೆ ಅಧಿಕವಾಗುವ ನಿರೀಕ್ಷೆಯಿರುವ ಕಾರಣ ಅಧಿಕಾರಿಗಳು ಜಾಗರೂಕರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ವಾರದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಪರಿಸ್ಥಿತಿಯನ್ನು ನಿರ್ಣಯಿಸಲು ಸ್ಥಳೀಯ ಆಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇಂದು ಸಮನ್ವಯ ಸಭೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...