ಮೃತ ಶಿಕ್ಷಕರಿಗೆ ನೋಟಿಸ್; ಉತ್ತರಿಸಲು 3 ದಿನ ಗಡುವು ನೀಡಿದ ಮ.ಪ್ರ.ಸರ್ಕಾರ!

Date:

ಶೂನ್ಯ ಹಾಜರಾತಿಯಿದ್ದ ಕಾರಣಕ್ಕೆ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೃತ ಶಿಕ್ಷಕರಿಗೆ ಸರ್ಕಾರಿ ಅಧಿಕಾರಿಗಳು ಶೋಕಾಸ್ ನೋಟಿಸ್ ನೀಡಿದ ಮತ್ತು ಉತ್ತರಿಸಲು ಮೂರು ದಿನಗಳ ಗಡುವು ನೀಡಿದ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ.

2023ರ ಏಪ್ರಿಲ್‌ನಲ್ಲಿ ದೇವತಾ ದೀನ್ ಕೋಲ್, 2025ರ ಫೆಬ್ರವರಿ 13ರಂದು ರಾಮಗರೀಬ್ ದೀಪಂಕರ್ ಮತ್ತು 2025ರ ಮೇ ತಿಂಗಳಲ್ಲಿ ಚೋಟೆಲಾಲ್ ಸಾಕೇತ್ ನಿಧನರಾಗಿದ್ದಾರೆ. ಆದರೆ ಸರ್ಕಾರಿ ಅಧಿಕಾರಿಗಳು ಈ ಮೂವರು ಶಿಕ್ಷಕರ ಹಾಜರಾತಿಯನ್ನು 2025ರ ಅಕ್ಟೋಬರ್‌ನಲ್ಲಿ ಪರಿಶೀಲಿಸಿದ್ದು ಮೂವರ ಮನೆಗೆ ‘ಶೂನ್ಯ ಹಾಜರಾತಿ’ಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ಕಳುಹಿಸಿದ್ದಾರೆ. ಹಾಗೆಯೇ ಉತ್ತರ ನೀಡದಿದ್ದರೆ ವೇತನ ಕಡಿತ ಮಾಡಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಏರ್ ಇಂಡಿಯಾಕ್ಕೆ ಶೋಕಾಸ್ ನೋಟಿಸ್ ಜಾರಿ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸದಾಗಿ ಪರಿಚಯಿಸಲಾದ ಇ-ಹಾಜರಾತಿ ವ್ಯವಸ್ಥೆಯ ಅಡಿಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ನೋಟಿಸ್ ನೀಡಿದ್ದಾರೆ. ಉತ್ತರ ಪ್ರದೇಶದ ರೇವಾ ಮತ್ತು ಮೌಗಂಜ್ ಜಿಲ್ಲೆಗಳಲ್ಲಿ 1,500ಕ್ಕೂ ಅಧಿಕ ಶಿಕ್ಷಕರಿಗೆ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಸರಿಯಾಗಿ ಹಾಜರಾತಿಯನ್ನು ಹಾಕದ ಕಾರಣಕ್ಕೆ ನೋಟಿಸ್‌ಗಳು ಬಂದಿವೆ. ಆದರೆ ವರ್ಷಾನುಗಟ್ಟಲೆ ಹಾಜರಾತಿ ಹಾಕದ, ವೇತನವನ್ನು ಪಡೆಯದ ಮೃತ ಶಿಕ್ಷಕರಿಗೂ ನೋಟಿಸ್ ನೀಡಿರುವುದು ಈ ವ್ಯವಸ್ಥೆಯಲ್ಲಿರುವ ಸಮಸ್ಯೆಯನ್ನು ಬಹಿರಂಗಪಡಿಸಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳು ಸಂಪರ್ಕಿಸಿದಾಗ ರೇವಾ ಜಿಲ್ಲಾ ಶಿಕ್ಷಣ ಅಧಿಕಾರಿ ರಾಮ್ ರಾಜ್ ಮಿಶ್ರಾ ಈ ಲೋಪವನ್ನು ಒಪ್ಪಿಕೊಂಡಿದ್ದು ಶಾಲಾ ಅಧಿಕಾರಿಗಳ ಮೇಲೆ ಹೊಣೆ ಹೊರೆಸಿದ್ದಾರೆ. “ಶಿಕ್ಷಕರ ವಿವರಗಳನ್ನು ಹೊಂದಿರುವ ವಿಶೇಷ ಪೋರ್ಟಲ್‌ನಿಂದ ಪಡೆದ ಶಿಕ್ಷಕರ ಡೇಟಾವನ್ನು ಆಧರಿಸಿ ನೋಟಿಸ್‌ಗಳನ್ನು ನೀಡಲಾಗಿದೆ. ಶಾಲೆಗಳ ಪ್ರಾಂಶುಪಾಲರು ಸರಿಯಾಗಿ ಮಾಹಿತಿ ನೀಡದ ಕಾರಣ ಈ ಲೋಪ ಸಂಭವಿಸಿದೆ. ಇಂತಹ ಪ್ರಕರಣಗಳು ಬಹಳ ಕಡಿಮೆ. ಡೇಟಾ ಅಪ್‌ಡೇಟ್ ಪ್ರಕ್ರಿಯೆ ನಡೆಸಲಾಗುತ್ತಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...