ತಿರುಪತಿ ಲಡ್ಡು ವಿವಾದ: ಸಿಬಿಐ ಒಳಗೊಂಡ ಎಸ್‌ಐಟಿ ತಂಡದಿಂದ ತನಿಖೆಗೆ ಸುಪ್ರೀಂ ಆದೇಶ

Date:

ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬ ಬಳಸಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಿಬಿಐ ಒಳಗೊಂಡ ಐವರು ತಂಡದಿಂದ ಸ್ವತಂತ್ರ ಎಸ್‌ಐಟಿ ತನಿಖೆಗೆ ಆದೇಶಿಸಿದೆ.

ನಮ್ಮ ಆದೇಶವನ್ನು ರಾಜ್ಯ ಎಸ್‌ಐಟಿ ಸದಸ್ಯರ ಸ್ವತಂತ್ರ ಹಾಗೂ ನ್ಯಾಯಸಮ್ಮತ ವಿಚಾರಣೆಗೆ ಅನುಮಾನ ವ್ಯಕ್ತಪಡಿಸುವ ರೀತಿಯಲ್ಲಿ ಅರ್ಥೈಸಬಾರದು. ಕೋಟ್ಯಂತರ ಜನರ ನಂಬಿಕೆಗಳು ಹಾಗೂ ಭಕ್ತಿಯನ್ನು ಸಮಾಧಾನಪಡಿಸುವುದಕ್ಕಾಗಿ ನಾವು ಸಮಿತಿಯನ್ನು ರಚಿಸುತ್ತಿದ್ದೇವೆ ಎಂದು ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಹಾಗೂ ಕೆ ವಿ ವಿಶ್ವನಾಥನ್‌ ಅವರ ಪೀಠ ಆದೇಶದಲ್ಲಿ ತಿಳಿಸಿದೆ.

ಸುಪ್ರೀಂ ಕೋರ್ಟ್ ಆದೇಶಿಸುತ್ತಿರುವ ಎಸ್‌ಐಟಿ ತಂಡದಲ್ಲಿ ಸಿಬಿಐನಿಂದ ನಾಮ ನಿರ್ದೇಶನಗೊಂಡ ಇಬ್ಬರು ಅಧಿಕಾರಿಗಳು, ಆಂಧ್ರ ಪ್ರದೇಶ ಪೊಲೀಸ್‌ನ ಇಬ್ಬರು ಅಧಿಕಾರಿಗಳು, ಆಹಾರ ಗುಣಮಟ್ಟ ಸಂಸ್ಥೆಯ ಹಿರಿಯ ಅಧಿಕಾರಿ ತಂಡದಲ್ಲಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು

ಸೆ.30 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಪೀಠವು, ದೇವರನ್ನು ರಾಜಕೀಯದಿಂದ ದೂರವಿಡಬೇಕೆಂದು ಅಭಿಪ್ರಾಯಪಟ್ಟಿತ್ತು. ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ಆಡಳಿತದಲ್ಲಿ ತಿರುಪತಿ ಲಡ್ಡುವಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಹಾಲಿ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಇದು ಎಲ್ಲಡೆ ವಿವಾದಕ್ಕೆ ಕಾರಣವಾಗಿತ್ತು.

ಲಡ್ಡು ಪ್ರಸಾದದ ಬಗ್ಗೆ ರಾಜಕೀಯ ಆರೋಪ, ಪ್ರತ್ಯಾರೋಪದ ಬಗ್ಗೆ ನ್ಯಾಯಾಲಯವನ್ನು ವೇದಿಕೆ ಮಾಡಿಕೊಳ್ಳಲು ಅನುಮತಿಸುವುದಿಲ್ಲ ಎಂದು ಪೀಠವು ತನ್ನ ಆದೇಶದಲ್ಲಿ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...