ಷೇರು ಮಾರುಕಟ್ಟೆಯ ಅಕ್ರಮದ ತನಿಖೆಗಾಗಿ ಟಿಎಂಸಿ ನಿಯೋಗದಿಂದ ಸೆಬಿ ಅಧಿಕಾರಿಗಳ ಭೇಟಿ

Date:

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದರ ನಿಯೋಗ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ(ಸೆಬಿ) ಅಧಿಕಾರಿಗಳನ್ನು ಇಂದು ಭೇಟಿ ಮಾಡಿ ಚುನಾವಣೋತ್ತರ ಸಮೀಕ್ಷೆಯ ನಂತರ ಷೇರು ಮಾರುಕಟ್ಟೆಯಲ್ಲಿ ಉಂಟಾದ ಅಕ್ರಮಗಳನ್ನು ತನಿಖೆಗೊಳಪಡಿಸುವಂತೆ ಆಗ್ರಹಿಸಿದೆ.

ಟಿಎಂಸಿ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಸಾಗರೀಕ ಘೋಷ್ ಹಾಗೂ ಸಾಕೇತ್‌ ಗೋಖಲೆ ಅವರೊಂದಿಗೆ ಉದ್ಧವ್‌ ಬಣದ ಶಿವಸೇನೆ ಸಂಸದ ಅರವಿಂದ್‌ ಸಾವಂತ್‌ ಹಾಗೂ ಮಾಜಿ ಎನ್‌ಸಿಪಿ ಶಾಸಕ ವಿದ್ಯಾ ಚವಾಣ್ ಕೂಡ ನಿಯೋಗದಲ್ಲಿದ್ದರು.

ಸೆಬಿ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ಕಲ್ಯಾಣ್ ಬ್ಯಾನರ್ಜಿ, ಸಿಬಿ ಈ ಹಿಂದೆ ಅತ್ಯುತ್ತಮ ಪಾತ್ರವನ್ನು ವಹಿಸಿದೆ. 2024ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಎಕ್ಸಿಟ್ ಪೋಲ್‌ಗಳನ್ನು ದಾರಿತಪ್ಪಿಸಿ ಷೇರು ಮಾರುಕಟ್ಟೆಯಲ್ಲಿ ಅಕ್ರಮವೆಸಗಿರುವ ಬಗ್ಗೆ ತನಿಖೆ ನಡೆಸುವಂತೆ ನಮ್ಮ ಕೋರಿಕೆಯ ಮನವಿವನ್ನು ಸೆಬಿ ಈಡೇರಿಸಲಿದ್ದು, ಈ ಬಗ್ಗೆ ನಾವು ಆತ್ಮವಿಶ್ವಾಸ ಹೊಂದಿದ್ದೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಕ್ಸಿಟ್‌ ಪೋಲ್‌ ಸಂಸ್ಥೆಗಳು ರಾಜಕೀಯ ನಾಯಕರೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆಗೊಳಪಡಿಸುವಂತೆ ನಿಯೋಗ ಬೇಡಿಕೆಯಿಟ್ಟಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವದಾರಿ ಗಣಿಗಾರಿಕೆಯ ಹಿಂದೆ ಇರುವುದು ಅಭಿವೃದ್ಧಿಯೋ, ಅಧ್ವಾನವೋ?

ಜೂನ್‌ 3 ರಂದು ಏರಿದ್ದ ಷೇರು ಮಾರುಕಟ್ಟೆ ಒಂದು ದಿನದ ನಂತರ ಪಾತಾಳಕ್ಕಿಳಿದಿತ್ತು. 24 ಗಂಟೆಗಳಲ್ಲಿ  ಸಣ್ಣ ಹೂಡಿಕೆದಾರರು 30 ಲಕ್ಷ ಕೋಟಿ ನಷ್ಟ ಮಾಡಿಕೊಂಡಿದ್ದರು. ಷೇರು ಮಾರುಕಟ್ಟೆಯಲ್ಲಿ ನಡೆದ ಅಕ್ರಮದಿಂದ ರಾಜಕಾರಣಿಗಳ ಕುಟುಂಬದವರು ಸಾವಿರಾರು ಕೋಟಿ ಲಾಭ ಗಳಿಸಿದ್ದರು ಎಂದು ಸಂಸದರ ನಿಯೋಗ ಆರೋಪಿಸಿದೆ.

“ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹಲವು ಕಡೆ ಅಮಿತ್‌ ಶಾ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಎಂದು ಹೇಳಿದ್ದರು. ತನಿಖೆಯನ್ನು ಆರಂಭಿಸಿದರೆ ಹೂಡಿಕೆದಾರರಲ್ಲಿ ಆತ್ಮವಿಶ್ವಾಸ ಬರಲಿದೆ” ಎಂದು ಕಲ್ಯಾಣ್ ಬ್ಯಾನರ್ಜಿ ತಿಳಿಸಿದರು.

ಒಂದು ದಿನದ ಹಿಂದಷ್ಟೆ ಟಿಎಂಸಿ ನಿಯೋಗ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿ ಷೇರು ಮಾರುಕಟ್ಟೆಯಲ್ಲಾಗಿರುವ ಅಕ್ರಮದ ಬಗ್ಗೆ ತನಿಖೆಗೆ ಆಗ್ರಹಿಸುವ ನಮ್ಮ ನಿಯೋಗಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದರು.

ಈ ಹಿಂದೆ ಷೇರು ಮಾರುಕಟ್ಟೆ ಅಕ್ರಮದ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,  ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇದರಲ್ಲಿ ನೇರವಾಗಿ ಭಾಗಿಯಾಗಿದ್ದು, ಅತ್ಯಂತ ದೊಡ್ಡ ಮಾರುಕಟ್ಟೆ ಹಗರಣದಿಂದ ಸಣ್ಣ ಹೂಡಿಕೆದಾರರು 30 ಲಕ್ಷ ಕೋಟಿ ನಷ್ಟ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...