ರಂಜಾನ್ ವೇಳೆ ಗಾಜಾದ ಮೇಲೆ ಬಾಂಬ್ ಹಾಕಬೇಡಿ ಎಂದು ಹೇಳಿದ್ದೆ ಎಂದ ಮೋದಿ: ನೆಟ್ಟಿಗರಿಂದ ತರಾಟೆ

Date:

ಪ್ರಧಾನಿ ನರೇಂದ್ರ ಮೋದಿ ಮಾಧ್ಯಮವೊಂದಕ್ಕೆ ಇಸ್ರೇಲ್‌ – ಗಾಜಾದ ಬಗ್ಗೆ ನೀಡಿರುವ ಹೇಳಿಕೆಯೊಂದು ಎಲ್ಲೆಡೆ ವೈರಲ್‌ ಆಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

”ಅದು ರಂಜಾನ್‌ ತಿಂಗಳ ಸಂದರ್ಭವಾಗಿತ್ತು. ನಾನು ನನ್ನ ವಿಶೇಷ ರಾಯಭಾರಿಯನ್ನು ಇಸ್ರೇಲ್‌ಗೆ ಕಳುಹಿಸಿ ಅಲ್ಲಿನ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ರಂಜಾನ್‌ನ ಸಂದರ್ಭದಲ್ಲಿ ಗಾಜಾದ ಮೇಲೆ ಬಾಂಬ್‌ ಹಾಕಬೇಡಿ ಎಂದು ತಿಳಿಸುವಂತೆ ಹೇಳಿದ್ದೆ. ಅವರು ಅದನ್ನು ಅನುಸರಿಸಲು ಎಲ್ಲ ಪ್ರಯತ್ನಗಳನ್ನು ಮಾಡಿದರು. ಆದರೆ ಕೊನೆಯಲ್ಲಿ ಎರಡು ಮೂರು ದಿನಗಳ ಕಾಲ ಹೋರಾಟ ನಡೆಯಿತು” ಎಂದು ಸಂದರ್ಶನವೊಂದರಲ್ಲಿ ಪ್ರಧಾನಿ ಹೇಳಿದ್ದರು.

ಪ್ರಧಾನಿ ನೀಡಿದ ಈ ಹೇಳಿಕೆ ಎಲ್ಲೆಡೆ ಟ್ರೋಲ್‌ಗೆ ಒಳಗಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯ ಹೇಳಿಕೆಯನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು ಇವರು ಮಣಿಪುರ ಒಂದನ್ನು ಬಿಟ್ಟು ಪ್ರಪಂಚದ ಎಲ್ಲ ರಾಷ್ಟ್ರಗಳ ಯುದ್ಧಗಳನ್ನು ನಿಲ್ಲಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಈಶಾನ್ಯ ರಾಜ್ಯ ಆಂತರಿಕ ಸಂಘರ್ಷದಿಂದ ಗಲಭೆಗಳು ಉಂಟಾಗಿ ನೂರಾರು ಜನರು ಪ್ರಾಣ ಕಳೆದುಕೊಂಡರು. ಸಾವಿರಾರು ಜನ ತಮ್ಮ ಸ್ವಂತ ಆಸ್ತಿಪಾಸ್ತಿ ಬಿಟ್ಟು ಬೇರೆಡೆ ತಮ್ಮ ನೆಲೆ ಬದಲಾಯಿಸಿದರು. ಭಾರತ ಇತಿಹಾಸದಲ್ಲಿಯೇ ಇಂತಹ ಘೋರ ಘಟನೆ ನಡೆದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ಮಣಿಪುರದ ಬಗ್ಗೆ ಒಂದು ಮಾತು ಆಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ದೇಶವೇ ಮಣಿಪುರದ ಆಂತರಿಕ ಸಂಘರ್ಷದ ಬಗ್ಗೆ ಕಂಬನಿ ಮಿಡಿದರೂ ಪ್ರಧಾನಿ ಏಕೆ ಮಾತನಾಡಲಿಲ್ಲ ಕೆಲವರು ಪ್ರಶ್ನಿಸಿದ್ದಾರೆ. ಮತ್ತೂ ಕೆಲವರು ಮಣಿಪುರವು ಪ್ರಧಾನಿಯ ಪಠ್ಯದ ವಿಷಯದಲ್ಲಿ ಇಲ್ಲ ಎಂದು ಕುಟುಕಿದ್ದಾರೆ. ಇನ್ನೂ ಕೆಲವರು ಬಹುಶಃ ನಡ್ಡಾ ಹಾಗೂ ಅಮಿತ್‌ ಶಾ ಅವರನ್ನು ಇಸ್ರೇಲ್‌ಗೆ ಯುದ್ಧ ನಿಲ್ಲಿಸಲು ಕಳಿಸಿರಬೇಕು ಎಂದು ಕುಹುಕವಾಡಿದ್ದಾರೆ.

ಅದಲ್ಲದೆ ಮಾಧ್ಯಮದಲ್ಲಿ ಸಂದರ್ಶನದಲ್ಲಿ ಕುಳಿತು ಪ್ರಶ್ನೆ ಕೇಳುತ್ತಿದ್ದ ನಾಲ್ವರು ಪತ್ರಕರ್ತರು ಕೂಡ ಮೋದಿಯನ್ನು ಆರಾಧಿಸುವ ಗೋಧಿ ಮಾಧ್ಯಮ ಪತ್ರಕರ್ತರಾಗಿದ್ದು, ಇಂತಹ ಪತ್ರಕರ್ತರು ಸರ್ಕಾರದ ದುರಾಡಳಿತವನ್ನು ಪ್ರಶ್ನಿಸುವುದನ್ನು ಬಿಟ್ಟು ಪ್ರಧಾನಿಯ ಸುಳ್ಳುಗಳಿಗೆ ತಲೆಯಾಡಿಸುತ್ತಿರುವುದನ್ನು ಕೂಡ ಹಲವರು ಟ್ರೋಲ್‌ ಮಾಡಿದ್ದಾರೆ.

https://x.com/VeeryaSorry/status/1791338756500533492

 

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...