ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳು ಶೇ.50ರವರೆಗೆ ಇಳಿಕೆ

Date:

ಸುರಂಗಗಳು, ಸೇತುವೆಗಳು, ಫ್ಲೈ-ಓವರ್‌ಗಳ ಹಾಗೂ ಎತ್ತರಿಸಿದ ಕಾರಿಡಾರ್‌ಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರವನ್ನು ಕಡಿಮೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೆದ್ದಾರಿಗಳ ಯಾವ ವಿಭಾಗದಲ್ಲಿ ಸುರಂಗ, ಸೇತುವೆಗಳಂತ ನಿರ್ಮಾಣಗಳು ಇರುತ್ತವೆಯೋ, ಆ ವಿಭಾಗದ ರಸ್ತೆಯಲ್ಲಿ ಟೋಲ್‌ ದರವು 50%ವರೆಗೆ ಕಡಿಮೆಯಾಗಲಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಲ್ಕ ನಿಯಮಗಳು-2008ಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ತಿದ್ದುಪಡಿ ತಂದಿದೆ. ತಿದ್ದುಪಡಿಯಲ್ಲಿ ಹೊಸ ನಿಯಮಗಳನ್ನು ಅಳವಡಿಸಲಾಗಿದೆ. ಮುಖ್ಯವಾಗಿ, ಹೆದ್ದಾರಿ ನಿರ್ದಿಷ್ಟ ವಿಭಾಗದಲ್ಲಿ ಎಷ್ಟು ಉದ್ದದ ಸೇತುವೆ, ಸುರಂಗಗಳು ಇರುತ್ತವೆಯೋ ಆ ಉದ್ದಕ್ಕೆ ಅನುಗುಣವಾಗಿ 10 ಪಟ್ಟು ಶುಲ್ಕ, ಉಳಿದ ಸಾಮಾನ್ಯ ಹೆದ್ದಾರಿಗೆ ಸಾಮಾನ್ಯ ಶುಲ್ಕ ವಿಧಿಸಲಾಗುತ್ತದೆ. ಅಥವಾ, ಸೇತುವೆ, ಸುರಂಗ ನಿರ್ಮಾಣ ಸೇರಿದಂತೆ ಹೆದ್ದಾರಿಯ ನಿರ್ದಿಷ್ಟ ವಿಭಾಗದ ಒಟ್ಟು ಉದ್ದಕ್ಕೆ ಅನುಗುಣವಾಗಿ ಐದು ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಈ ಎರಡೂ ಆಯ್ಕೆಗಳಲ್ಲಿ ಯಾವುದು ಕಡಿಮೆ ಶುಲ್ಕವಾಗುತ್ತದೆಯೋ ಅದನ್ನು ಜಾರಿಗೆ ತರಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಪ್ರಸ್ತುತ, ಹಳೆಯ ವ್ಯವಸ್ಥೆಯಡಿ ಸುರಂಗಗಳು, ಸೇತುವೆಗಳು, ಫ್ಲೈಓವರ್‌ಗಳು ಹಾಗೂ ಎತ್ತರಿಸಿದ ಕಾರಿಡರ್‌ಗಳಂತಹ ರಚನೆಗಳನ್ನು ಒಳಗೊಂಡಿರುವ 40 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ವಿಭಾಗಕ್ಕೆ 400 ಕಿ.ಮೀ.(10 x40)ಗಳಿಗೆ (ಹತ್ತು ಪಟ್ಟು) ಶುಲ್ಕವನ್ನು ವಿಧಿಸಲಾಗುತ್ತಿದೆ. ಇದೀಗ, ನೂತನ ಸೂತ್ರದಡಿ ಶುಲ್ಕವನ್ನು 200 ಕಿ.ಮೀ.(5 x40 ಕಿ.ಮೀ.) ಗಳಿಗೆ (ಐದು ಪಟ್ಟು) ಲೆಕ್ಕ ಹಾಕಲಾಗುತ್ತದೆ. ಈ ಮೂಲಕ ವಾಹನಗಳು ಪಾವತಿಸುವ ಟೋಲ್ ಶುಲ್ಕವು ಸುಮಾರು 50%ವರೆಗೆ ಕಡಿಮೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ವಿಶ್ಲೇಷಣೆ | ಸಹಕಾರ ಕ್ಷೇತ್ರವನ್ನು ಕಬ್ಜಾ ಮಾಡಲು ಹೊರಟಿದ್ದಾರೆಯೇ ಅಮಿತ್ ಶಾ?

“ಮೂಲಸೌಕರ್ಯ ನಿರ್ಮಾಣ ವೆಚ್ಚ ವಸೂಲಿ ಮತ್ತು ಕೈಗೆಟಕುವ ದರಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಲು ತಿದ್ದುಪಡಿ ತರಲಾಗಿದೆ. ಇದರಿಂದ, ರಸ್ತೆ ಬಳಕೆದಾರರಿಗೆ ಹೊರೆ ಕಡಿಮೆಯಾಗಲಿದೆ” ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...