ಸ್ತನ ಮುಟ್ಟುವುದು – ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ; ಹೈಕೋರ್ಟ್‌ ತೀರ್ಪಿನ ವಿರುದ್ಧ ವ್ಯಾಪಕ ಆಕ್ರೋಶ

Date:

ಮಹಿಳೆಯ ಸ್ತನ ಮುಟ್ಟುವುದು, ಆಕೆಯ ಪೈಜಾಮದ ಲಾಡಿಯನ್ನು ಬಿಚ್ಚುವುದರನ್ನು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಎನ್ನಲಾಗುವುದಿಲ್ಲ. ಬದಲಾಗಿ, ವಿವಸ್ತ್ರಗೊಳಿಸುವ ಉದ್ದೇಶ ಮತ್ತು ಹಲ್ಲೆ ಎಂಬ ಅಪರಾಧ ವರ್ಗಕ್ಕೆ ಸೇರುತ್ತದೆ ಎಂದು ಅಲಹಾಬಾದ್ ಹೈಕೋರ್ಟ್‌ ತೀರ್ಪು ನೀಡಿದೆ. ಈ ತೀರ್ಪನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಖಂಡಿಸಿದ್ದಾರೆ. ಇದು ದುರದೃಷ್ಟಕರ ಮತ್ತು ತಪ್ಪು ತೀರ್ಪು ಎಂದಿದ್ದಾರೆ.

ಅಲಹಾಬಾದ್‌ ಹೈಕೋರ್ಟ್‌ನ ತೀರ್ಪು ಸಮಾಜಕ್ಕೆ ತಪ್ಪು ಸಂದೇಶವನ್ನು ನೀಡುತ್ತದೆ. ಇಂತಹ ವಿಷಯಗಳು ಮತ್ತು ತೀರ್ಪುಗಳನ್ನು ಸುಪ್ರೀಂ ಕೋರ್ಟ್‌ ಗಮನಿಸಬೇಕು. ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

ಘಟನೆ 2021ರ ನವೆಂಬರ್‌ನಲ್ಲಿ ನಡೆದಿತ್ತು. ನವೆಂಬರ್ 10ರ ಸಂಜೆ ದೂರುದಾರ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳು ತಮ್ಮ ಸಂಬಂಧಿಯ ಮನೆಯಿಂದ ತಮ್ಮೂರಿಗೆ ಮರಳುತ್ತಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ, ತಮ್ಮ ಗ್ರಾಮದ ಮೂವರು ಪುರುಷರು – ಪವನ್, ಆಕಾಶ್ ಮತ್ತು ಅಶೋಕ್ – ಅವರನ್ನು ಎದುರುಗೊಂಡರು. ಅವರಲ್ಲಿ, ಪವನ್ ಎಂಬಾತ ಮಹಿಳೆಯ ಮಗಳನ್ನು ತನ್ನ ಮೋಟಾರ್ ಸೈಕಲ್‌ನಲ್ಲಿ ಮನೆಗೆ ಕರೆದೊಯ್ಯುವುದಾಗಿ ಹೇಳಿದ್ದ. ಆತನನ್ನು ನಂಬಿದ ಸಂತ್ರಸ್ತೆ, ಆತನೊಂದಿಗೆ ಮಗಳನ್ನು ಕಳಿಸಿದ್ದರು. ಆದರೆ, ಬಾಲಕಿಯನ್ನು ಕರೆದೊಯ್ದ ಆರೊಪಿಗಳು ದಾರಿ ಮಧ್ಯೆ ಬೈಕ್‌ನಲ್ಲಿ ನಿಲ್ಲಿಸಿ ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾರೆ. ಪವನ್ ಮತ್ತು ಆಕಾಶ್ ಬಾಲಕಿಯ ಸ್ತನಗಳನ್ನು ಹಿಡಿದು, ಆಕೆಯ ಪೈಜಾಮದ ದಾರವನ್ನು ಬಿಚ್ಚು, ಪೈಜಾಮವನ್ನು ಕೆಳಗೆ ಎಳೆಯರು ಯತ್ನಿಸಿದ್ದರು. ಈ ವೇಳೆಗೆ, ಸ್ಥಳೀಯರು ಸ್ಥಳಕ್ಕೆ ಬಂದ ಕಾರಣ, ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತ ಬಾಲಕಿಯ ತಾಯಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅತ್ಯಾಚಾರ ಆರೋಪದ ಮೇಲೆ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಆರೋಪಿಗಳಾದ ಪವನ್ ಮತ್ತು ಆಕಾಶ್‌ಗೆ ಸಮನ್ಸ್‌ ಜಾರಿ ಮಾಡಲು ಜಿಲ್ಲಾ ನ್ಯಾಯಾಲಯವು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಆರೋಪಿಗಳು ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆರೋಪಿಗಳ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ, ‘ಸ್ತನ ಮುಟ್ಟುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ, ಹಲ್ಲೆ ನಡೆಸುವ ಅಪರಾಧ’ ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಪೋಕ್ಸೋ ಪ್ರಕರಣ: ‘ಬಿಎಸ್‌ವೈ ಕೇಸ್‌ ರದ್ದು ಮಾಡಲ್ಲ’ ಎಂದ ಹೈಕೋರ್ಟ್‌

“ಪ್ರಸ್ತುತ ಪ್ರಕರಣದಲ್ಲಿ, ಆರೋಪಿ ಪವನ್ ಮತ್ತು ಆಕಾಶ್ ವಿರುದ್ಧದ ಆರೋಪವು ಅವರು ಸಂತ್ರಸ್ತೆಯ ಸ್ತನಗಳನ್ನು ಹಿಡಿದಿದ್ದಾರೆ ಮತ್ತು ಆಕಾಶ್ ಆಕೆಯ ಪೈಜಾಮವನ್ನು ಬಿಚ್ಚಲು ಪ್ರಯತ್ನಿಸಿದ್ದಾರೆ. ಆದರೆ, ಸಾಕ್ಷಿಗಳ ಮಧ್ಯಪ್ರವೇಶಿಸಿದ ಕಾರಣ ಅವರು ಸಂತ್ರಸ್ತೆಯನ್ನು ಬಿಟ್ಟು ಘಟನಾಸ್ಥಳದಿಂದ ಓಡಿಹೋಗಿದ್ದಾರೆ. ಹೀಗಾಗಿ, ಆರೋಪಿಗಳು ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗುವ ಉದ್ದೇಶ ಹೊಂದಿದ್ದರು ಎಂದು ಊಹಿಸಲಾಗುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಅಲಹಾಬಾದ್ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ವ್ಯಾಪಕ ಆಕ್ರೋಶ, ವಿರೋಧ, ಖಂಡನೆ ವ್ಯಕ್ತವಾಗಿದೆ. ಟಿಎಂಸಿ ಸಂಸದೆ ಜೂನ್ ಮಾಲಿಯಾ ಅವರು, “ದೇಶದಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿರುವ ರೀತಿ ಅಸಹ್ಯಕರವಾಗಿದೆ. ಇದನ್ನು ನಾವು ಹೋಗಲಾಡಿಸಬೇಕು”ಎಂದು ಹೇಳಿದ್ದಾರೆ.

“ಈ ತೀರ್ಪು ತೀರಾ ದುರದೃಷ್ಟಕರ. ತೀರ್ಪಿನಲ್ಲಿ ಹೇಳಲಾಗಿರುವ ಸಾಲುಗಳನ್ನು ಕೇಳಿ ನನಗೆ ಆಘಾತವಾಗಿದೆ. ಇದು ತುಂಬಾ ನಾಚಿಕೆಗೇಡಿನ ಸನ್ನಿವೇಶ. ಆ ಪುರುಷರು ಮಾಡಿದ ಕೃತ್ಯವನ್ನು ಅತ್ಯಾಚಾರಕ್ಕೆ ಸಮಾನವಾದ ಕೃತ್ಯವೆಂದು ಪರಿಗಣಿಸಲು ಯಾಕೆ ಸಾಧ್ಯವಿಲ್ಲ? ಈ ತೀರ್ಪಿನ ಹಿಂದಿನ ತರ್ಕ ನನಗೆ ಅರ್ಥವಾಗುತ್ತಿಲ್ಲ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯವಿದೆ” ಎಂದು ಎಎಪಿ ಸಂಸದೆ ಸ್ವಾತಿ ಮಲಿವಾಲ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...