ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬುಧವಾರ ಬೆಳಿಗ್ಗೆ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕನಿಷ್ಠ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಚುನಾರ್ ರೈಲು ನಿಲ್ದಾಣದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಗಂಗಾ ನದಿಯಲ್ಲಿ ಕಾರ್ತಿಕ ಪೂರ್ಣಿಮಾ ಸ್ನಾನಕ್ಕೆಂದು ಬಂದಿದ್ದ ಯಾತ್ರಿಕರು ನಿಗದಿತ ಪ್ಲಾಟ್ಫಾರ್ಮ್ ಬದಲಿಗೆ ಬೇರೆಯೇ ಪ್ಲಾಟ್ಫಾರ್ಮ್ನಲ್ಲಿ ಇಳಿದಿದ್ದಾರೆ. ಈ ವೇಳೆ ಕಲ್ಕಾ-ಹೌರಾ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.
ಇದನ್ನು ಓದಿದ್ದೀರಾ? ರೈಲು ಅಪಘಾತ | ತುರ್ತು ಪರಿಸ್ಥಿತಿಯಲ್ಲಿ ಸುರಕ್ಷತಾ ಕ್ರಮದ ಅಣುಕು ಪ್ರದರ್ಶನ
ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಘಟನೆಯ ಬಗ್ಗೆ ತನಿಖೆಗೆ ರೈಲ್ವೆ ಆಡಳಿತ ಆದೇಶಿಸಿದೆ.
ನಿನ್ನೆ ಛತ್ತೀಸ್ಗಢದಲ್ಲಿ ಬಿಲಾಸ್ಪುರ ಜಿಲ್ಲೆಯಲ್ಲಿ ರೈಲು ಅಪಘಾತ ನಡೆದಿದ್ದು, ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಬಿಲಾಸ್ಪುರ–ಕಟ್ನಿ ಮಾರ್ಗದ ಲಾಲ್ ಖದಾನ್ ಪ್ರದೇಶದ ಬಳಿ ಪ್ರಯಾಣಿಕ ರೈಲು ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.





