ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಲಿಂಗತ್ವ ಅಲ್ಪಸಂಖ್ಯಾತ ಹಿಮಾಂಗಿ ಸ್ಪರ್ಧೆ

Date:

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಲಿಂಗತ್ವ ಅಲ್ಪಸಂಖ್ಯಾತರೊಬ್ಬರು ಸ್ಪರ್ಧಿಸುತ್ತಿದ್ದಾರೆ. ಕಿನ್ನರ್ ಮಹಾಮಂಡಲೇಶ್ವರ್ ಹಿಮಾಂಗಿ ಸಖಿ ಅವರು ಅಖಿಲ ಭಾರತ ಹಿಂದೂ ಮಹಾಸಭಾ(ಎಬಿಎಚ್‌ಎಂ) ಪಕ್ಷದಿಂದ ಕಣಕ್ಕಿಳಿಯುತ್ತಿದ್ದಾರೆ.

ಬಲಪಂಥೀಯ ಪಕ್ಷವಾದ ಎಬಿಎಚ್‌ಎಂ ಉತ್ತರ ಪ್ರದೇಶದಲ್ಲಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಕಿನ್ನರ್ ಮಹಾಮಂಡಲೇಶ್ವರ್ ಹಿಮಾಂಗಿ ಸಖಿ ಅವರ ಹೆಸರನ್ನು ಘೋಷಿಸಲಾಗಿದೆ.

ಕೃಷ್ಣನ ಪರಮ ಭಕ್ತರಾಗಿರುವ ಕಿನ್ನರ್ ಮಹಾಮಂಡಲೇಶ್ವರ್ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಧನಿ ಎತ್ತಲು ಚುನಾವಣಾ ಕಣಕ್ಕೆ ಇಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ಮೋದಿಯವರು ಮಹಿಳೆಯರಿಗೆ ಮಾತ್ರವಲ್ಲ ಲಿಂಗತ್ವ ಅಲ್ಪಸಂಖ್ಯಾತರಿಗೂ ಉದ್ಯೋಗ ಹಾಗೂ ಚುನಾವಣೆಗಳಲ್ಲಿ ಸ್ಪರ್ಧಿಸಲು ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಮೀಸಲಾತಿ ನೀಡಬೇಕು ಎಂದು ಎಂದು ಕಿನ್ನರ್ ಮಹಾಮಂಡಲೇಶ್ವರ್ ಹಿಮಾಂಗಿ ಸಖಿ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಚುನಾವಣಾ ಆಯೋಗದ ವರದಿಗಳ ಪ್ರಕಾರ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ 48,044 ಮಂದಿ ಲಿಂಗತ್ವ ಅಲ್ಪಸಂಖ್ಯಾತರು ನೋಂದಾಯಿಸಿದ್ದಾರೆ. 2019ರ ಚುನಾವಣೆಯಲ್ಲಿ ಅವರ ಸಂಖ್ಯೆ 39,683 ಸಂಖ್ಯೆ ಇತ್ತು.

ಕಿನ್ನರ್ ಮಹಾಮಂಡಲೇಶ್ವರ್ ಹಿಮಾಂಗಿ ಸಖಿ ಅವರು ಭಗವತ್ ಕಥಾ ವಾಚಿಸುವ ವಿಶ್ವದ ಮೊದಲ ಲಿಂಗತ್ವ ಅಲ್ಪಸಂಖ್ಯಾತರಾಗಿದ್ದಾರೆ. ಇವರು ವಿಶ್ವದಾದ್ಯಂತ ಹಲವು ದೇಶಗಳಲ್ಲಿ ಭಗವತ್‌ ಕಥಾ, ರಾಮ್‌ ಕಥಾ, ದೇವಿ ಭಗವತ್‌ ಕಥಾ ಸೇರಿದಂತೆ ಹಲವು ವಾಚನಗಳನ್ನು ಮಂಡಿಸಿದ್ದಾರೆ. ಮೂಲತಃ ಮುಂಬೈನವರಾದ ಇವರು ಸಣ್ಣ ವಯಸ್ಸಿನಿಂದಲೇ ತಮ್ಮ ಮನೆಯ ಬಳಿಯಿರುವ ಇಸ್ಕಾನ್‌ ದೇಗುಲದಲ್ಲಿ ಪ್ರಾರ್ಥನೆ ಶುರು ಮಾಡಿದರು. ನಂತರದಲ್ಲಿ ಕೃಷ್ಣನ ಪರಮ ಭಕ್ತರಾದರು.

ವಾರಣಾಸಿಯಲ್ಲಿ ಜೂನ್‌ 1ರಂದು ಚುನಾವಣೆ ನಡೆಯಲಿದ್ದು, 19.62 ಲಕ್ಷ ಮತದಾರರಲ್ಲಿ 135 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಮೋದಿ ವಿರುದ್ಧವಾಗಿ ಕಾಂಗ್ರೆಸ್‌ನಿಂದ ಅಜಯ್‌ ರಾಯ್ ಸ್ಪರ್ಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...