ವಿದೇಶಕ್ಕೆ ಪ್ರಯಾಣಿಸುವುದು ಸಾಂವಿಧಾನಿಕ ಹಕ್ಕು: ದೆಹಲಿ ಕೋರ್ಟ್

Date:

ಕ್ವಾಲಿಟಿ ಲಿಮಿಟೆಡ್‌ನ ಮಾಜಿ ಪ್ರವರ್ತಕ ಸಿದ್ಧಾಂತ್ ಗುಪ್ತಾ ವಿರುದ್ಧದ ಲುಕ್ ಔಟ್ ನೋಟಿಸ್ ಅನ್ನು ಅಮಾನತುಗೊಳಿಸುವಂತೆ ದೆಹಲಿ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನಿರ್ದೇಶನ ನೀಡಿದೆ. ಹಾಗೆಯೇ ವಿದೇಶ ಪ್ರವಾಸ ಮಾಡುವುದು ಸಾಂವಿಧಾನಿಕ ಹಕ್ಕು ಎಂದು ಹೇಳಿದ್ದಾರೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಅಂಜು ಬಜಾಜ್ ಚಂದನಾ ಅವರು ಜನವರಿ 25ರಿಂದ ಫೆಬ್ರವರಿ 8ರವರೆಗೆ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿದ ಎಲ್‌ಒಸಿಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಅಂಗೀಕರಿಸಿದರು. ಸಿದ್ಧಾಂತ್ ಗುಪ್ತಾ, ತನ್ನ ಮಗಳನ್ನು ಸಿಂಗಾಪುರಕ್ಕೆ ಅಧ್ಯಯನಕ್ಕಾಗಿ ಕರೆದೊಯ್ದು ಅಲ್ಲಿ ಬೇಕಾದ ವ್ಯವಸ್ಥೆ ಮಾಡಿ ಹಿಂದಿರುಗಲು ವಿದೇಶಕ್ಕೆ ಪ್ರವಾಸ ಮಾಡಲು ಅವಕಾಶ ಕೋರಿದ್ದರು.

ಇದನ್ನು ಓದಿದ್ದೀರಾ? ಎಎಪಿಯ ಸತ್ಯೇಂದ್ರ ಜೈನ್‌ಗೆ ದೆಹಲಿ ಕೋರ್ಟ್ ಜಾಮೀನು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ಧಾಂತ್ ಗುಪ್ತಾ ಅರ್ಜಿ ಅಂಗೀಕರಿಸಿದ ನ್ಯಾಯಾಧೀಶರು, “ಸ್ವತಂತ್ರ ಚಲನೆಯ ಹಕ್ಕಿನಲ್ಲಿ ವಿದೇಶ ಪ್ರವಾಸವೂ ಕೂಡಾ ಸೇರಿದೆ. ಅದು ಅರ್ಜಿದಾರರ ಸಾಂವಿಧಾನಿಕ ಹಕ್ಕು. ಅರ್ಜಿದಾರರು ಸೀಮಿತ ಅವಧಿಗೆ ಮತ್ತು ನಿರ್ದಿಷ್ಟ ಉದ್ದೇಶಕ್ಕಾಗಿ ವಿದೇಶ ಪ್ರವಾಸ ಮಾಡಲು ಅನುಮತಿ ಕೋರಿದ್ದಾರೆ. ನನ್ನ ಪ್ರಕಾರ ಸೀಮಿತ ಅವಧಿಗೆ ಎಲ್‌ಒಸಿಯನ್ನು ಅಮಾನತುಗೊಳಿಸಿ ಅರ್ಜಿದಾರರಿಗೆ ವಿದೇಶಕ್ಕೆ ಭೇಟಿ ನೀಡಲು ಅವಕಾಶ ನೀಡಿದರೆ ಇಡಿಗೆ ಯಾವುದೇ ಹಾನಿಯಾಗುವುದಿಲ್ಲ” ಎಂದು ನ್ಯಾಯಾಧೀಶರು ಶುಕ್ರವಾರ ನೀಡಿದ ಆದೇಶದಲ್ಲಿ ತಿಳಿಸಿದ್ದಾರೆ.

ಗುಪ್ತಾ ಅವರ ನಿರೀಕ್ಷಣಾ ಜಾಮೀನು ಅರ್ಜಿ ನ್ಯಾಯಾಲಯದಲ್ಲಿ ಬಾಕಿ ಇದ್ದು, ಜನವರಿ 30ರಂದು ವಿಚಾರಣೆಗೆ ನಿಗದಿಪಡಿಸಲಾಗಿದೆ ಎಂದು ನ್ಯಾಯಾಧೀಶರು ಈ ಸಂದರ್ಭದಲ್ಲೇ ತಿಳಿಸಿದ್ದಾರೆ. ಇನ್ನು ಬಿಸಿಐ ಸಲ್ಲಿಸಿದ ಸಂಬಂಧಿತ ಪ್ರಕರಣದಲ್ಲಿ, ಇಡಿ ಪ್ರಸ್ತುತ ತನಿಖೆಯನ್ನು ಪ್ರಾರಂಭಿಸಿದ್ದು, ಆರೋಪಿಗೆ ವಿದೇಶಕ್ಕೆ ಭೇಟಿ ನೀಡಲು ಈ ಹಿಂದೆ ಅನುಮತಿ ನೀಡಲಾಗಿತ್ತು.

ಇದನ್ನು ಓದಿದ್ದೀರಾ? ಮಾನನಷ್ಟ ಪ್ರಕರಣದಲ್ಲಿ ಯೂಟ್ಯೂಬರ್ ಧ್ರುವ್‌ ರಾಠಿಗೆ ದೆಹಲಿ ಕೋರ್ಟ್ ಸಮನ್ಸ್

ಗುಪ್ತಾ ವಿದೇಶ ಪ್ರವಾಸ ಮಾಡಲು ಅನುಮತಿ ನೀಡಿದರೆ ಭಾರತಕ್ಕೆ ಹಿಂತಿರುಗದಿರುವ ಸಾಧ್ಯತೆ ಇದೆ ಎಂದು ಇಡಿ ವಾದವಾಗಿದೆ. ಗುಪ್ತಾ ಮತ್ತು ಕಂಪನಿಯ ಸಹ-ಪ್ರವರ್ತಕ ಸಂಜಯ್ ಧಿಂಗ್ರಾ ಅವರು ಕ್ವಾಲಿಟಿ ಲಿಮಿಟೆಡ್‌ನ ವಹಿವಾಟು ಹೆಚ್ಚಿಸುವ ಸಲುವಾಗಿ ಹಲವಾರು ನಕಲಿ ಕಂಪನಿಗಳು ಮತ್ತು ಘಟಕಗಳನ್ನು ರಚಿಸಿದ್ದಾರೆ ಎಂಬುದು ಇಡಿ ಆರೋಪವಾಗಿದೆ.

ಈ ಅಪರಾಧದ ಆದಾಯವನ್ನು ಅಂದರೆ ಕ್ವಾಲಿಟಿ ಲಿಮಿಟೆಡ್ ಬ್ಯಾಂಕುಗಳ ಒಕ್ಕೂಟದಿಂದ ಪಡೆದ ಸಾಲದ ಹಣವನ್ನು ತಮ್ಮ ಹೆಸರಿನಲ್ಲಿ ಮತ್ತು ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ ಇರಿಸಿದ್ದಾರೆ ಎಂಬ ಆರೋಪವಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...