ವರದಕ್ಷಿಣೆ ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯಗಳು ಪದೇ ಪದೇ ತಪ್ಪು ಮಾಡುತ್ತಿವೆ: ಸುಪ್ರೀಂ ಕೋರ್ಟ್ ಅಸಮಾಧಾನ

Date:

ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಸೂಕ್ತ ಆಧಾರವಿಲ್ಲದೆಯೂ ಆರೋಪಿಗಳನ್ನು ಅಪರಾಧಿಗಳೆಂದು ವಿಚಾರಣಾ ನ್ಯಾಯಾಲಯಗಳು ಘೋಷಿಸುತ್ತಿವೆ. ಆ ಮೂಲಕ ಪದೇ-ಪದೇ ತಪ್ಪು ಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಆಕೆಯ ಪತಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆಂದು ಆರೋಪಿಸಲಾಗಿತ್ತು. ಆ ಪ್ರಕರಣದಲ್ಲಿ ಆರೋಪಿ ಪತಿಯನ್ನು ನಿರ್ದೋಷಿ ಎಂದು ಸುಪ್ರೀಂ ಕೋರ್ಟ್‌ ಘೊಷಿಸಿದೆ. ಈ ವೇಳೆ,ವಿಚಾರಣಾ ನ್ಯಾಯಾಲಯಗಳು ಪದೇ-ಪದೇ ತಪ್ಪು ಮಾಅಡುತ್ತಿವೆ. ನ್ಯಾಯಾಂಗ ಅಕಾಡೆಮಿಗಳು ಮಧ್ಯ ಪ್ರವೇಶಿಸುವ ಅನಿವಾರ್ಯತೆ ಇದೆ ಎಂದು ಕೋರ್ಟ್‌ ಹೇಳಿದೆ.

1998ರಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಮಹಿಳೆಗೆ ಆಕೆಯ ಪತಿ ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಅವರ ಕಿರುಕುಳದಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯವು ಯಾವುದೇ ಸಾಕ್ಷ್ಯಗಳು ಇಲ್ಲದೆಯೂ ಆರೋಪಿಗಳನ್ನು ದೋಷಿಗಳನ್ನು ಘೋಷಿಸಿ, ಮಹಿಳೆಯ ಪತಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಆರೋಪಿ ಪತಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ಆರೋಪಿಯನ್ನು ನಿರ್ದೋಷಿಯೆಂದು ತೀರ್ಪು ನೀಡಿದೆ. ಪ್ರಕರಣವನ್ನು ಖುಲಾಸೆಗೊಳಿಸಿದೆ.

ಆರೋಪಿ ಪತಿಯ ವಿರುದ್ಧದ ಆರೋಪಗಳನ್ನು ಸಾಬೀತು ಮಾಡುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ. ಮಹಿಳೆಯ ಮೇಲೆ ದೌರ್ಜನ್ಯಗಳು ನಡೆದಿವೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಒಂದೇ ಒಂದು ಆರೋಪವನ್ನೂ ಪ್ರಾಸಿಕ್ಯೂಷನ್ ಸಾಬೀತು ಮಾಡಿಲ್ಲ. ಆದಾಗ್ಯೂ, ವಿಚಾರಣಾ ನ್ಯಾಯಾಲಯಗಳು ಶಿಕ್ಷೆ ವಿಧಿಸುತ್ತಿವೆ. ಪದೇ-ಪದೇ ತಪ್ಪು ಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

“ಯಾವುದೇ ಸಾವನ್ನು ವರದಕ್ಷಿಣೆಯ ಸಾವು ಎಂದು ಪರಿಗಣಿಸಬೇಕೆಂದರೆ, ಐಪಿಸಿ ಸೆಕ್ಷನ್ 304(ಬಿ) ಅಡಿಯಲ್ಲಿ ಆರೋಪಗಳನ್ನು ಸಾಬೀತು ಮಾಡಬೇಕು. ಆಗ ಮಾತ್ರವೇ, ಸಂತ್ರಸ್ತ ಮಹಿಳೆಯ ಪತಿ ಅಥವಾ ಆತನ ಸಂಬಂಧಿಕರು ಅಪರಾಧಿಗಳು ಎಂದು ಪರಿಗಣಿಸಬಹುದು. ಪ್ರಸ್ತುತ ಪ್ರಕರಣದಲ್ಲಿ, ಮಹಿಳೆಯ ಸಾವಿಗೂ ಮುನ್ನ, ಆರೋಪಿಯು ವರದಕ್ಷಿಣೆಗಾಗಿ ಆಕೆಯ ಮೇಲೆ ಕ್ರೌರ್ಯ ಎಸಗಿದ್ದಾರೆ. ಕಿರುಕುಳ ನೀಡಿದ್ದಾರೆ ಎಂಬುದನ್ನು ಸಾಕ್ಷ್ಯಾಧಾರ ಕಾಯ್ದೆಯ ಸೆಕ್ಷನ್ 113 (ಬಿ) ಅಡಿ ಸಾಬೀತು ಪಡಿಸಬೇಕಾಗುತ್ತದೆ. ಆದರೆ, ಆರೋಪಗಳನ್ನು ಸಾಬೀತು ಮಾಡಲಾಗಿಲ್ಲ. ಊಹೆಯ ಮೇಲೆ ತೀರ್ಪು ನೀಡಬಾರದು” ಎಂದು ಕೋರ್ಟ್‌ ಗಮನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...