ಭೂಗಳ್ಳರಿಂದ ರಕ್ಷಣೆ ನೀಡಿ: ತಹಸೀಲ್ದಾರ್ ಕಾಲಿಗೆ ಬಿದ್ದು ನ್ಯಾಯಕ್ಕೆ ಮೊರೆಯಿಟ್ಟ ಆದಿವಾಸಿ ಮಹಿಳೆಯರು

Date:

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಭೂ ಮಾಫಿಯಾ ದಬ್ಬಾಳಿಕೆಗೆ ತುತ್ತಾದ ಇಬ್ಬರು ಆದಿವಾಸಿ ಮಹಿಳೆಯರು, ನ್ಯಾಯ ಕೋರಿ ತಹಸೀಲ್ದಾರ್ ಅವರ ಕಾಲಿಗೆ ಬಿದ್ದ ಘಟನೆ ನಡೆದಿದೆ.

ಶಿವಪುರಿ ಜಿಲ್ಲೆಯ ಕರಹಾಲ್ ಬ್ಲಾಕ್‌ನ ಖಿರ್ಖಿರಿ ಗ್ರಾಮದ ಸಾವಿತ್ರಿ ಬಾಯಿ ಹಾಗೂ ಅವರ ಸೊಸೆ, ತಮ್ಮ ಪೂರ್ವಜರ ಭೂಮಿಯನ್ನು ಮರಳಿ ಪಡೆಯಲು ತಹಸೀಲ್ದಾರ್ ರೋಶ್ನಿ ಶೇಖ್ ಅವರ ಕಾಲಿಗೆ ಬಿದ್ದು ಕಣ್ಣೀರಿಟ್ಟರು. ” ಏನಾದರೂ ಮಾಡಿ, ಇಲ್ಲದಿದ್ದರೆ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ” ಎಂದು ನೋವನ್ನು ತೋಡಿಕೊಂಡರು.

ಕರಹಾಲ್ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ, ಆದಿವಾಸಿ ಸಮುದಾಯದ ಮೇಲಿನ ದಬ್ಬಾಳಿಕೆಯ ಆಳವನ್ನು ಬಿಚ್ಚಿಟ್ಟಿದೆ. ಸಾವಿತ್ರಿ ಬಾಯಿ ಅವರು ತಮ್ಮ ಸೊಸೆಯೊಂದಿಗೆ ಮತ್ತೊಮ್ಮೆ ದೂರು ಸಲ್ಲಿಸಲು ಬಂದಿದ್ದರು. ತಹಸೀಲ್ದಾರ್ ಕಚೇರಿ ಬಿಟ್ಟು ಹೊರಡುತ್ತಿದ್ದ ವೇಳೆ, ಮೆಟ್ಟಿಲುಗಳ ಮಧ್ಯೆಯೇ ಇಬ್ಬರು ಮಹಿಳೆಯರು ಅವರ ಕಾಲಿಗೆ ಬಿದ್ದು ಅಳತೊಡಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದ ಪ್ರಭಾವಿ ವ್ಯಕ್ತಿಗಳು ಹಾಗೂ ಭೂ ಮಾಫಿಯಾ ಒಡೆಯರು ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ನಮ್ಮ ಮನೆಯನ್ನು ಧ್ವಂಸ ಮಾಡಿ ಅಲ್ಲಿಯೇ ಕಟ್ಟಡ ನಿರ್ಮಿಸಿದ್ದಾರೆ. ಪೊಲೀಸ್ ಠಾಣೆ ಮತ್ತು ತಹಸೀಲ್ದಾರ್ ಕಚೇರಿಗೆ ಹಲವು ಬಾರಿ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ʼವಂದೇ ಮಾತರಂ’ವಿವಾದ; ಪರಿವಾರ- ಪ್ರಧಾನಿ ಪೋಣಿಸಿದ ಸುಳ್ಳುಗಳ ಬೊಂತೆ

ಮಹಿಳೆಯರ ನೋವನ್ನು ಆಲಿಸಿದ ತಹಸೀಲ್ದಾರ್ ರೋಶ್ನಿ ಶೇಖ್ ಅವರು ಮೆಟ್ಟಿಲ ಮೇಲೆ ಕುಳಿತು ಅವರ ಮಾತುಗಳನ್ನು ಆಲಿಸಿದರು. “ನಾನೇ ಖುದ್ದಾಗಿ ತನಿಖೆ ನಡೆಸುತ್ತೇನೆ. ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಕಟ್ಟಡವನ್ನು ತಕ್ಷಣವೇ ಖಾಲಿ ಮಾಡಿಸುತ್ತೇನೆ” ಎಂದು ಭರವಸೆ ನೀಡಿದರು. ಅಧಿಕಾರಿಗಳಿಗೆ ತಕ್ಷಣದ ಕ್ರಮಕ್ಕೆ ಸೂಚನೆ ನೀಡಿದರು.

ಕರಹಾಲ್ ಆದಿವಾಸಿ ಬ್ಲಾಕ್‌ನಲ್ಲಿ ನಡೆದ ಘಟನೆ ಮಾಮೂಲಿ ಘಟನೆಯಲ್ಲ. ಹಲವು ಆದಿವಾಸಿ ಕುಟುಂಬಗಳು ವರ್ಷಗಳಿಂದ ಭೂ ಕಬಳಿಕೆಯಿಂದ ಬಳಲುತ್ತಿವೆ. ಅಧಿಕಾರಿಗಳು ಮತ್ತು ರಾಜಕೀಯದ ಬೆಂಬಲದಿಂದ ಭೂಮಾಫಿಯಾ ದೌರ್ಜನ್ಯ ನಡೆಸುತ್ತಿದೆ.

ಬಲಹೀನ ಆದಿವಾಸಿ ಜನತೆ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. “ಈ ಘಟನೆ ಕೇವಲ ಒಂದು ಕುಟುಂಬದ ನೋವಲ್ಲ, ಇಡೀ ಸಮುದಾಯದ ರೋದನೆ” ಎಂದು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...