ಶಹಜಹಾನ್ ಶೇಖ್‌ನನ್ನು 6 ವರ್ಷಗಳ ಕಾಲ ಅಮಾನತುಗೊಳಿಸಿದ ಟಿಎಂಸಿ

Date:

ಪಶ್ಚಿಮ ಬಂಗಾಳ ಪೊಲೀಸರು ಸಂದೇಶ್‌ಖಾಲಿ ಹಾಗೂ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶೇಖ್ ಶಹಜಹಾನ್‌ನನ್ನು ಬಂಧಿಸಿದ ನಂತರ ಟಿಎಂಸಿ ಶಹಜಹಾನ್‌ನನ್ನು ಪಕ್ಷದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿಎಂಸಿ ಸಂಸದ ಡೆರಿಕ್ ಓ ಬ್ರಿಯೆನ್, “ನಾವು ಶೇಖ್ ಶಹಜಹಾನ್‌ನನ್ನು 6 ವರ್ಷಗಳ ಕಾಲ ಅಮಾನತುಗೊಳಿಸಲು ನಿರ್ಧರಿಸಿದ್ದೇವೆ. ಹೇಳಿದ ಮಾತಿನಂತೆ ನಾವು ನೆಡೆಯುತ್ತೇವೆ. ನಾವು ಹಿಂದೆ ಹೇಳಿದ್ದನ್ನು ಈಗ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

“ಭ್ರಷ್ಟಾಚಾರ ಪ್ರಕರಣಗಳು, ಹಲವು ಕ್ರಿಮಿನಲ್ ಪ್ರಕರಣಗಳಿರುವ ಆರೋಪಿಗಳನ್ನು ಅಮಾನತುಗೊಳಿಸಿದ್ದೇವೆ. ಆದರೆ ಬಿಜೆಪಿ ಈ ಧೈರ್ಯವನ್ನು ತೋರಿಸಬೇಕು.ನೀವು ಯಾರೆ ಆಗಿದ್ದರೂ ಜನರಿಗೆ ತೊಂದರೆ ನೀಡಿದ್ದರೆ ನಿಮ್ಮ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂಬುದನ್ನು ತೋರಿಸಿದ್ದೇವೆ.  ನಮ್ಮಿಂದ ಅಮಾನತುಗೊಂಡವರು ನರೇಂದ್ರ ಮೋದಿ ಅವರ ಸಭೆಗಳಲ್ಲಿ ಪಾಲ್ಗೊಂಡರೆ ನಮಗೆ ಯಾವುದೇ ಆಶ್ಚರ್ಯ ಉಂಟಾಗುವುದಿಲ್ಲ” ಎಂದು ಡೆರಿಕ್ ಓ ಬ್ರಿಯೆನ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಶೇಖ್ ಶಹಜಹಾನ್‌ ಸಂದೇಶ್‌ಖಾಲಿ ವಿಧಾನಸಭೆಯ ಪಕ್ಷದ ವಕ್ತಾರನಾಗಿದ್ದು, ಟಿಎಂಸಿಯ 24 ಉತ್ತರ ಪರಗಣದ ಜಿಲ್ಲಾ ಪರಿಷತ್‌ನ ಸದಸ್ಯನಾಗಿದ್ದಾನೆ.

ಸಂದೇಶ್‌ಖಾಲಿ ಹಾಗೂ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ 53 ವರ್ಷದ ಶೇಖ್ ಶಹಜಹಾನ್‌ನ್ನು ಬಂಧಿಸಲಾಗಿದ್ದು, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ನಂತರ ಈತ ಕಳೆದ 55 ದಿನಗಳಿಂದ ಪೊಲೀಸರಿಂದ ತಲೆ ತಪ್ಪಿಸಿಕೊಂಡಿದ್ದ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...