ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರದ್ದು ಹಾಗೂ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಅನುಷ್ಠಾನಗೊಳಿಸುವುದನ್ನು ತಡೆಯುವುದನ್ನು ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.
ಪ್ರಣಾಳಿಕೆ ಬಿಡುಗಡೆ ನಂತರ ಮಾತನಾಡಿದ ಟಿಎಂಸಿ ಸಂಸದ ಡೆರಿಕ್ ಒಬ್ರಾಯಿನ್, ಇಂಡಿಯಾ ಒಕ್ಕೂಟ ಸರ್ಕಾರ ರಚನೆಯ ಭಾಗವಾಗಿ ಟಿಎಂಸಿ ಇವುಗಳನ್ನು ಕಾರ್ಯಗತಗೊಳಿಸುತ್ತದೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?
ಸಿಎಎ ಹಾಗೂ ಯುಸಿಸಿ ಹೊರತಾಗಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಮನ್ರೇಗಾ ಯೋಜನೆಯಡಿ 400 ರೂಗಳಿಗೆ ದಿನ ಭತ್ಯೆ ಹೆಚ್ಚಳ, ಪ್ರತಿ ಭಾರತೀಯನಿಗೆ ಉದ್ಯೋಗ ಖಾತರಿ, ಎಲ್ಲರಿಗೂ ವಸತಿ, ಉಚಿತ ಎಲ್ಪಿಜಿ ಸಿಲಿಂಡರ್ ರೈತರಿಗೆ ಎಂಎಸ್ಪಿ ಖಾತರಿ, 60 ವರ್ಷ ಮೇಲ್ಪಟ್ಟವರಿಗೆ 1 ಸಾವಿರ ಪಿಂಚಣಿ, 10 ಲಕ್ಷ ವೈದ್ಯಕೀಯ ವಿಮೆ, ಎಸ್ಸಿ,ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಭರವಸೆ ನೀಡಲಾಗಿದೆ.
ಟಿಎಂಸಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ನೇಪಾಳಿ ಸೇರಿದಂತೆ ಆರು ಭಾಷೆಗಳಲ್ಲಿ ಬಿಡುಗಡೆ ಮಾಡಿದೆ.
ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಿಗೆ ಏ.19 ರಿಂದ ಜೂನ್ 1ರವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.





