ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಲು ಮದ್ರಾಸ್ ಹೈಕೋರ್ಟ್ ಆದೇಶಿಸಿರುವುದನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಟಿವಿಕೆ ಅರ್ಜಿಯ ತುರ್ತು ವಿಚಾರಣೆ ಕೋರಿದ್ದು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಅರ್ಜಿಯ ಪರಿಶೀಲನೆ ನಡೆಸಿದೆ. ಶುಕ್ರವಾರ(ಅಕ್ಟೋಬರ್ 10) ಅರ್ಜಿಯನ್ನು ಪರಿಗಣಿಸಲು ಪೀಠ ಸಮ್ಮತಿಸಿದೆ.
ಇದನ್ನು ಓದಿದ್ದೀರಾ? ಕರೂರು ಕಾಲ್ತುಳಿತ | ಯಾವುದೇ ರಾಜಕೀಯ ಹೇಳಿಕೆ ನೀಡಲ್ಲ: ತಮಿಳು ಸಿಎಂ ಸ್ಟಾಲಿನ್
ಸೆಪ್ಟೆಂಬರ್ 27ರಂದು ಟಿವಿಕೆ ಅಧ್ಯಕ್ಷ, ನಟ ವಿಜಯ್ ನಡೆಸಿದ್ದ ರ್ಯಾಲಿ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು 24 ಮಂದಿ ಮೃತಪಟ್ಟಿದ್ದಾರೆ. 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ ಎಸ್ಐಟಿ ತನಿಖೆಗೆ ಆದೇಶಿಸಿದೆ. ಆದರೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂಬುದು ಟಿವಿಕೆ ಆಗ್ರಹ.
ಇನ್ನು ಕರೂರು ಕಾಲ್ತುಳಿತ ಪ್ರಕರಣದ ಸಿಬಿಐ ತನಿಖೆ ನಡೆಯಬೇಕೆಂದು ಕೋರಿಯೂ ಅರ್ಜಿ ಸಲ್ಲಿಕೆಯಾಗಿದ್ದು, ಅದರ ವಿಚಾರಣೆಯನ್ನೂ ಶುಕ್ರವಾರ ಸುಪ್ರೀಂ ಕೋರ್ಟ್ ನಡೆಸಲಿದೆ.





