ಮಹಾರಾಷ್ಟ್ರ: ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದವರ ಅಂಗಡಿಗಳನ್ನು ಧ್ವಂಸಗೊಳಿಸಿದ ಪಾಲಿಕೆ

Date:

ಮೂರು ದಿನಗಳ ನಂತರ ಎರಡು ಬಣಗಳ ನಡುವೆ ಹಿಂಸಾಚಾರ ನಡೆದ ನಂತರ ಮಹಾರಾಷ್ಟ್ರ ಥಾಣೆ ಜಿಲ್ಲೆಯ ಮಿರಾ ಬಯಂದರ್ ಮಹಾನಗರ ಪಾಲಿಕೆ ಮುಸ್ಲಿಂ ಸಮುದಾಯ ಹೆಚ್ಚಿದ್ದ ಹೈದರಿ ಚೌಕ ಪ್ರದೇಶದಲ್ಲಿ 15 ಕಟ್ಟಡಗಳನ್ನು ನೆಲಸಮಗೊಳಿಸಿದೆ.

ಗಲಭೆಗೆ ಸಂಬಂಧಿಸಿದಂತೆ ನಾಲ್ವರು ಅಪ್ರಾಪ್ತರನ್ನು ಒಳಗೊಂಡು 15 ಮಂದಿಯನ್ನು ಪೊಲೀಸರು ಬಂಧಿಸಿದ್ದರು.

ಭಾನುವಾರ ರಾತ್ರಿ ಹೈದರಿ ಚೌಕ್‌ನಲ್ಲಿ ಒಂದು ಸಮುದಾಯದ ಗುಂಪು ಘೋಷಣೆಗಳನ್ನು ಕೂಗುತ್ತ ವಾಹನಗಳಲ್ಲಿ ಮೆರವಣಿಗೆಗೆ ತೆರಳುತ್ತಿದ್ದಾಗ ಇನ್ನೊಂದು ಸಮುದಾಯದ ಗುಂಪು ಆಕ್ಷೇಪ ವ್ಯಕ್ತಪಡಿಸಿದ ನಂತರ ಗಲಭೆ ಶುರುವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಹೈದರಿ ಚೌಕ್‌ ಪ್ರದೇಶದ ಸುಮಾರು 15 ಕಟ್ಟಡಗಳನ್ನು ನೆಲಸಮಗೊಳಿಸಿದ್ದೇವೆ.ಈ ಕಟ್ಟಡಗಳು ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಹಾಗೂ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾರಣ ಈ ಕ್ರಮ ಜರುಗಿಸಿದ್ದೇವೆ” ಎಂದು ಮಿರಾ ಬಯಂದರ್ ಮಹಾನಗರ ಪಾಲಿಕೆ ಸಾಹಾಯಕ ಆಯುಕ್ತರಾದ ಮಾರುತಿ ಗಾಯಕ್‌ವಾಡ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾವುದು ರಾಮರಾಜ್ಯ? ಗಾಂಧೀಜಿ ಹೇಳಿದ್ದೇ, ಪ್ರಧಾನಿ ಪಾಲಿಸುತ್ತಿರುವುದೇ?

ಸ್ಥಳೀಯರು ಹೇಳುವ ಪ್ರಕಾರ, ಈ ಅಂಗಡಿ ಮಾಲೀಕರು ಅಕ್ರಮ ದಾಖಲೆಗಳನ್ನು ಹೊಂದಿದ್ದರು. ಅಲ್ಲದೆ ಯಾವುದೇ ನೋಟಿಸ್ ನೀಡದೆ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಈ ಬಗ್ಗೆ ಸಹಾಯಕ ಆಯುಕ್ತ  ಗಾಯಕ್‌ವಾಡ್ ಅವರನ್ನು ವಿಚಾರಿಸಿದರೆ, ಪಾಲಿಕೆ ಪ್ರದೇಶದ ಪಾದಾಚಾರಿ ಮಾರ್ಗ, ಗಟಾರಗಳಲ್ಲಿ ಕಟ್ಟಡ ನಿರ್ಮಿಸಿದ್ದರೆ ನೋಟಿಸ್ ಅಗತ್ಯವಿಲ್ಲ. ಅಲ್ಲದೆ ನಾವು ಯಾವುದೇ ಮನೆಗಳನ್ನು ಧ್ವಂಸಗೊಳಿಸಿಲ್ಲ ಎಂದು ತಿಳಿಸಿದ್ದಾರೆ.

ನೆಲಸಮಗೊಂಡ ಬಹುತೇಕ ಕಟ್ಟಡಗಳು ಮುಸ್ಲಿಂ ಸಮುದಾಯವರಿಗೆ ಸೇರಿದ್ದಾಗಿದ್ದು, ಇವುಗಳಲ್ಲಿ ಕೆಲವು ಅಂಗಡಿಗಳಲ್ಲಿ ಹಿಂದೂ ಸಮುದಾಯದವರು ಬಾಡಿಗೆಗೆ ಇದ್ದರು.

ಸ್ಥಳದಲ್ಲಿ ನಿನ್ನೆಯಿಂದ(ಜ.24) ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ನಿಯೋಜಿಸಲಾಗಿದೆ. ಭದ್ರತಾ ಪಡೆಗಳು ಕೆಲವು ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...