ಜಾರ್ಖಂಡ್ | ಮೇಕೆ ಕದ್ದ ಆರೋಪ; ಇಬ್ಬರನ್ನು ಥಳಿಸಿ ಕೊಂದ ಗುಂಪು

Date:

ಗ್ರಾಮಸ್ಥರೊಬ್ಬರ ಮನೆಯಿಂದ ಮೇಕೆಗಳನ್ನು ಕದ್ದಾಗ ಸಿಕ್ಕಿಬಿದ್ದ ಇಬ್ಬರು ಯುವಕರನ್ನು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್‌ನ ಜೋರ್ಸಾ ಗ್ರಾಮದಲ್ಲಿ ನಡೆದಿದೆ. ಶನಿವಾರ ಮುಂಜಾನೆ ಈ ಘಟನೆ ಜಮ್ಶೆದ್‌ಪುರದ ಚಾಕುಲಿಯಾ ಪೊಲೀಸ್ ಠಾಣೆಯಿಂದ ಸುಮಾರು 15 ಕಿ.ಮೀ ದೂರದಲ್ಲಿ ನಡೆದಿದೆ.

ಮೃತರಿಬ್ಬರಲ್ಲಿ ಒಬ್ಬರಾದ ಕುಶಾಕ್ ಬೆಹೆರಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಭೋಲಾ ನಾಥ್ ಮಹ್ತೋ ಒಂದು ದಿನದ ನಂತರ ಮಹಾತ್ಮ ಗಾಂಧಿ ಮಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ದಲಿತ ಯುವಕನನ್ನು ಕೊಂದಿದ್ದ 17 ಮಂದಿಗೆ ಜೀವಾವಧಿ ಶಿಕ್ಷೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳನ್ನು ಇಬ್ಬರನ್ನು ಚಕುಲಿಯಾದಲ್ಲಿನ ಜೀರಾಪಾರ ಗ್ರಾಮದ ನಿವಾಸಿಗಳು ಎಂದು ಹೇಳಲಾಗಿದೆ. ಶಂಕಿತ ಆರೋಪಿಗಳು ಮನೆಯಿಂದ ಮೇಕೆಗಳನ್ನು ಕದಿಯಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇಬ್ಬರು ಕಳ್ಳತನ ಮಾಡುವಾಗ ಮೇಕೆಯ ಕುತ್ತಿಗೆಗೆ ಕಟ್ಟಿದ್ದ ಗಂಟೆ ಶಬ್ದಗೊಂಡು ಮನೆ ಮಾಲೀಕ ಹರ್‌ಗೋವಿಂದ್ ನಾಯಕ್ ಎಚ್ಚರಗೊಂಡರು. ನಾಯಕ್ ಹೊರಬಂದು ಪರಿಶೀಲಿಸಿದಾಗ ಇಬ್ಬರು ಯುವಕರು ಬೈಕ್‌ನಲ್ಲಿ ಮೂರು ಮೇಕೆಗಳನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ನೋಡಿದರು ಎಂದು ವರದಿಯಾಗಿದೆ.

ಮನೆ ಮಾಲೀಕರು ಆರೋಪಿಗಳನ್ನು ಹಿಡಿದು, ಇತರ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದು, ತಕ್ಷಣ ಗ್ರಾಮಸ್ಥರು ಜಮಾಯಿಸಿ ಶಂಕಿತರನ್ನು ಸೆರೆಹಿಡಿದಿದ್ದರು. ಗ್ರಾಮಸ್ಥರು ಥಳಿಸಿದ್ದು ಕುಶಾಕ್ ಬೆಹೆರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಜಾರ್ಖಂಡ್ | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕೊಲೆಗೆ ಯತ್ನಿಸಿದ ದುರುಳ

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹ್ತೋ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಮಹ್ತೋ ಸಾವನ್ನಪ್ಪಿದರು ಎಂದು ಎಸ್‌ಪಿ ರಿಷಭ್ ಗರ್ಗ್ ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಐವರನ್ನು ವಶಕ್ಕೆ ಪಡೆಯಲಾಗಿದ್ದು, ಇತರರನ್ನು ಗುರುತಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಲಿಖಿತ ದೂರು ಬಂದಿಲ್ಲ ಮತ್ತು ದೂರು ಬಂದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೂಡಾ ಎಸ್‌ಪಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...