ನೋಯ್ಡಾ| ಚರಂಡಿ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಪೌರ ಕಾರ್ಮಿಕರು ಮೃತ್ಯು

Date:

ನೋಯ್ಡಾದ ಮನೆಯೊಂದರಲ್ಲಿ ಚರಂಡಿ ಸ್ವಚ್ಛ ಮಾಡುತ್ತಿದ್ದ ಸಂದರ್ಭದಲ್ಲಿ ವಿಷಕಾರಿ ಅನಿಲ ಉಸಿರಾಡಿದ ಕಾರಣ ಪಶ್ಚಿಮ ಬಂಗಾಳ ಮೂಲದ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ನೂನಿ ಮಂಡಲ್ ಮತ್ತು ತಪನ್ ಮಂಡಲ್ ಸೆಕ್ಟರ್ 26 ರಲ್ಲಿ ಸುಮಿತ್ ಚಾವ್ಲಾ ಎಂಬ ವ್ಯಕ್ತಿಯ ನಿವಾಸದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಅಧಿಕಾರಿಗಳ ಪ್ರಕಾರ, ಇಬ್ಬರೂ ಕಾರ್ಮಿಕರು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯವರು ಮತ್ತು ನೋಯ್ಡಾ ಸೆಕ್ಟರ್ 9 ರ ಕೊಳೆಗೇರಿಯ ನಿವಾಸಿಗಳು ಆಗಿದ್ದರು.

ಇದನ್ನು ಓದಿದ್ದೀರಾ?  ದೇಶಾದ್ಯಂತ ಕಳೆದ 5 ವರ್ಷಗಳಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ 443 ಮಂದಿ ಸಾವು

“ನೋಯ್ಡಾ ಸೆಕ್ಟರ್ 26ರಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿನ ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಬ್ಬರು ಪೌರ ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ನಿನ್ನೆ (ಶುಕ್ರವಾರ) ರಾತ್ರಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರಿಗೂ ಪ್ರಜ್ಞೆ ತಪ್ಪಿತ್ತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಕಾರ್ಮಿಕರು ಬದುಕುಳಿಯಲಿಲ್ಲ” ಎಂದು ಉಪ ಪೊಲೀಸ್ ಆಯುಕ್ತ (ನೋಯ್ಡಾ) ವಿದ್ಯಾ ಸಾಗರ್ ಮಿಶ್ರಾ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಇನ್ನೊರ್ವ ಪೊಲೀಸ್ ಅಧಿಕಾರಿ, “ಮೃತರಿಬ್ಬರು ಶುಕ್ರವಾರ ಸಂಜೆ 7 ಗಂಟೆಗೆ ಮನೆಗೆ ಬಂದು ಸ್ವಚ್ಛತೆ ಆರಂಭಿಸಿದ್ದಾರೆ. ರಾತ್ರಿ 11.15 ರ ನಂತರ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಪರೀಕ್ಷಿಸುವ ವೇಳೆಗಾಗಲೇ ಮೃತಪಟ್ಟಿದ್ದರು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ದಾವಣಗೆರೆ | ಕಾರ್ಮಿಕರೊಬ್ಬರಿಂದ ಒಳಚರಂಡಿ ಸ್ವಚ್ಛತೆ; ಎಫ್‌ಐಆರ್‌ ದಾಖಲು

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶ

ಚರಂಡಿಗೆ ಜನರು ಇಳಿದು ಶುಚಿಗೊಳಿಸುವುದನ್ನು 25 ವರ್ಷಗಳ ಹಿಂದೆ ನಿಷೇಧಿಸಲಾಗಿದೆ. ಆದರೂ ಕೂಡಾ ಇಂದಿಗೂ ಈ ಕಾರ್ಯವನ್ನು ಪೌರ ಕಾರ್ಮಿಕರಿಂದ ಮಾಡಿಸಲಾಗುತ್ತಿದೆ. ಇನ್ನು ಕಳೆದ ಐದು ವರ್ಷಗಳಲ್ಲಿ ಒಳ ಚರಂಡಿ ಸ್ವಚ್ಛಗೊಳಿಸುವಾಗ ಕನಿಷ್ಠ 443 ಮಂದಿ ಸಾವನ್ನಪ್ಪಿದ್ದಾರೆ. ಈ ಉದ್ಯೋಗ ನಿಷೇಧಿಸುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಈ ಹಿಂದೆ 2023ರ ಅಕ್ಟೋಬರ್‌ನಲ್ಲಿ ಸುಪ್ರಿಂ ಕೋರ್ಟ್ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...