ಶನಿವಾರ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಈ ಬಗ್ಗೆ ಚಿನಾರ್ ಕಾರ್ಪ್ಸ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಸದ್ಯ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ತಿಳಿಸಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?
“ಕುಪ್ವಾರಾದ ಕೇರನ್ ಸೆಕ್ಟರ್ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಜಾಗೃತ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿ ಕಾರ್ಯಾಚರಣೆ ನಡೆಸಿತು. ಇಬ್ಬರು ಭಯೋತ್ಪಾದಕರು ಹತ್ಯೆ ಮಾಡಲಾಗಿದೆ” ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಲಾಗಿದೆ.
Update : OP PIMPLE, Keran, Kupwara
— Chinar Corps🍁 – Indian Army (@ChinarcorpsIA) November 8, 2025
Two terrorists have been neutralised by the security forces in the ongoing operation.
Search of the area in progress.#Kashmir@adgpi@NorthernComd_IA
ಇನ್ನು “ಒಳನುಸುಳುವಿಕೆ ಪ್ರಯತ್ನದ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕುಪ್ವಾರಾದ ಕೇರನ್ ಸೆಕ್ಟರ್ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಪ್ರಶ್ನಿಸಲಾಗಿದೆ. ಈ ವೇಳೆ ಇಬ್ಬರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ” ಎಂದು ಚಿನಾರ್ ಕಾರ್ಪ್ಸ್ ಹೇಳಿದೆ.





