ಸನಾತನ ಧರ್ಮ ಹೇಳಿಕೆ ಹಿಂದೂ ಧರ್ಮದ ವಿರುದ್ಧವಲ್ಲ, ಜಾತಿ ವ್ಯವಸ್ಥೆ ವಿರುದ್ಧ: ನ್ಯಾಯಾಲಯಕ್ಕೆ ಉದಯನಿಧಿ ವಿವರಣೆ

Date:

ಸನಾತನ ಧರ್ಮ ಕುರಿತಾದ ತಮ್ಮ ಹೇಳಿಕೆಯು ಜಾತಿ ವ್ಯವಸ್ಥೆ ವಿರೋಧಿಯೇ ವಿನಾ ಹಿಂದೂ ಧರ್ಮ ಅಥವಾ ಹಿಂದೂಗಳ ಜೀವನ ಕ್ರಮದ ಕುರಿತಾದದ್ದಲ್ಲ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್‌ ಗುರುವಾರ ಮದ್ರಾಸ್‌ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಹಿಂದೂ ಮುನ್ನಾನಿ ಸಮೂಹವು ಸ್ಟಾಲಿನ್‌ ಮತ್ತು ಇತರೆ ಡಿಎಂಕೆ ನಾಯಕರ ವಿರುದ್ಧ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿತಾ ಸುಮಂತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿದೆ.

ಉದಯನಿಧಿ ಸ್ಟಾಲಿನ್‌ ಪ್ರತಿನಿಧಿಸಿದ್ದ ಹಿರಿಯ ವಕೀಲ ಪಿ ವಿಲ್ಸನ್‌ ಅವರು “ತಮಿಳುನಾಡಿನ ಜನರು ಡಿಎಂಕೆಗೆ ಅಧಿಕಾರ ನೀಡಿದ್ದಾರೆ. ಇವರಲ್ಲಿ ಬಹುತೇಕರು ಹಿಂದೂ ಸಂಪ್ರದಾಯ ಆಚರಿಸುತ್ತಿದ್ದಾರೆ. ಬಹುತೇಕ ರಾಜ್ಯ ಅಥವಾ ಡಿಎಂಕೆಯ ಬಹುತೇಕ ಕಾರ್ಯಕರ್ತರು ಹಿಂದೂಗಳಾಗಿದ್ದಾರೆ” ಎಂದು ವಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಏನಿದೆ ಪುರಾವೆ?: ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸುಪ್ರೀಂ ಕಠಿಣ ಪ್ರಶ್ನೆ

“ಡಿಎಂಕೆ ನಾಯಕರ ವಿರುದ್ಧ ಸಲ್ಲಿಸಿರುವ ಅರ್ಜಿಯು ರಾಜಕೀಯ ಪ್ರೇರಿತವಾಗಿದೆ. ಸಂಸದರು ಮತ್ತು ಶಾಸಕರನ್ನು ಅನರ್ಹಗೊಳಿಸುವ ನಿಯಮವು ಸಂವಿಧಾನದ 191(ಇ) ನೇ ವಿಧಿಯಡಿ ಸಂಸತ್‌ನ ವಿಶೇಷಾಧಿಕಾರವಾಗಿದೆ. ನ್ಯಾಯಾಲಯವು ಶಾಸಕಾಂಗ ಹಾಗೂ ನ್ಯಾಯಾಂಗದ ನಡುವಿನ ಅಧಿಕಾರ ಪ್ರತ್ಯೇಕತೆಯನ್ನು ಗೌರವಿಸಬೇಕು. ಸಾಂವಿಧಾನಿಕ ಖಾಲಿತನ ಕಂಡುಬಂದಾಗ ನ್ಯಾಯಾಲಯ ಮಧ್ಯಪ್ರವೇಶಿಸಬಹುದು. ಆದರೆ, ಸಂಸತ್‌ ಈಗಾಗಲೇ ಕೆಲವು ಅನರ್ಹತೆಯನ್ನು ಉಲ್ಲೇಖಿಸಿರುವಾಗ ನ್ಯಾಯಾಲಯ ಮುಂದಡಿ ಇಡಲಾಗದು” ಎಂದರು.

ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಜಿ ರಾಜಗೋಪಾಲನ್‌ ಅವರು “ಡಿಎಂಕೆಯನ್ನು ಹಿಂದೂಗಳು ಅಧಿಕಾರಕ್ಕೆ ತಂದಿರುವುದಾದರೆ ಸನಾತನ ಧರ್ಮದ ಕುರಿತು ಡಿಎಂಕೆ ನಾಯಕರು ನೀಡುವ ಹೇಳಿಕೆಗಳು ವಿರೋಧಾಭಾಸದಿಂದ ಕೂಡಿವೆ. ಡಿಎಂಕೆ ನಾಯಕ ಎ ರಾಜಾ ಅವರು ಎಸ್‌ಸಿ/ಎಸ್‌ಟಿ ಕೋಟಾದಡಿ ಸಂಸದರಾಗಿದ್ದಾರೆ. ಇಂಥ ಮೀಸಲಾತಿಗಳು ಹಿಂದೂಗಳಿಗೆ ಮಾತ್ರ” ಎಂದರು.

ಎಲ್ಲ ವಕೀಲರು ಮೌಖಿಕ ವಾದ ಪೂರ್ಣಗೊಳಿಸಿದ್ದು, ಲಿಖಿತ ವಾದ ಸಲ್ಲಿಸಲು ನ್ಯಾಯಾಲಯವು ಎಲ್ಲರಿಗೂ ಒಂದು ವಾರ ಕಾಲಾವಕಾಶ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...