ಮತ್ತೆ ತಿಹಾರ್ ಜೈಲಿಗೆ ಹಿಂದಿರುಗಿದ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್

Date:

ತಮ್ಮ ಸಹೋದರಿಯ ವಿವಾಹದ ಹಿನ್ನೆಲೆಯಲ್ಲಿ 14 ದಿನಗಳ ಕಾಲ‌ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಜಾಮೀನು ಅವಧಿಯು ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಮತ್ತೆ ತಿಹಾರ್ ಜೈಲಿಗೆ ಹಿಂದಿರುಗಿದ್ದಾರೆ.

ಉಮರ್ ಖಾಲಿದ್ ಅವರ ಕೆಲವು ವಾಟ್ಸ್‌ಆ್ಯಪ್‌ ಸಂದೇಶಗಳನ್ನು ಆಧರಿಸಿ ದೆಹಲಿ ಗಲಭೆಗೆ ಉಮರ್ ಖಾಲಿದ್ ಸಂಚು ರೂಪಿಸಿದ್ದರೆಂದು ಆರೋಪಿಸಲಾಗಿದೆ. ಇದೇ ಆರೋಪದ ಮೇಲೆ 2020ರಲ್ಲಿ ಅವರನ್ನು ದೆಹಲಿ ಪೊಲೀಸರು ಉಮರ್ ಖಾಲಿದ್ ಅವರನ್ನು ಬಂಧಿಸಿದ್ದರು. ಅಂದಿನಿಂದ ಸರಿಯಾದ ವಿಚಾರಣೆಯೂ ಇಲ್ಲದೆ, ಜಾಮೀನೂ ದೊರೆಯದೆ ಉಮರ್ ಖಾಲಿದ್‌ ಜೈಲಿನಲ್ಲಿಯೇ ಇದ್ದಾರೆ.

ತಮ್ಮ ಸಹೋದರಿಯ ವಿವಾಹದಲ್ಲಿ ಭಾಗಿಯಾಗಲು 14 ದಿನಗಳ ಷರತ್ತುಬದ್ಧ ಜಾಮೀನು ನೀಡಿ ದೆಹಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ಸಮೀರ್ ಬಾಜ್‌ಪೈ ಆದೇಶಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಲಿದ್ ಅವರ ಸಹೋದರಿಯ ವಿವಾಹವು ಡಿಸೆಂಬರ್ 27ರಂದು ನಿಗದಿಯಾಗಿತ್ತು. ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಡಿಸೆಂಬರ್ 14 ರಿಂದ ಡಿಸೆಂಬರ್ 29ರವರೆಗೆ ಜಾಮಿನು ನೀಡಬೇಕೆಂದು ಕೋರಿ ಖಾಲಿದ್‌ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಡಿಸೆಂಬರ್ 14ರಿಂದ ಜಾಮೀನು ನೀಡುವ ಬದಲಾಗಿ, ಡಿಸೆಂಬರ್ 16ರಿಂದ ಜಾಮೀನು ಮಂಜೂರು ಮಾಡಿತ್ತು.

1141528

14 ದಿನಗಳ ಷರತ್ತು ಬದ್ಧ ಜಾಮೀನು ನೀಡಿದ್ದ ವೇಳೆ ನ್ಯಾಯಾಲಯವು, “ಜೈಲಿನಿಂದ ಹೊರಬಂದ ಅವಧಿಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ. ಕುಟುಂಬ, ಸಂಬಂಧಿಕರು ಹಾಗೂ ಸ್ನೇಹಿತರನ್ನಲ್ಲದೆ ಬೇರೆ ಯಾರನ್ನೂ ಭೇಟಿ ಮಾಡುವಂತಿಲ್ಲ. ತಮ್ಮ ಮನೆಯಲ್ಲಿ ಅಥವಾ ಅವರು ನಿರ್ದಿಷ್ಟಪಡಿಸಿದಂತೆ ವಿವಾಹ ಸಮಾರಂಭಗಳು ನಡೆಯುವ ಸ್ಥಳದಲ್ಲಿ ಮಾತ್ರವೇ ಅವರು ಇರಬೇಕು” ಎಂದು ನ್ಯಾಯಾಲಯ ಷರತ್ತು ವಿಧಿಸಿತ್ತು.

ಡಿಸೆಂಬರ್ 29ಕ್ಕೆ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಮತ್ತೆ ತಿಹಾರ್ ಜೈಲಿಗೆ ಉಮರ್ ಖಾಲಿದ್ ಹಿಂದಿರುಗಿದ್ದಾರೆ. ಈ ವೇಳೆ ಉಮರ್ ಖಾಲಿದ್ ಅವರ ತಂದೆ ಎಸ್ ಕ್ಯೂ ಆರ್ ಇಲ್ಯಾಸ್, ತಾಯಿ ಸೇರಿದಂತೆ ಕುಟುಂಬದ ಸದಸ್ಯರು, ಸ್ನೇಹಿತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...