ಗಂಡು ಹುಟ್ಟಿಲ್ಲವೆಂದು ನವಜಾತ ಹೆಣ್ಣು ಶಿಶುವನ್ನು ನೀರಿನ ಟ್ಯಾಂಕ್‌ಗೆ ಎಸೆದ ತಾಯಿ

Date:

ಗಂಡು ಮಗು ಹುಟ್ಟಿಲ್ಲವೆಂಬ ಕಾರಣಕ್ಕೆ ಹತಾಶೆಗೆ ಒಳಗಾಗಿ 17 ದಿನದ ಹೆಣ್ಣು ಶಿಶುವನ್ನು ತಾಯಿ ನೀರಿನ ಟ್ಯಾಂಕ್‌ಗೆ ಎಸೆದು ಕೊಂದ ಘಟನೆ ರಾಜಸ್ಥಾನದ ಜುಂಜುನುವಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾನೇ ಮಗುವನ್ನು ನೀರಿನ ಟ್ಯಾಂಕ್‌ಗೆ ಎಸೆದು ಕೊಂದಿರುವುದಾಗಿ ತಾಯಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ತಾಯಿಯನ್ನು ಆಚ್ಕಿ ದೇವಿ (22) ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಹೆಣ್ಣು ಮಗು ಹುಟ್ಟಿದ್ದಕ್ಕೆ ಪತ್ನಿಯನ್ನೇ ಜೀವಂತ ಸುಟ್ಟ ವಿಕೃತ ಪತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ಗಂಡು ಮಗು ಜನಿಸಬೇಕು ಎಂಬ ಆಸೆ ಇತ್ತು. ಆದರೆ ನನಗೆ ಹೆಣ್ಣು ಮಗು ಜನಿಸಿತು. ಇದರಿಂದ ನನಗೆ ನಿರಾಶೆಯಾಯಿತು. ಅದಕ್ಕಾಗಿ ನೀರಿನ ಟ್ಯಾಂಕ್‌ಗೆ ಮಗುವನ್ನು ಎಸೆದು, ಅದರ ಮುಚ್ಚಿಬಿಟ್ಟೆ” ಎಂದು ತಾಯಿ ಪೊಲೀಸರಿಗೆ ತಿಳಿಸಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ನಾರಾಯಣ ಸಿಂಗ್, “ಶ್ರೀ ರಾಮ ಕಾಲೋನಿಯ ಆಚ್ಕಿ ದೇವಿ ಎಂಬ ಮಹಿಳೆ ತನ್ನ 17 ದಿನದ ಹೆಣ್ಣು ಮಗುವನ್ನು ಭಾನುವಾರ ನೀರಿನ ಟ್ಯಾಂಕ್‌ಗೆ ಎಸೆದಿದ್ದಾಳೆ. ತನಗೆ ಗಂಡು ಮಗು ಆಗಿಲ್ಲ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾಳೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ | ಚೀಲದಲ್ಲಿ 6 ದಿನದ ಹೆಣ್ಣು ಮಗುವಿನ ಮೃತದೇಹ ಪತ್ತೆ; ತಾಯಿಯ ಬಂಧನ

ಮಹಿಳೆಯು ತನ್ನ ಪರಿಚಯಸ್ಥರೊಬ್ಬರಿಗೆ ಈ ಬಗ್ಗೆ ತಿಳಿಸಿದ್ದಳು. ಆ ವ್ಯಕ್ತಿ ಮಹಿಳೆಯ ಪತಿಗೆ ತಿಳಿಸಿದ್ದು, ಪತಿ ಪೊಲೀಸರಿಗೆ ದೂರು ನೀಡಿದ್ದಾನೆ. ದೂರಿನ ಆಧಾರದಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಭಾರತದಲ್ಲಿ ಹಲವಾರು ಶತಕಗಳಿಂದ ಹೆಣ್ಣು ಮಗುವನ್ನು ತಿರಸ್ಕರಿಸುತ್ತಾ ಬರಲಾಗಿದೆ. ಇಂದಿಗೂ ಜನರಲ್ಲಿರುವ ಮನೋಭಾವ ಬದಲಾಗಿಲ್ಲ. ಅಕ್ರಮವಾಗಿ ಭ್ರೂಣದ ಲಿಂಗ ಪತ್ತೆ ಹಚ್ಚಿ, ಹೆಣ್ಣೆಂದು ತಿಳಿದಾಗ ಗರ್ಭಪಾತ ಮಾಡಿಸುವ ಅದೆಷ್ಟೋ ಪ್ರಕರಣಗಳು ಇಂದಿಗೂ ದಾಖಲಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ಅತ್ತೆ, ಪತಿ, ಕುಟುಂಬಸ್ಥರ ತುಚ್ಛ ಮಾತುಗಳ ಒತ್ತಡದಿಂದಾಗಿ ತಾಯಿಯೇ ತನ್ನ ಹೆಣ್ಣು ಮಗುವನ್ನು ಕೊಂದಿರುವ ಘಟನೆಯೂ ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...