ಶಿಕ್ಷಿತರಿಗೆ ಮತ ನೀಡಿ ಎಂದ ಶಿಕ್ಷಕನ ವಜಾ: ಅನ್‌ಅಕಾಡೆಮಿ ಆನ್‌ಲೈನ್ ಸಂಸ್ಥೆ ವಿರುದ್ಧ ಆಕ್ರೋಶ

Date:

ಶಿಕ್ಷಣ ತಂತ್ರಜ್ಞಾನ ಸಂಸ್ಥೆ ಅನ್‌ಅಕಾಡೆಮಿ ಶಿಕ್ಷಿತ ಅಭ್ಯರ್ಥಿಗಳಿಗೆ ಮತ ಚಲಾಯಿಸಿ ಎಂದು ಮನವಿ ಮಾಡಿದ ಶಿಕ್ಷಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದೆ.

ವಿವಾದಾತ್ಮಕ ವಿಡಿಯೋದಲ್ಲಿ ಶಿಕ್ಷಕರಾದ ಕರನ್ ಸಾಂಗ್ವಾನ್ ಮುಂದಿನ ಬಾರಿ ಶಿಕ್ಷಿತ ಅಭ್ಯರ್ಥಿಗಳಿಗೆ ಮತ ಚಲಾಯಿಸಿ ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡುತ್ತಿರುವುದು ಸೆರೆಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಕೇವಲ ಹೆಸರುಗಳನ್ನು ಬದಲಾಯಿಸುವವರಿಗೆ ಮತ ಹಾಕಬೇಡಿ ಮತ್ತು ಸುಶಿಕ್ಷಿತ ರಾಜಕಾರಣಿಗಳನ್ನು ಆಯ್ಕೆ ಮಾಡುವಂತೆ ಕರನ್ ಸಾಂಗ್ವಾನ್ ಅವರು ವಿದ್ಯಾರ್ಥಿಗಳನ್ನು ಕೇಳಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಕೆಲವು ದಿನಗಳಿಂದ ಒಂದು ವಿಡಿಯೋ ವೈರಲ್ ಆಗಿರುವುದರಿಂದ ನಾನು ವಿವಾದಕ್ಕೆ ಸಿಲುಕಿದ್ದೇನೆ ಮತ್ತು ಈ ವಿವಾದದ ಕಾರಣಕ್ಕೆ ನ್ಯಾಯಾಂಗ ಸೇವೆ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ನನ್ನ ಹಲವಾರು ವಿದ್ಯಾರ್ಥಿಗಳು ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಅವರೊಂದಿಗೆ ನಾನೂ ಕೂಡಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ” ಎಂದು ಅನ್‌ಅಕಾಡೆಮಿ ಸಂಸ್ಥೆಯಿಂದ ವಜಾಗೊಂಡ ಸಾಂಗ್ವಾನ್ ಹೇಳಿಕೊಂಡಿದ್ದಾರೆ.

ಸಾಂಗ್ವಾನ್ ಈಗ ತಮ್ಮದೇ ಆದ ಯೂಟ್ಯೂಬ್ ಚಾನೆಲ್‌ನ್ನು ಪ್ರಾರಂಭಿಸಿದ್ದು,ಆಗಸ್ಟ್ 19 ರಂದು ವಿವಾದದ ವಿವರಗಳನ್ನು ಪೋಸ್ಟ್ ಮಾಡುವುದಾಗಿ ತಿಳಿಸಿದ್ದಾರೆ.

ಸಾಂಗ್ವಾನ್ ಅವರನ್ನು ವಜಾಗೊಳಿಸಿದ ವರದಿಗಳಿಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ವಿದ್ಯಾವಂತರಿಗೆ ಮತ ನೀಡಿ ಎಂದು ಕೇಳುವುದು ಅಪರಾಧವೇ? ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅನ್‌ಅಕಾಡಮಿ ಸಂಸ್ಥಾಪಕರನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಥೆ ”ಇಂತಹ ಬೆನ್ನು ಮೂಳೆಯಿಲ್ಲದ ಮತ್ತು ದುರ್ಬಲ ಜನರು ಶಿಕ್ಷಣ ವೇದಿಕೆಯನ್ನು ನಡೆಸುತ್ತಿರುವುದನ್ನು ನೋಡುವುದು ದುಃಖವಾಗುತ್ತಿದೆ. ಒತ್ತಡಕ್ಕೆ ಒಳಗಾಗುವವರು ಮತ್ತು ಹಿಂಸೆಗೆ ಒಳಗಾಗುವವರು ಈ ಜಗತ್ತಿನಲ್ಲಿರುವ ಎಲ್ಲ ವಿಲಕ್ಷಣಗಳ ವಿರುದ್ಧ ನಿಲ್ಲುವ ನಾಗರಿಕರನ್ನು ಬೆಳೆಸಲು ಎಂದಿಗೂ ಮುಂದೆ ಬರಲಾರರು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...