‘ಒಂದು ದೇಶ, ಒಂದು ಚುನಾವಣೆ’ ಪ್ರಜಾಪ್ರಭುತ್ವ ವಿರೋಧಿ: ಯೋಜನೆ ಕೈಬಿಡಲು ಖರ್ಗೆ ಪತ್ರ

Date:

ದೇಶದಲ್ಲಿ ಏಕ ಕಾಲದಲ್ಲಿ ಚುನಾವಣೆಯನ್ನು ಹಮ್ಮಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಈ ಯೋಜನೆಯು ಒಕ್ಕೂಟ ವ್ಯವಸ್ಥೆ ಹಾಗೂ ಸಂವಿಧಾನದ ಮೂಲ ರಚನೆಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಸಮಿತಿಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಖರ್ಗೆ, ಈ ಯೋಜನೆಯನ್ನು ಕೈಬಿಡುವುದರ ಜೊತೆಗೆ ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯನ್ನು ವಿಸರ್ಜಿಸಬೇಕೆಂದು ಸಮಿತಿ ಅಧ್ಯಕ್ಷರಾಗಿರುವ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಮಾಡಿದ್ದಾರೆ.

“ಈ ಯೋಜನೆಯು ದೇಶದಲ್ಲಿನ ಸಂವಿಧಾನ ಹಾಗೂ ಸಂಸದೀಯ ಪ್ರಜಾಪ್ರಭುತ್ವವನ್ನು ಕೇಂದ್ರ ಸರ್ಕಾರ ಬುಡಮೇಲು ಮಾಡುವುದರೊಂದಿಗೆ ಮಾಜಿ ರಾಷ್ಟ್ರಪತಿಗಳ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳುವುದಕ್ಕೆ ಅವಕಾಶ ನೀಡಬಾರದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ‘ಒಂದು ದೇಶ, ಒಂದು ಚುನಾವಣೆ’ಯನ್ನು ಬಲವಾಗಿ ಖಂಡಿಸುತ್ತದೆ. ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳುವ ಸಲುವಾಗಿ ಈ ಸಂಪೂರ್ಣ ಯೋಜನೆಯನ್ನು ಕೈಬಿಟ್ಟು, ಉನ್ನತ ಹಂತದಲ್ಲಿ ರಚಿಸಲಾಗಿರುವ ಸಮಿತಿಯನ್ನು ವಿಸರ್ಜಿಸಬೇಕೆಂದು ಸಮಿತಿಯ ಕಾರ್ಯದರ್ಶಿಯಾದ ನಿತಿನ್ ಚಂದ್ರ ಅವರಿಗೆ ಖರ್ಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್‌ 18ರಂದು ಸಮಿತಿಯ ಕಾರ್ಯದರ್ಶಿಯಾದ ನಿತಿನ್ ಚಂದ್ರ ಅವರು ಸಮಿತಿಯ ಪರಿಗಣನೆಗಾಗಿ ಸಲಹೆಗಳನ್ನು ಆಹ್ವಾನಿಸಿ ಎಂದು ಪತ್ರ ಬರೆದ ನಂತರ ಖರ್ಗೆಯವರು ಪ್ರತಿಕ್ರಿಯೆ ನೀಡಿದ್ದಾರೆ.

ಸಮಿತಿಯು ಈಗಾಗಲೇ ಯೋಜನೆ ಬಗ್ಗೆ ಮನಸ್ಸು ಮಾಡಿದೆ ಕಣ್ಣೊರೆಸುವ ಸಲುವಾಗಿ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ಸರ್ಕಾರ, ಸಂಸತ್ತು ಹಾಗೂ ಚುನಾವಣಾ ಆಯೋಗ ಒಟ್ಟಾಗಿ ಜನತೆ ನೀಡಿರುವ ತೀರ್ಪನ್ನು ಗೌರವಿಸಬೇಕು. ಇದನ್ನು ಬಿಟ್ಟು ಜನರ ಮನಸ್ಸನ್ನು ಬದಲಾಯಿಸುವ ಏಕ ಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಪ್ರಜಾಪ್ರಭುತ್ವ ವಿರೋಧಿ ಯೋಜನೆಗಳನ್ನು ಕೈಬಿಡಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ಈ ಕಚ್ಚಾಟ, ‘ಆತ್ಮಹತ್ಯೆ’ಯ ಹುಚ್ಚಾಟ

ಹಲವು ರಾಜ್ಯ ಸರ್ಕಾರಗಳಿರುವ ವಿರೋಧ ಪಕ್ಷಗಳಿಗೆ ಗಣನೀಯ ಪ್ರಾಮುಖ್ಯತೆ ನೀಡದೆ ಸಮಿತಿಯನ್ನು ರಚಿಸಿರುವುದು ಪಕ್ಷಪಾತದಿಂದ ಕೂಡಿದೆ. ಕೇಂದ್ರದಲ್ಲಿದ್ದ ಒಂದು ಪಕ್ಷವು ಪಕ್ಷಾಂತರ ವಿರೋಧ ಕಾನೂನನ್ನು ದುರ್ಬಲಗೊಳಿಸಿ ಅನೈತಿಕ ರಾಜಕಾರಣ ನಡೆಸಿದ ಪರಿಣಾಮ ಕಳೆದ 10 ವರ್ಷಗಳಲ್ಲಿ ಅನೇಕ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಂಡಿರುವ ನಿದರ್ಶನಗಳಿವೆ ಎಂದು ತಿಳಿಸಿದ್ದಾರೆ.

ವಿಸರ್ಜನೆಯಾಗುವ ಹಲವು ವಿಧಾನಸಭೆಗಳು

“ಏಕಕಾಲದಲ್ಲಿ ಚುನಾವಣೆಗಳನ್ನು ಹಮ್ಮಿಕೊಳ್ಳಲು ಹೊರಟರೆ ಹಲವು ವಿಧಾನಸಭೆಗಳನ್ನು ವಿಸರ್ಜಿಸುವ ಅಗತ್ಯವಿರುತ್ತದೆ. ಕೆಲವು ವಿಧಾನಸಭೆಗಳು ಅರ್ಧ ಅವಧಿ ಪೂರೈಸಿದ್ದರೆ, ಇನ್ನೂ ಕೆಲವು ಆರಂಭದಲ್ಲಿವೆ. ಇದು ಆ ರಾಜ್ಯದ ಮತದಾರರಿಗೆ ನಂಬಿಕೆ ದ್ರೋಹ ಮಾಡಿದಂದಾಗುತ್ತದೆ. ಅಲ್ಲದೆ ನೀತಿ ಆಯೋಗವು ಹೊಸ ಚುನಾವಣೆಗಳನ್ನು ನಡೆಸುವವರೆಗೂ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಹೇಳಿರುವುದು ಪ್ರಜಾಪ್ರಭುತ್ವದ ಅಪಹಾಸ್ಯವಾಗಿದೆ” ಎಂದು ತಮ್ಮ ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ.

“ಏಕ ಕಾಲದಲ್ಲಿ ಚುನಾವಣೆಗಳನ್ನು ನಡೆಸುವುದರಿಂದ ಆರ್ಥಿಕ ಉಳಿತಾಯವಾಗುತ್ತದೆ ಎನ್ನುವ ವಾದವು ಸಂಪೂರ್ಣ ಆಧಾರರಹಿತವಾಗಿದೆ. ಕಳೆದ ಐದು ವರ್ಷಗಳಲ್ಲಿ ಕೇಂದ್ರ ಬಜೆಟ್‌ನಲ್ಲಿ ಚುನಾವಣೆಗಾಗಿ ಹಣವನ್ನು ಮೀಸಲಿಟ್ಟಿರುವುದು ಶೇ.0.02 ಮಾತ್ರ. ರಾಜ್ಯಗಳು ಕೂಡ ಆಯಾ ವಿಧಾನಸಭಾ ಚುನಾವಣೆಗೆ ಇಷ್ಟೆ ಮೊತ್ತದ ಹಣವನ್ನು ಮಾತ್ರ ಮೀಸಲಿರಿಸಿವೆ. 2014ರ ಲೋಕಸಭಾ ಚುನಾವಣೆಗೆ ವೆಚ್ಚವಾಗಿರುವುದು ಕೇವಲ 3,870 ಕೋಟಿ ಮಾತ್ರ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...