ಪಶ್ಚಿಮ ಬಂಗಾಳ | 10ನೇ ತರಗತಿ ಓದಿದ ನಿರುದ್ಯೋಗಿಗಳಿಗೆ ಮಾ.7ರಿಂದ 1,500 ರೂ. ಭತ್ಯೆ: ಮಮತಾ ಬ್ಯಾನರ್ಜಿ

Date:

ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ನಿರುದ್ಯೋಗಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಮಾರ್ಚ್ 7ರಿಂದ ಪ್ರತಿ ತಿಂಗಳು 1,500 ರೂ. ಭತ್ಯೆಯನ್ನು ನೀಡಲಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆ ಈ ಘೋಷಣೆ ಮಹತ್ವವನ್ನು ಪಡೆದಿದೆ.

ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದಲ್ಲಿ ಮತದಾರರ ಹೆಸರುಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಿಹಾಕಿದ್ದನ್ನು ವಿರೋಧಿಸಿ ನಡೆದ ಧರಣಿಯಲ್ಲಿ ಮಾತನಾಡಿದ ಟಿಎಂಸಿ ಮುಖ್ಯಸ್ಥೆ ಈ ಘೋಷಣೆ ಮಾಡಿದ್ದಾರೆ. “ಈ ನಿರುದ್ಯೋಗ ಭತ್ಯೆ ಏಪ್ರಿಲ್‌ನಲ್ಲಿ ಆರಂಭವಾಗಬೇಕಿತ್ತು. ಆದರೆ ತಕ್ಷಣದಿಂದಲೇ ಪ್ರಾರಂಭಿಸಲು ನಿರ್ಧರಿಸಲಾಗಿದೆ” ಎಂದು ಘೋಷಿಸಿದ್ದಾರೆ.

ಇದನ್ನು ಓದಿದ್ದೀರಾ? ಬೀದರ್‌ | ‘ಯುವನಿಧಿ’ ಗ್ಯಾರಂಟಿ ಯೋಜನೆ : 7,266 ಅರ್ಜಿ; 2,743 ನಿರುದ್ಯೋಗಿಗಳಿಗೆ ಭತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುವ ಸಾಥಿ ಅಡಿಯಲ್ಲಿ ಇನ್ನೂ ಓದುತ್ತಿರುವ ಮತ್ತು ವಿದ್ಯಾರ್ಥಿವೇತನವನ್ನು ಹೊರತುಪಡಿಸಿ ಯಾವುದೇ ಯೋಜನೆಗಳ ಫಲಾನುಭವಿಗಳು ಆಗಿಲ್ಲದ ಎಲ್ಲರಿಗೂ ಮೊತ್ತ ಲಭಿಸಲಿದೆ. ಏಪ್ರಿಲ್ 1ರಂದು ಹಣವನ್ನು ನೀಡಲಾಗುವುದು ಎಂದು ನಾವು ಮೊದಲೇ ಹೇಳಿದ್ದೆವು. ಆದರೆ ನಾಳೆ ಅಂತಾರಾಷ್ಟ್ರೀಯ ಮಹಿಳಾ ದಿನವಾದ್ದರಿಂದ, ಉಡುಗೊರೆಯಾಗಿ ನಾವು ಪಾವತಿ ದಿನಾಂಕವನ್ನು ಏಪ್ರಿಲ್ 1ರ ಬದಲು ಮಾರ್ಚ್‌ 7ಕ್ಕೆ ಬದಲಾಯಿಸಿದ್ದೇವೆ” ಎಂದು ತಿಳಿಸಿದರು.

“21ರಿಂದ 40 ವರ್ಷ ವಯಸ್ಸಿನವರೆಲ್ಲರೂ, ಸುಮಾರು 1 ಕೋಟಿ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಇವರು ವಿದ್ಯಾರ್ಥಿವೇತನವನ್ನು ಹೊರತುಪಡಿಸಿ ಬೇರೆ ಯಾವುದೇ ಯೋಜನೆಗಳ ಫಲಾನುಭವಿಗಳಲ್ಲ” ಎಂದು ಹೇಳಿದ ಬ್ಯಾನರ್ಜಿ, “ತಮ್ಮ ಸರ್ಕಾರವು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ಬಂಗಾಳದಲ್ಲಿ ನಿರುದ್ಯೋಗ ದರವು ಶೇ. 40ರಷ್ಟು ಕಡಿಮೆಯಾಗಿದೆ” ಎಂದು ಈ ಸಂದರ್ಭದಲ್ಲೇ ಹೇಳಿದ್ದಾರೆ.

“ನಾವು ಕನಿಷ್ಠ 40 ಲಕ್ಷ ಜನರಿಗೆ ಕೌಶಲ್ಯ ತರಬೇತಿಯನ್ನು ನೀಡಿದ್ದೇವೆ. ಅದರಲ್ಲಿ ಸುಮಾರು 10 ಲಕ್ಷ ಜನರು ಈಗಾಗಲೇ ಉದ್ಯೋಗದಲ್ಲಿದ್ದಾರೆ. ವಲಸೆ ಕಾರ್ಮಿಕರು ಆಸಕ್ತಿ ಹೊಂದಿದ್ದರೆ, ಅವರಿಗೂ ಅವಕಾಶಗಳನ್ನು ನೀಡಲಾಗುವುದು. ಇತ್ತೀಚೆಗೆ, ಸೆಣಬಿನ ಉದ್ಯಮದಲ್ಲಿ ಸುಮಾರು 10,000 ಜನರಿಗೆ ತರಬೇತಿ ನೀಡಲಾಗುತ್ತಿದೆ ಮತ್ತು ಅವರನ್ನು ಉದ್ಯೋಗಗಳಲ್ಲಿ ಸೇರಿಸಿಕೊಳ್ಳಲಾಗುವುದು” ಎಂದರು.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಮುಸ್ಲಿಮರ ಓಲೈಕೆಗೆ ಬಿಜೆಪಿ ತಂತ್ರ-ಕುತಂತ್ರ

ಈ ಹಿಂದೆ ಬಿಹಾರದಲ್ಲಿ ವಿಧಾನಸಭೆ ಚುನಾವಣೆಗಿಂತ ಮುಂಚಿತವಾಗಿ ರಾಜ್ಯ ಸರ್ಕಾರವು ‘ಮುಖ್ಯಮಂತ್ರಿ ಮಹಿಳಾ ಉದ್ಯೋಗ ಯೋಜನೆ’ ಅಡಿಯಲ್ಲಿ ಲಕ್ಷಾಂತರ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ ₹10,000 ಹಣವನ್ನು ನೇರವಾಗಿ ಜಮೆ ಮಾಡಿತ್ತು. 2025ರ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ನೀಡಿದ್ದರು. 2025ರ ಅಕ್ಟೋಬರ್‌ನಲ್ಲಿ ಚುನಾವಣೆ ಘೋಷಣೆಯಾಗುವ ಮುನ್ನ ಮತ್ತು ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಹಲವು ಹಂತಗಳಲ್ಲಿ ಹಣ ಜಮೆ ಮಾಡಲಾಗಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೂ ಮುನ್ನ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಆದರೆ ಬಂಗಾಳದಲ್ಲಿ ಇನ್ನೂ ಚುನಾವಣೆ ಘೋಷಣೆಯಾಗಿಲ್ಲ. ಬಿಹಾರದಲ್ಲಿ ಬಿಜೆಪಿ ನಡೆಸಿದ ತಂತ್ರವನ್ನೇ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪ್ರಯೋಗಿಸುತ್ತಿರುವಂತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...