ಕೇಂದ್ರ ಬಜೆಟ್ | ಇನ್ಮುಂದೆ ಯಾವುದು ಅಗ್ಗ? ಯಾವುದು ದುಬಾರಿ?

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಕೇಂದ್ರ ಬಜೆಟ್ ಮಂಡಿಸಿದ್ದು ಹಲವಾರು ವಸ್ತುಗಳ ಸುಂಕವನ್ನು ಹೆಚ್ಚಳ ಮತ್ತು ಇಳಿಕೆ ಮಾಡಿದ್ದಾರೆ. ಇದರಿಂದಾಗಿ ಕೆಲವು ವಸ್ತುಗಳ ಬೆಲೆ ಇಳಿಕೆಯಾದರೆ, ಕೆಲವು ವಸ್ತುಗಳ ಬೆಲೆ ಏರಿಕೆಯಾಗಲಿದೆ.

ಮಧ್ಯಮ ಮತ್ತು ಮೇಲ್ಮಧ್ಯಮ ವರ್ಗದವರಿಗೆ ಕೆಲವು ಹಣಕಾಸು ಆಸ್ತಿಗಳ ಮೇಲಿನ ಬಂಡವಾಳ ಲಾಭದ ವಿನಾಯಿತಿ ಮಿತಿಯನ್ನು ವರ್ಷಕ್ಕೆ 1.25 ಲಕ್ಷ ರೂ.ಗೆ ಏರಿಸಲು ಸರ್ಕಾರ ಪ್ರಸ್ತಾಪಿಸಿದೆ. ಹಾಗೆಯೇ ಹೊಸ ತೆರಿಗೆ ಪದ್ಧತಿ ಆಯ್ಕೆ ಮಾಡುವವರಿಗೆ ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು 50,000 ರೂ.ನಿಂದ 75,000 ರೂ.ಗೆ ಏರಿಕೆ ಮಾಡಲಾಗಿದೆ.

ಆದರೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇಕಡ 15ರಿಂದ ಶೇಕಡ 5ಕ್ಕೆ ಇಳಿಸಲಾಗಿದೆ. ಇದು ವಿಶ್ವದ ಎರಡನೇ ಅತಿ ದೊಡ್ಡ ಚಿನ್ನದ ಗ್ರಾಹಕ ದೇಶವಾದ ಭಾರತದಲ್ಲಿ ಚಿನ್ನದ ಕಳ್ಳಸಾಗಣೆಯನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಿಸಿದೆ. ಲಿಥಿಯಂ ಸೇರಿದಂತೆ 25 ಖನಿಜಗಳ ಆಮದು ಸುಂಕ ವಿನಾಯಿತಿಯನ್ನು ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ | ಬಿಹಾರ, ಆಂಧ್ರ ಪ್ರದೇಶಕ್ಕೆ ಬಂಪರ್; ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್‌ಗಳು ವೈರಲ್

“ಚಿನ್ನ ಮತ್ತು ಅಮೂಲ್ಯವಾದ ಲೋಹದ ಆಭರಣಗಳಲ್ಲಿ ದೇಶೀಯ ಮೌಲ್ಯವರ್ಧನೆ ಹೆಚ್ಚಿಸಲು, ಚಿನ್ನ ಮತ್ತು ಬೆಳ್ಳಿಯ ಕಸ್ಟಮ್ಸ್ ಸುಂಕವನ್ನು ಶೇಕಡ 6ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ಯಾವೆಲ್ಲ ವಸ್ತುಗಳು ಅಗ್ಗ?

ಸೋಲರ್ ಸೆಟ್‌ಗಳು
ಮೊಬೈಲ್ ಫೋನ್‌ಗಳು
ಮೊಬೈಲ್‌ನ ಬ್ಯಾಟರಿ, ಇತ್ಯಾದಿ
ಮೊಬೈಲ್ ಚಾರ್ಜರ್‌ಗಳು
ಕ್ಯಾನ್ಸರ್ ಔಷಧಿಗಳು
ಚಿನ್ನ ಮತ್ತು ಬೆಳ್ಳಿ
ಪ್ಲಾಟಿನಂ ಜ್ಯುವೆಲ್ಲರಿ
ಬಟ್ಟೆ
ಶೂಗಳು
ಎಕ್ಸ್-ರೇ ಉಪಕರಣಗಳು
ಎಲೆಕ್ಟ್ರಿಕ್ ಕಾರುಗಳು
ಲಿಥಿಯಂ ಬ್ಯಾಟರಿ
ತಾಮ್ರದ ಸರಕುಗಳು
ಚರ್ಮದ ಸಾಮಗ್ರಿಗಳು
ಮೀನು ಮತ್ತು ಮೀನು ಉತ್ಪನ್ನಗಳು
25 ಅಗತ್ಯ ಖನಿಜಗಳು

ಯಾವೆಲ್ಲ ವಸ್ತುಗಳು ದುಬಾರಿ?

ಪ್ಲಾಸ್ಟಿಕ್ ವಸ್ತುಗಳು
ಟೆಲಿಕಾಂ ಉಪಕರಣಗಳು

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...