ಕೇಂದ್ರ ಬಜೆಟ್ | ತೆರಿಗೆ ಬದಲಾವಣೆ ಘೋಷಿಸುತ್ತಾರಾ ನಿರ್ಮಲಾ ಸೀತಾರಾಮನ್?

Date:

ಉದ್ಯೋಗ ಮತ್ತು ಬೆಲೆ ಏರಿಕೆ ಕುರಿತು ಪ್ರತಿಪಕ್ಷಗಳ ಕಠಿಣ ಪ್ರಶ್ನೆಗಳ ನಡುವೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮೋದಿ 3.0ರ ಮೊದಲ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈಗಾಗಲೇ 2025ರ ಆರ್ಥಿಕ ವರ್ಷದಲ್ಲಿ ಶೇಕಡ 6.5-7 ಬೆಳವಣಿಗೆಯನ್ನು ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆಯು ಮುನ್ಸೂಚನೆ ನೀಡಿದೆ.

ನಿರ್ಮಲಾ ಸೀತಾರಾಮನ್ ಅವರ ಏಳನೇ ಕೇಂದ್ರ ಬಜೆಟ್ ಇದಾಗಿದ್ದು, ಹೊಸ ಉತ್ಪಾದನಾ ಸೌಲಭ್ಯಗಳಿಗೆ ತೆರಿಗೆ ಪ್ರೋತ್ಸಾಹವನ್ನು ನೀಡುವ ಸಾಧ್ಯತೆಯಿದೆ. ನಿರುದ್ಯೋಗ ಹೆಚ್ಚಳದಿಂದಾಗಿ ವಿಪಕ್ಷಗಳ ವಾಗ್ದಾಳಿಗೆ ಗುರಿಯಾಗುತ್ತಿರುವ ಕೇಂದ್ರ ಸರ್ಕಾರ ಈ ಬಾರಿಯಾದರೂ ಉದ್ಯೋಗ ಸೃಷ್ಟಿ ಕಡೆ ಹೆಚ್ಚಿನ ಗಮನ ಹರಿಸುವುದು ಅನಿವಾರ್ಯವಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಲೋಕಸಭೆ ಚುನಾವಣೆಯಲ್ಲಿ ಸ್ವಂತವಾಗಿ ಬಹುಮತವನ್ನು ಗಳಿಸಲು ವಿಫಲವಾಗಿ, ಮಿತ್ರಪಕ್ಷಗಳ ಬೆಂಬಲದಿಂದ ಎನ್‌ಡಿಎ ಸರ್ಕಾರವನ್ನು ರಚಿಸಬೇಕಾಯಿತು. ಬಿಜೆಪಿ ಬಹುಮತವೂ ಕೂಡಾ ಲಭಿಸದಿರಲೂ ಪ್ರಮುಖ ಕಾರಣ ಜನರಲ್ಲಿ ಉದ್ಯೋಗಾವಕಾಶ ವಿಚಾರದಲ್ಲಿ ಬಿಜೆಪಿಯೊಂದಿಗಿರುವ ಅಸಮಾಧಾನವಾಗಿದೆ ಎಂದು ಹಲವಾರು ಸಮೀಕ್ಷಾ ವರದಿಗಳು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಕೇಂದ್ರ ಬಜೆಟ್ | ‘ಎಕನಾಮಿಕ್ ಸರ್ವೇ’ ಗಾಳಿ ಬಂದತ್ತ ತೂರಿಕೊಳ್ಳುವ ಪ್ಲಾನ್ ಇರಬಹುದೇ?

ಈ ನಡುವೆ ಸೀತಾರಾಮನ್ ಅವರು ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿಯನ್ನು ಘೋಷಿಸುತ್ತಾರೆಯೇ? ಈ ಮೂಲಕ ಮಧ್ಯಮ ವರ್ಗವನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆಯೇ ಎಂದು ಕಾದುನೋಡಬೇಕಿದೆ.

ಚುನಾವಣಾ ಪೂರ್ವ ಮಧ್ಯಂತರ ಬಜೆಟ್‌ನಲ್ಲಿ ಚುನಾವಣೆ ಸಮೀಪವಿರುವ ಕಾರಣ ಮಧ್ಯಮ ವರ್ಗಕ್ಕೆ ತಕ್ಕುದಾದ ಬಜೆಟ್ ಇರಲಿದೆ ಎಂಬ ಭರವಸೆಯಿತ್ತು. ಆದರೆ ಕೇಂದ್ರ ಸರ್ಕಾರ ಈ ಭರವಸೆಯನ್ನು ಹುಸಿಗೊಳಿಸಿತ್ತು. ಮಧ್ಯಂತರ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಯಾವುದೇ ಲಾಭ ಉಂಟಾಗುವ ಬದಲಾವಣೆ ಘೋಷಿಸಲಾಗಿಲ್ಲ. ಇದು ಮಧ್ಯಮ ವರ್ಗದ ಜನರಲ್ಲಿ ಅಸಮಾಧಾನ ಉಂಟು ಮಾಡಿರುವುದು ಅಲ್ಲಗಳೆಯುವಂತಿಲ್ಲ.

ಕೇಂದ್ರ ಬಜೆಟ್ 2024 ಜುಲೈ 30ರಂದು ಅಂಗೀಕಾರವಾಗುವ ಸಾಧ್ಯತೆಯಿದೆ. ವಿರೋಧ ಪಕ್ಷದ ನಾಯಕರು ಈಗಾಗಲೇ ಬೆಲೆ ಏರಿಕೆ, ನಿರುದ್ಯೋಗ, ಪ್ರಮುಖ ಕ್ಷೇತ್ರಗಳಲ್ಲಿನ ಬೆಳವಣಿಗೆಯ ಕೊರತೆ ಮತ್ತು ಕೃಷಿ ಸಂಕಷ್ಟದ ಪ್ರಸ್ತಾಪ ಮಾಡಿ ಸರ್ಕಾರವನ್ನು ಮೂಲೆಗುಂಪು ಮಾಡಲು ನಿರ್ಧರಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...