ಎಲ್‌ಟಿಟಿಇ ಮೇಲಿನ ನಿಷೇಧ: ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ

Date:

ಶ್ರೀಲಂಕಾದ ಪ್ರತ್ಯೇಕವಾದಿ ಸಂಘಟನೆ ಎಲ್‌ಟಿಟಿಇ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಪುನಃ 5 ವರ್ಷಗಳ ಕಾಲ ವಿಸ್ತರಿಸಿದೆ. ಜನರಿಗೆ ಪ್ರತ್ಯೇಕವಾದದ ಬಗ್ಗೆ ಪ್ರವೃತ್ತಿಯನ್ನು ಬೆಳಸುವುದರ ಜೊತೆಗೆ ಭಾರತದ ಪ್ರಾದೇಶಿಕ ಸಮಗ್ರತೆಗೆ ಮುಖ್ಯವಾಗಿ ತಮಿಳುನಾಡಿಗೆ ಬೆದರಿಕೆಯಾಗಿದೆ ಎಂದು ಕೇಂದ್ರ ತಿಳಿಸಿದೆ.

ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯಿದೆ 1967ರ ಸೆಕ್ಷನ್‌ 3 ಹಾಗೂ ಉಪ ವಿಭಾಗ 1ರಡಿ ಕೇಂದ್ರ ಗೃಹ ಸಚಿವಾಲಯವು ನಿಷೇಧ ಜಾರಿಗೊಳಿಸಿದೆ.

ಎಲ್‌ಟಿಟಿಇ ಸಂಘಟನೆ ಮುಖ್ಯವಾಗಿ ಶ್ರೀಲಂಕಾದಲ್ಲಿದ್ದರೂ ಇದರ ಬೆಂಬಲಿಗರು ಹಾಗೂ ಸಹಾನುಭೂತಿ ವ್ಯಕ್ತಪಡಿಸುವವರು ಹಾಗೂ ಏಜೆಂಟ್‌ಗಳು ಭಾರತದ ಭೂಪ್ರದೇಶದಲ್ಲಿ ಇದ್ದಾರೆ ಎಂದು ಗೃಹ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಸಮಗ್ರತೆ ಹಾಗೂ ಭದ್ರತೆಯಲ್ಲಿಎಲ್‌ಟಿಟಿಇ ಇನ್ನೂ ಅಹಿತಕರ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಗೃಹ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ಶ್ರೀಲಂಕಾದ ಮಿಲಿಟರಿಯಿಂದ 2009ರಲ್ಲಿ ಹಿನ್ನಡೆ ಅನುಭವಿಸಿದ ನಂತರ ಎಲ್‌ಟಿಟಿಇ ತಮಿಳರಿಗೆ ಪ್ರತ್ಯೇಕ ರಾಷ್ಟ್ರವಾಗುವ ಪರಿಕಲ್ಪನೆಯನ್ನು ಕೈಬಿಟ್ಟಿಲ್ಲ. ಉಳಿದಿರುವ ಎಲ್‌ಟಿಟಿಇ ನಾಯಕರು ಹಾಗೂ ಕೇಡರ್‌ಗಳು ಚದುರಿದ ಕಾರ್ಯಕರ್ತರನ್ನು ಮತ್ತೆ ಒಂದೂಗೂಡಿಸಲು ಸ್ಥಳೀಯವಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಹಸ್ಯವಾಗಿ  ಹಣಕಾಸು ಸಂಗ್ರಹಿಸುವುದು ಹಾಗೂ ಪ್ರಚಾರದ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

1976ರಲ್ಲಿ ಶ್ರೀಲಂಕಾದಲ್ಲಿ ರೂಪುಗೊಂಡ ಎಲ್‌ಟಿಟಿಇ ನಂತರದ ವರ್ಷಗಳಲ್ಲಿ ತನ್ನ ಸಂಘಟನೆಯನ್ನು ಹೆಚ್ಚಿಸಿಕೊಳ್ಳುತ್ತಾ ಹೋಯಿತು.  1991ರಲ್ಲಿ ಭಾರತದ ಮಾಜಿ ಪ್ರಧಾನಿ ಎಲ್‌ಟಿಟಿಇನಿಂದ ಹತರಾದ ನಂತರ  ಭಾರತದಲ್ಲಿ ಈ ಸಂಘಟನೆಯನ್ನು ನಿಷೇಧಿಸಲಾಗಿತ್ತು. 2009ರಲ್ಲಿ ಮುಖ್ಯಸ್ಥ ವೇಲುಪಿಳ್ಳೆ ಪ್ರಭಾಕರನ್‌ ಮೃತಪಟ್ಟ ನಂತರ ಸಂಘಟನೆ ಮತ್ತಷ್ಟು ಕುಸಿಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...