ಬಿಹಾರ ಕ್ಷೇತ್ರ ಹಂಚಿಕೆಯಲ್ಲಿ ಅಸಮಾಧಾನ: ಕೇಂದ್ರ ಸಚಿವ ರಾಜೀನಾಮೆ

Date:

ಬಿಹಾರ ಲೋಕಸಭಾ ಚುನಾವಣೆಯ ಕ್ಷೇತ್ರ ಹಂಚಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಕೇಂದ್ರ ಸಚಿವ ಹಾಗೂ ಆರ್‌ಎಲ್‌ಜೆಪಿ ಅಧ್ಯಕ್ಷ ಪಶುಪತಿ ಪಾರಸ್ ರಾಜೀನಾಮೆ ನೀಡಿದ್ದಾರೆ.

ನಿನ್ನೆ(ಮಾ.19) ಬಿಹಾರ ಲೋಕಸಭಾ ಸ್ಥಾನಗಳಿಗೆ ಎನ್‌ಡಿಎ ಒಕ್ಕೂಟ ಕ್ಷೇತ್ರ ಹಂಚಿಕೆ ಪ್ರಕಟಿಸಿತ್ತು. ಹಂಚಿಕೆಯ ಪ್ರಕಾರ ಬಿಜೆಪಿ 17, ಜೆಡಿಯು 16, ಚಿರಾಗ್‌ ಪಾಸ್ವಾನ್‌ ಬಣದ ಎಲ್‌ಜೆಪಿ 5 ಹಾಗೂ ಎನ್‌ಡಿಎ ಇತರ ಮಿತ್ರ ಪಕ್ಷಗಳಾದ ಹೆಚ್‌ಎಎಂ ಹಾಗೂ ಆರ್‌ಎಲ್‌ಪಿ ಪಕ್ಷಗಳಿಗೆ ತಲಾ ಒಂದು ಕ್ಷೇತ್ರವನ್ನು ನೀಡಲಾಗಿತ್ತು.

ರಾಜೀನಾಮೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪಶುಪತಿ, “ಕ್ಷೇತ್ರ ಹಂಚಿಕೆಯಲ್ಲಿ ನಮ್ಮ ಪಕ್ಷಕ್ಕೆ ಅನ್ಯಾಯವಾದ ಕಾರಣ ನಾನು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಶುಪತಿ ಬಣದ ಎಲ್‌ಜೆಪಿ ಬಣಕ್ಕೆ ಒಂದೂ ಸ್ಥಾನವನ್ನು ನೀಡಿಲ್ಲ. ಆದಾಗ್ಯೂ ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ತಮ್ಮ ಬಣಕ್ಕೆ ಸರಿಯಾಗಿ ಕ್ಷೇತ್ರ ಹಂಚಿಕೆ ನೀಡಲಿಲ್ಲದಿದ್ದರೆ ತಾವು ಎನ್‌ಡಿಎ ಬಣದಿಂದ ಹೊರಹೋಗುವುದಾಗಿ ಪಾರಸ್ ಅವರು ಈ ಮೊದಲು ತಿಳಿಸಿದ್ದರು. ಪ್ರಸ್ತುತ ಸೀಟು ಹಂಚಿಕೆಯಲ್ಲಿ ಆರ್‌ಎಲ್‌ಜೆಪಿ ಪಕ್ಷವನ್ನು ಕಡೆಗಣಿಸಲಾಗಿದೆ. ಪಾರಸ್ ಪ್ರತಿನಿಧಿಸುವ ಹಾಜಿಪುರ ಕ್ಷೇತ್ರವನ್ನು ಕೂಡ ನೀಡಲಾಗಿಲ್ಲ. ಕ್ಷೇತ್ರ ಹಂಚಿಕೆಯಲ್ಲಿ ಹಾಜಿಪುರ ಕ್ಷೇತ್ರವನ್ನು ಚಿರಾಗ್‌ ಪಾಸ್ವಾನ್‌ ಬಣಕ್ಕೆ ನೀಡಿರುವುದು ಪಶುಪತಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ರಾಮ್‌ ವಿಲಾಸ್‌ ಪಾಸ್ವಾನ್‌ ನೇತೃತ್ವದ ಲೋಕ ಜನ ಶಕ್ತಿ ಪಕ್ಷವು ಪಾಸ್ವಾನ್‌ ಮೃತಪಟ್ಟ 2020ರ ನಂತರ ಎರಡು ಬಣಗಳಾಗಿ ಇಬ್ಬಾಗವಾಯಿತು. ಪಾಸ್ವಾನ್‌ ಸಹೋದರ ಆರ್‌ಎಲ್‌ಜೆಪಿ ಪಕ್ಷವನ್ನು ಮುನ್ನಡೆಸಿದರೆ, ಪಾಸ್ವಾನ್ ಪುತ್ರ ಎಲ್‌ಜೆಪಿ(ಆರ್‌ವಿ) ಬಣದ ಅಧ್ಯಕ್ಷರಾಗಿದ್ದಾರೆ. ಎರಡೂ ಪಕ್ಷಗಳು ಎನ್‌ಡಿಎ ಮಿತ್ರ ಪಕ್ಷಗಳಾಗಿವೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಯು ತಲಾ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು. ಅವಿಭಜಿತ ಎಲ್‌ಜೆಪಿ ಪಕ್ಷ 6 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಬಿಜೆಪಿ ಹಾಗೂ ಎಲ್‌ಜೆಪಿ ಎಲ್ಲ ಪಕ್ಷಗಳಲ್ಲಿ ಗೆಲುವು ಸಾಧಿಸಿದರೆ, ಜೆಡಿಯು 16 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...