ಮಣಿಪುರ ಹಿಂಸಾಚಾರ | ಉದ್ರಿಕ್ತರಿಂದ ಕೇಂದ್ರ ಸಚಿವ ರಂಜನ್‌ ಸಿಂಗ್ ನಿವಾಸಕ್ಕೆ ಬೆಂಕಿ

Date:

  • ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಾಗ ಕೇರಳಕ್ಕೆ ತೆರಳಿದ್ದ ರಂಜನ್‌ ಸಿಂಗ್
  • ಒಂದು ತಿಂಗಳಿಂದ ಮೇತೀ, ಕುಕಿ ಸಮುದಾಯಗಳ ನಡುವೆ ಹಿಂಸಾಚಾರ

ಮಣಿಪುರ ರಾಜ್ಯದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಗಲಭೆ ಪೀಡಿತ ರಾಜ್ಯದ ಕೊಂಗಾ ಪ್ರದೇಶದಲ್ಲಿರುವ ಕೇಂದ್ರ ಸಚಿವ ಆರ್‌.ಕೆ. ರಂಜನ್‌ ಸಿಂಗ್‌ ಅವರ ನಿವಾಸಕ್ಕೆ ಅಪರಿಚಿತ ಉದ್ರಿಕ್ತರು ಗುರುವಾರ (ಜೂನ್‌ 15) ರಾತ್ರಿ ಬೆಂಕಿ ಹಚ್ಚಿದ್ದಾರೆ.

ಇಂಫಾಲದಲ್ಲಿ ನಿಷೇಧಾಜ್ಞೆ ಜಾರಿಯಾಗಿತ್ತು. ಅದರ ನಡುವೆಯೇ ರಾತ್ರಿ 11ರ ಸುಮಾರಿಗೆ ಸಾವಿರಕ್ಕೂ ಹೆಚ್ಚು ಜನರ ಗುಂಪು ಕೊಂಗಾ ಪ್ರದೇಶದಲ್ಲಿರುವ ರಂಜನ್‌ ಅವರ ನಿವಾಸದ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿದೆ.

ರಂಜನ್ ಸಿಂಗ್ ವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವರಾಗಿದ್ದಾರೆ. ಅವರ ನಿವಾಸಕ್ಕೆ ಬೆಂಕಿ ಹಚ್ಚಿದ ಪರಿಣಾಮ ಭಾರೀ ಹಾನಿಯಾಗಿದೆ. ಘಟನೆ ಸಂದರ್ಭದಲ್ಲಿ ರಂಜನ್ ಹಾಗೂ ಅವರ ಕುಟುಂಬ ಮಣಿಪುರದಲ್ಲಿ ಇರಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಾನಜಾ
ಕೇಂದ್ರ ಸಚಿವ ರಂಜನ್‌ ಸಿಂಗ್‌ ಅವರ ನಿವಾಸಕ್ಕೆ ಅಪರಿಚಿತರು ಬೆಂಕಿ ಹಚ್ಚಿರುವುದು

ಘಟನೆ ನಡೆದಾಗ ರಂಜನ್‌ ಅವರ ನಿವಾಸದಲ್ಲಿ ಒಂಬತ್ತು ಭದ್ರತಾ ಬೆಂಗಾವಲು ಪಡೆಯ ಸಿಬ್ಬಂದಿ, ಐದು ಭದ್ರತಾ ಸಿಬ್ಬಂದಿ ಮತ್ತು ಎಂಟು ಹೆಚ್ಚುವರಿ ಸಿಬ್ಬಂದಿ ಕರ್ತವ್ಯದಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ರಂಜನ್‌ ಸಿಂಗ್ ಅವರ ನಿವಾಸಕ್ಕೆ ದಾಳಿ ನಡೆಸಿದ ಉದ್ರಿಕ್ತರು ಎಲ್ಲ ದಿಕ್ಕುಗಳಿಂದ ಪೆಟ್ರೋಲ್ ಬಾಂಬ್‌ಗಳನ್ನು ಎಸೆದರು ಎಂದು ಸಚಿವರ ನಿವಾಸದಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಹೇಳಿದರು.

“ಸರ್ಕಾರಿ ಕೆಲಸದ ವಿಚಾರವಾಗಿ ನಾನು ಈಗ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್ ನನ್ನ ಮನೆಯಲ್ಲಿ ಕಳೆದ ರಾತ್ರಿ ಯಾರೊಬ್ಬರೂ ಗಾಯಗೊಂಡಿಲ್ಲ. ಕಿಡಿಗೇಡಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು. ನನ್ನ ಮನೆಯ ನೆಲಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ. ಈಗಲೂ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡುತ್ತೇನೆ. ಈ ರೀತಿಯ ಕೃತ್ಯದಲ್ಲಿ ಭಾಗಿಯಾಗುವುದು ಸಂಪೂರ್ಣ ಅಮಾನವೀಯವಾಗಿದೆ” ಎಂದು ಘಟನೆಯ ಕುರಿತು ರಂಜನ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಸೇನೆ ಮತ್ತು ಅರೆ ಪಡೆಗಳನ್ನು ನಿಯೋಜಿಸಲಾಗಿದೆ. ಅದಾಗ್ಯೂ, ಪೂರ್ವ ಇಂಫಾಲದ ಖಾಮೆಲಾಕ್ ಗ್ರಾಮದ ಮೇಲೆ ಶಂಕಿತ ಭಯೋತ್ಪಾದಕರು ಮಂಗಳವಾರ (ಜೂನ್ 13) ರಾತ್ರಿ ದಾಳಿ ನಡೆಸಿದ್ದರು.
ಘಟನೆಯಲ್ಲಿ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕುಕಿ ಸಮುದಾಯದ ನಾಯಕಿ ನೆಮ್ಯಾ ಕಿಪ್ಗೆನ್ ಅವರ ಅಧಿಕೃತ ನಿವಾಸಕ್ಕೆ ಬುಧವಾರ (ಜೂನ್ 14) ರಾತ್ರಿ ಅಪರಿಚಿತರು ಬೆಂಕಿ ಹಚ್ಚಿದ್ದರು. ಗುರುವಾರವೂ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು.

ರಂಜನ್ ಸಿಂಗ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿರುವ ಘಟನೆಯಿಂದ ಸ್ಥಳದಲ್ಲಿ ಭದ್ರತಾ ಪಡೆ ನಿಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಆಂಧ್ರಪ್ರದೇಶ | ಲಾರಿ ಡಿಕ್ಕಿ ಹೊಡೆದು ಆನೆ ಮರಿಗಳು ಸಾವು

ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೇಟಿ ಮತ್ತು ಕುಕಿ ಸಮುದಾಯದ ನಡುವೆ ಒಂದು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮೇತೀ ಸಮುದಾಯದ ಎಸ್‌ಟಿ ಮೀಸಲಾತಿ ಬೇಡಿಕೆ ವಿರೋಧಿಸಿ ಮೇ 3 ರಂದು ಮಣಿಪುರದಲ್ಲಿ ‘ಬುಡಕಟ್ಟು ಏಕತಾ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಘರ್ಷಣೆಗೆ ಕಾರಣವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...