ಕೇಂದ್ರ ಸಚಿವೆಯ ಪುತ್ರಿಗೆ ದುಷ್ಕರ್ಮಿಗಳಿಂದ ಕಿರುಕುಳ: ದೂರು ದಾಖಲು

Date:

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಮುಕ್ತೈನಗರ ಪ್ರದೇಶದಲ್ಲಿ ನಡೆದ ಜಾತ್ರೆಯೊಂದರಲ್ಲಿ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವೆ ರಕ್ಷಾ ಖಡ್ಸೆ ಅವರ ಪುತ್ರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಈ ಕುರಿತು ಸಚಿವೆ ರಕ್ಷಾ ಖಡ್ಸೆ ಮುಕ್ತಾನಗರದ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಹಮ್ಮಿಕೊಂಡ ಯಾತ್ರೆ ವೇಳೆ ತನ್ನಪುತ್ರಿಗೆ ಕಿರುಕುಳ ನೀಡಲಾಗಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್‌ ಠಾಣೆಗೆ ದೂರು ನೀಡಿದ ನಂತರ ಮಾತನಾಡಿದ ರಕ್ಷಾ ಖಡ್ಸೆ, ಶಿವರಾತ್ರಿ ಹಬ್ಬದ ಪ್ರಯುಕ್ತ ಮುಕ್ತೈನಗರ ಪ್ರದೇಶದ ಕೋಥಾಲಿಯಲ್ಲಿ ಪ್ರತಿ ವರ್ಷ ಯಾತ್ರೆಯನ್ನು ಆಯೋಜಿಸಲಾಗುತ್ತದೆ. ಎರಡು ದಿನಗಳ ಹಿಂದೆ ನನ್ನ ಮಗಳು ಜಾತ್ರೆಗೆ ಆಗಮಿಸಿದ್ದಾಳೆ. ಕೆಲವು ಹುಡುಗರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ನಾನು ಸಂಸದೆ ಹಾಗೂ ಕೇಂದ್ರ ಸಚಿವೆಯಾಗಿ ಬಾರದೆ ಒಬ್ಬ ತಾಯಿಯಾಗಿ ನ್ಯಾಯ ಪಡೆಯಲು ಬಂದಿದ್ದೇನೆ. ನಾನು ಗುಜರಾತಿನಲ್ಲಿದ್ದಾಗ, ನನ್ನ ಮಗಳು ಕರೆ ಮಾಡಿ ಜಾತ್ರೆಯಿಂದ ಮನೆಗೆ ಹೋಗುವುದಾಗಿ ತಿಳಿಸಿದಳು. ನಾನು ಭದ್ರತಾ ಸಿಬ್ಬಂದಿಯೊಂದಿಗೆ ತೆರಳುವಂತೆ ಸೂಚಿಸಿದೆ. ನನ್ನ ಮಗಳು ಹಾಗೂ ಆಕೆಯ ಸ್ನೇಹಿತೆಯರು ವಾಪಸ್‌ ತೆರಳುತ್ತಿದ್ದಾಗ ಒಂದಷ್ಟು ಹುಡುಗರು ಆಕೆಯನ್ನು ಹಿಂಬಾಲಿಸಿ ತಳ್ಳಿ ಕಿರುಕುಳ ನೀಡಿದ್ದಾರೆ. ಫೋಟೊ ಹಾಗೂ ವಿಡಿಯೋಗಳನ್ನು ತೆಗೆದುಕೊಂಡಿದ್ದಾರೆ. ನಮ್ಮ ಭದ್ರತಾ ಸಿಬ್ಬಂದಿ ಪ್ರಶ್ನಿಸಿದಾಗ ಹುಡುಗರು ಕೆಟ್ಟದಾಗಿ ವರ್ತಿಸಿದ್ದಾರೆ. 30 ರಿಂದ 40 ಜನರ ದುಷ್ಕರ್ಮಿಗಳ ಗುಂಪು ಸ್ಥಳದಲ್ಲಿತ್ತು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯ ‘ಗುಜರಾತ್ ಮಾಡೆಲ್’ ಬಚ್ಚಿಟ್ಟ ಸತ್ಯಗಳು!

ಮುಕ್ತೈನಗರ ಉಪವಿಭಾಗೀಯ ಪೊಲೀಸ್ ಅಧಿಕಾರಿ ಕೃಷ್ಣತ್ ಪಿಂಗಳೆ ಈ ಕುರಿತು ಪ್ರತಿಕ್ರಿಯಿಸಿ, 2025ರ ಫೆಬ್ರವರಿ 28ರಂದು ಕೊತ್ತಲಿ ಗ್ರಾಮದಲ್ಲಿ ಯಾತ್ರೆ ನಡೆದಿತ್ತು. ಯಾತ್ರೆಯಲ್ಲಿ ಅನಿಕೇತ್ ಘುಯಿ ಮತ್ತು ಆತನ 6 ಮಂದಿ ಸ್ನೇಹಿತರು ಬಾಲಕಿಯರಿಗೆ ಕಿರುಕುಳ ನೀಡಿದ್ದಾರೆ. ನಾವು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಐಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣವನ್ನು ದಾಖಲಿಸಿದ್ದೇವೆ. ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ ಆರು ಮಂದಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...