ಕೇರಳ | ಎಕ್ಸ್‌ಪ್ರೆಸ್‌ ರೈಲು ಸಂಚಾರ ವೇಳೆ ವ್ಯಕ್ತಿ ದಾಳಿ : ಹಳಿಗಳ ಮೇಲೆ ಮೂವರ ಶವ ಪತ್ತೆ

Date:

  • ಕೊರಪುಳ ರೈಲ್ವೆ ಸೇತುವೆ ಬಳಿ ಎಕ್ಸ್‌ ಪ್ರೆಸ್‌ ರೈಲು ಸಂಚಾರ ವೇಳೆ ಘಟನೆ
  • ಕೋಯಿಕ್ಕೋಡ್‌ ಆಸ್ಪತ್ರೆ ಸೇರಿ ನಾನಾ ಆಸ್ಪತ್ರೆಗಳಿಗೆ ಗಾಯಾಳುಗಳು ದಾಖಲು

ಎಕ್ಸ್‌ಪ್ರೆಸ್‌ ರೈಲು ಸಂಚಾರದ ವೇಳೆ ಅಪರಿಚಿತ ಸಹ ಪ್ರಯಾಣಿಕರ ದಾಳಿ ಮಾಡಿದ ಗಂಟೆಗಳ ನಂತರ ಕೇರಳದ ಕೋಯಿಕ್ಕೋಡ್ ಬಳಿಯ ಎಲಾಥುರ್‌ ರೈಲ್ವೆ ನಿಲ್ದಾಣದ ಹಳಿಗಳ ಮೇಲೆ ಮೂವರ ಶವ ಪತ್ತೆಯಾಗಿದೆ ಎಂದು ಸೋಮವಾರ (ಏಪ್ರಿಲ್ 3) ವರದಿಯಾಗಿದೆ.

ಭಾನುವಾರ (ಏಪ್ರಿಲ್‌ 2) ರಾತ್ರಿ ರೈಲು ಹಳಿಗಳಲ್ಲಿ ಮಹಿಳೆ, ಮಗು ಹಾಗೂ ಪುರುಷನ ಶವ ಪತ್ತೆಯಾಗಿದೆ. ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

ಭಾನುವಾರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸಂಭವಿಸಿದ ಬೆಂಕಿ ದಾಳಿ ಘಟನೆ ನಂತರ ಮೃತರು ರೈಲಿನಿಂದ ಕಾಣೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್‌ ಎಕ್ಸ್‌ಪ್ರೆಸ್‌ ರೈಲು ಭಾನುವಾರ ರಾತ್ರಿ 9.45ರ ಸುಮಾರಿಗೆ ಕೋಯಿಕ್ಕೋಡ್‌ ನಗರ ದಾಟಿ ಕೊರಪುಳ ರೈಲ್ವೆ ಸೇತುವೆಯನ್ನು ತಲುಪಿದಾಗ ರೈಲಿನಲ್ಲಿ ಅಪರಿಚಿತ ವ್ಯಕ್ತಿ ಸಹ ಪ್ರಯಾಣಿಕನೊಬ್ಬನ ಮೇಲೆ ದಾಳಿ ಮಾಡಿದ್ದಾನೆ. ನಂತರ ಆತನಿಗೆ ಬೆಂಕಿ ಹಚ್ಚಿದ್ದಾನೆ. ಇದರಿಂದ ರೈಲಿನಲ್ಲಿದ್ದ ಇತರ ಎಂಟು ಮಂದಿಗೆ ಸುಟ್ಟ ಗಾಯಗಳಾದವು.

ಘಟನೆಯ ನಂತರ ಅಪರಿಚಿತ ವ್ಯಕ್ತಿಯು ಅಲ್ಲಿಂದ ಪರಾರಿಯಾದನು. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ಎಕ್ಸ್‌ಪ್ರೆಸ್‌ ರೈಲು ಕಣ್ಣೂರು ತಲುಪಿದಾಗ ಅದರಲ್ಲಿದ್ದ ಮಹಿಳೆ ಹಾಗೂ ಮಗು ನಾಪತ್ತೆಯಾಗಿದ್ದರು.

“ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮಹಿಳೆ ಹಾಗೂ ಮಗುವನ್ನು ಹುಡುಕುತ್ತಿದ್ದ. ಮಹಿಳೆಯ ಹೆಜ್ಜೆ ಗುರುತು, ಆಕೆಯ ಮೊಬೈಲ್‌ ಫೋನ್‌ ಪತ್ತೆಯಾಗಿದೆ” ಎಂದು ಕಣ್ಣೂರಿನಲ್ಲಿ ಪ್ರಯಾಣಿಕನೊಬ್ಬ ಮಾಧ್ಯಮಗಳಿಗೆ ತಿಳಿಸಿದರು.

ರೈಲು ಸಂಚಾರ ವೇಳೆ ನಾಪತ್ತೆಯಾಗಿದ್ದವರ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ನಗರ ಪೊಲೀಸರು ಹುಡುಕಾಟ ನಡೆಸಿದರು. ಶೋಧ ನಡೆಸುವಾಗ ರೈಲ್ವೆ ಹಳಿಗಳ ಮೇಲೆ ಮಹಿಳೆ, ಮಗ, ನಡು ವಯಸ್ಸಿನ ಪುರುಷನ ಶವ ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ರಾಹುಲ್‌ ಗಾಂಧಿ ಸರ್ವಾಧಿಕಾರ ವಿರುದ್ಧದ ಒಂದು ಕ್ರಾಂತಿ: ನವಜೋತ್‌ ಸಿಂಗ್‌ ಸಿಧು

ಮೃತರು ರೈಲಿನಿಂದ ಜಿಗಿದಿರಬಹುದು ಎಂದು ಶಂಕಿಸಲಾಗಿದೆ. ಎಕ್ಸ್‌ಪ್ರೆಸ್‌ ರೈಲು ಬೆಂಕಿ ದಾಳಿಯಲ್ಲಿ ಒಟ್ಟು ಒಂಬತ್ತು ಮಂದಿ ಗಾಯಗೊಂಡಿದ್ದು ಕೋಯಿಕ್ಕೋಡ್‌ ಸೇರಿ ನಾನಾ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...