ಯುಪಿ | 5 ತಿಂಗಳಲ್ಲಿ ರಸ್ತೆ ಅಪಘಾತಕ್ಕೆ 7,700 ಮಂದಿ ಬಲಿ

Date:

ಈ ವರ್ಷದ ಜನವರಿ 1ರಿಂದ ಮೇ 20ರವರೆಗೆ (5 ತಿಂಗಳು) ಉತ್ತರ ಪ್ರದೇಶದಲ್ಲಿ 13,000 ರಸ್ತೆ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 7,700 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದಲ್ಲಿ ಸರ್ಕಾರದ ‘ರಸ್ತೆ ಸುರಕ್ಷತೆ ಮತ್ತು ಜಾಗೃತಿ ಘಟಕ’ವು ನಡೆಸಿರುವ ವಿಶ್ಲೇಷಣೆಯಲ್ಲಿ ಈ ಅಂಕಿಅಂಶ ಹೊರಬಿದ್ದಿದೆ. ವರದಿಯಾಗಿರುವ ಅಪಘಾತಗಳಲ್ಲಿ ಹೆಚ್ಚಿನವು ಮಧ್ಯಾಹ್ನ ಮತ್ತು ಸಂಜೆ ಸಮಯದಲ್ಲಿ ಸಂಭವಿಸಿದ್ದು, ಈ ಸಮಯವು ರಾಜ್ಯದಲ್ಲಿ ಅಪಾಯಕಾರಿ ಅವಧಿಗಳೆಂದು ಗುರುತಿಸಲಾಗಿದೆ.

2024ರಲ್ಲಿ, ಉತ್ತರ ಪ್ರದೇಶದಲ್ಲಿ 46,052 ರಸ್ತೆ ಅಪಘಾತಗಳು ಸಂಭವಿಸಿದ್ದವು. 24,118 ಮಂದಿ ಸಾವನ್ನಪ್ಪಿದರೆ, 34,665 ಜನರು ಗಾಯಗೊಂಡಿದ್ದರು. 2024ಕ್ಕೆ ಹೋಲಿಸಿದರೆ, 2023ರಲ್ಲಿ 44,534 ಅಪಘಾತಗಳು ಸಂಭವಿಸಿದ್ದು, 23,652 ಸಾವುಗಳು ಮತ್ತು 31,098 ಗಾಯಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರ್ಷ ಸಂಭವಿಸಿರುವ ಎಲ್ಲ ಅಪಘಾತಗಳ ಪೈಕಿ 60% ಅಪಘಾತಗಳು ಮಧ್ಯಾಹ್ನ (ಮಧ್ಯಾಹ್ನ 12 ರಿಂದ ಸಂಜೆ 6) ಮತ್ತು ಸಂಜೆ (ಸಂಜೆ 6 ರಿಂದ ರಾತ್ರಿ 9) ಗಂಟೆಯ ಅವಧಿಯಲ್ಲಿ ಸಂಭವಿಸಿವೆ ಎಂದು ವಿಶ್ಲೇಷಣೆಯು ವಿವರಿಸಿದೆ.

ಮಧ್ಯಾಹ್ನದ ಸಮಯವು ಅತ್ಯಂತ ಮಾರಕ ಅವಧಿಯಾಗಿದ್ದು, ಆ ಸಮಯದಲ್ಲಿ 4,352 ಅಪಘಾತಗಳು ಮತ್ತು 2,238 ಸಾವುಗಳು ಸಂಭವಿಸಿವೆ. ಸಂಜೆಯ ಸಮಯದಲ್ಲಿ 3,254 ಅಪಘಾತಗಳು ಮತ್ತು 1,945 ಸಾವುಗಳು ಸಂಭವಿಸಿವೆ ಎಂದು ವರದಿ ಹೇಳಿದೆ.

ಇನ್ನು, ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ 2,629 ಅಪಘಾತಗಳು ಮತ್ತು 1,447 ಸಾವುಗಳು ಸಂಭವಿಸಿವೆ. ಅಲ್ಲದೆ, ರಾತ್ರಿ 9ರಿಂದ ಬೆಳಗಿನ ಜಾವ 3 ರವರೆಗೆ 2,585 ಅಪಘಾತಗಳು ಮತ್ತು 1,699 ಸಾವುಗಳು ವರದಿಯಾಗಿವೆ.

ಈ ಲೇಖನ ಓದಿದ್ದೀರಾ?: ಪ್ರತಿಷ್ಠಿತ ಹಾರ್ವರ್ಡ್ ವಿವಿ ಮೇಲೆ ಟ್ರಂಪ್ ವಕ್ರದೃಷ್ಟಿ: ವಿದ್ಯಾರ್ಥಿಗಳು ಬೀದಿಪಾಲು

ಚಾಲಕರು ನಿದ್ರೆಯಿಲ್ಲದೆ, ದಣಿದು ವಾಹನ ಚಾಲನೆ ಮಾಡುವ ಕಾರಣದಿಂದಾಗಿಯೇ ಹೆಚ್ಚು ಅಪಘಾತಗಳು ಸಂಭವಿಸಿವೆ ಎಂದು ಹೇಳಲಾಗಿದೆ.

ಹೀಗಾಗಿ, ತಡರಾತ್ರಿ ವಾಹನ ಚಲಾಯಿಸುವವರಿಗೆ ವಿಶ್ರಾಂತಿ ಪ್ರದೇಶಗಳು ಮತ್ತು 24/7 ಸಹಾಯವಾಣಿಗಳನ್ನು ಸ್ಥಾಪಿಸಲು ಹಾಗೂ ಚಾಲಕರಿಗೆ ನೆರವಾಗಲು ಹೆದ್ದಾರಿ ಚೆಕ್-ಪೋಸ್ಟ್‌ಗಳನ್ನು ಸಕ್ರಿಯಗೊಳಿಸುವಂತೆ ವರದಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...