ತಾಳಿ ಕಟ್ಟದೆ ಪರಾರಿಯಾಗಲು ಯತ್ನಿಸಿದ ವರ; 20 ಕಿಮೀ ಬೆನ್ನಟ್ಟಿ ಮಂಟಪಕ್ಕೆ ಕರೆತಂದ ವಧು

Date:

  • ಪರಸ್ಪರ ಪ್ರೀತಿಸಿದ್ದ ಜೋಡಿ, ತಾಳಿ ಕಟ್ಟುವ ಸಮಯದಲ್ಲಿ ಕೈಕೊಟ್ಟಿದ್ದ ವರ
  • ಬೇರೆ ಮದುವೆಯಾಗಲು ಹೊರಟಿದ್ದ ವರನನ್ನು 20 ಕಿಮೀ ಓಡಿ ಹಿಡಿದ ವಧು

ಮಂಟಪದಿಂದ ಓಡಿ ಹೋಗುತ್ತಿದ್ದ ವರನನ್ನು ವಧು 20 ಕಿಮೀ ಬೆನ್ನಟ್ಟಿ ಹಿಡಿದಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾರಾದರಿ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ನಿವಾಸಿಯಾದ ಈ ಯುವತಿ, ಕಳೆದ ಎರಡೂವರೆ ವರ್ಷದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಎರಡೂ ಮನೆಗಳಲ್ಲಿ ಗೊತ್ತಾಗಿ, ವಿರೋಧ ವ್ಯಕ್ತವಾಗಿತ್ತು. ಮದುವೆ ಸಾಧ್ಯವಿಲ್ಲ ಎನ್ನುವ ಮಟ್ಟಕ್ಕೆ ವಿಷಯ ಹೋಗಿತ್ತು. ಯುವತಿ ಹೇಗೋ ಕಾಡಿಬೇಡಿ ಮನೆಯವರನ್ನು ಒಪ್ಪಿಸಿದಳು. ಮದುವೆಯು ಸ್ಥಳೀಯ ಭೂತೇಶ್ವರನಾಥ ದೇವಸ್ಥಾನದಲ್ಲಿ ನಿಶ್ಚಯವಾಗಿತ್ತು.

ಇನ್ನೇನು ಎಲ್ಲವೂ ಸರಿಯಾಗಿ ಮಹೂರ್ತದ ಸಮಯದಲ್ಲಿ ಮದುವೆ ನಡೆಯಬೇಕು ಎನ್ನುವಷ್ಟರಲ್ಲಿ ವರ ನಾಪತ್ತೆ. ಬಹಳ ಸಮಯದವರೆಗೂ ಕಾದರೂ ವರ ಪತ್ತೆಯಾಗಲಿಲ್ಲ. ಕಾದು ಕಾದು ಸುಸ್ತಾದ ವಧು, ಭಾವೀ ಪತಿಗೆ ಕರೆ ಮಾಡುತ್ತಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಬಿಜೆಪಿಯ ಮಾಜಿ ಶಾಸಕ ಬಂಧನ

ಕರೆ ಸ್ವೀಕರಿಸಿದ ಗಂಡು, ತಾನು ತಾಯಿಯನ್ನು ಕರೆದುಕೊಂಡು ಬರಲು ಮನೆಗೆ ಹೋಗುತ್ತಿರುವುದಾಗಿ ಹೇಳಿದ್ದ. ಆದರೆ ವರನ ಮಾತು ವಧುವಿಗೆ ಯಾಕೋ ಅನುಮಾನ ಕಾಡಲು ಶುರುವಾಯಿತು. ಮದುವೆಯಿಂದ ತಪ್ಪಿಸಿಕೊಂಡು ಓಡಿ ಹೋಗಿ ಇನ್ನೊಂದು ಮದುವೆಯಾಗುವುದಾಗಿ ಮಾಹಿತಿ ಸಿಕ್ಕಿದೆ. ಒಂದೂ ಕ್ಷಣವೂ ತಡ ಮಾಡದೇ ಆತನನ್ನು ಹಿಡಿಯಲು ಮುಂದಾಗುತ್ತಾಳೆ. ಸುಮಾರು 20 ಕಿಮೀ ಚೇಸ್ ಮಾಡಿದ್ದಾಳೆ.

ಬಿಮೋರಾ ಪೊಲೀಸ್ ಠಾಣೆ ವ್ಯಾಪ್ತಿಯ ಬಳಿ ವರ ಬಸ್ ಹತ್ತುವಾಗ ಸಿಕ್ಕಿ ಬಿದ್ದಿದ್ದಾನೆ. ನಡು ರಸ್ತೆಯಲ್ಲಿ ಇಬ್ಬರ ನಡುವೆ ಸಾಕಷ್ಟು ನಾಟಕೀಯ ಬೆಳವಣಿಗೆ ನಡೆದಿದೆ. ಕೊನೆಗೂ ಹಠ ಬಿಡದ ವಧು ವರನನ್ನು ಮದುವೆ ಮಂಟಪಕ್ಕೆ ಕರೆ ತರುವಲ್ಲಿ ಯಶಸ್ವಿಯಾಗಿದ್ದಾಳೆ. ಜಗಳವು ಸುಖಾಂತ್ಯವಾಗಿ ಇಬ್ಬರು ಮದುವೆ ಭೀಮೋರ ದೇವಸ್ಥಾನದಲ್ಲಿ ಎರಡೂ ಕುಟುಂಬದವರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದೆ.

ಮದುವೆಯಾಗದೆ ಮೋಸ ಮಾಡಿ ಓಡಿ ಹೋಗಲು ಯತ್ನಿಸಿದ ವರನನ್ನು 20 ಕಿಮೀ ಚೇಸ್ ಮಾಡಿ ಕರೆತರುವ ಬದಲು ಪೊಲೀಸರಿಗೆ ಹಿಡಿದುಕೊಟ್ಟು ಶಿಕ್ಷೆ ಕೊಡಿಸಬಹುದಿತ್ತು ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...