ಸಂಗೀತ ವಾದ್ಯಗಳೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ಬಂದ ವರ; ವಧುವು ಇಲ್ಲ, ಮಂಟಪವೂ ನಾಪತ್ತೆ

Date:

ಯುವಕ, ಯುವತಿಯರಿಬ್ಬರಿಗೂ ಪ್ರೇಮಾಂಕುರವಾಗಿತ್ತು. ಯುವತಿಯು ಯುವಕನನ್ನು ಮದುವೆಯಾಗಲು ಒಪ್ಪಿಗೆ ನೀಡಿದ್ದಳು. ಆಕೆಯ ಕುಟುಂಬದವರು ಸಮ್ಮತಿಸಿದ್ದರು. ವಿವಾಹವಾಗುವ ಸಂಭ್ರಮದಲ್ಲಿದ್ದ ಯುವಕ ‘ಸ್ವರ್ಗಕ್ಕೆ ಮೂರೇ ಗೇಣು’ ಅಂದುಕೊಂಡು ಮದುವೆಯ ತಯಾರಿ ಮಾಡಿಕೊಂಡ. ಲಗ್ನವಾಗುವ ಮುನ್ನಾದಿನ ಯುವತಿ ಮನೆಯವರು ಕಾಯ್ದಿರಿಸಿದ್ದ ಮದುವೆ ಮಂಟಪದ ಸ್ಥಳಕ್ಕೆ ಅದ್ಧೂರಿ ಮೆರವಣಿಗೆಯೊಂದಿಗೆ ಆಗಮಿಸಿದ್ದಾನೆ. ಸ್ಥಳಕ್ಕೆ ಬಂದು ನೋಡಿದರೆ ಆಘಾತ ಕಾದಿತ್ತು ವಧುವಾಗಲಿ ಆಕೆಯ ಕುಟುಂಬದವರಾಗಲಿ ಕಾಣಲಿಲ್ಲ. ಅಸಲಿಗೆ ಮದುವೆ ಮಂಟಪವು ಅಲ್ಲಿರಲಿಲ್ಲ. ಈ ಘಟನೆ ನಡೆದಿರುವುದು ಉತ್ತರ ಪ್ರದೇಶ ದ ಲಖನೌದ ರಹೀಮಾಬಾದ್‌ ಪ್ರದೇಶದಲ್ಲಿ.

ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಸೋನು ಎಂಬಾತ ಚಂಡೀಗಢದ ಕಾಜಲ್‌ ಎಂಬ ಮಹಿಳೆಯನ್ನು ಕೆಲವು ತಿಂಗಳ ಹಿಂದೆ ಭೇಟಿಯಾಗಿದ್ದ. ಇಬ್ಬರ ಭೇಟಿ ಪರಸ್ಪರ ಪ್ರೇಮಕ್ಕೆ ತಿರುಗಿ ಮದುವೆಯಾಗುವುದಾಗಿ ನಿರ್ಧರಿಸಿದ್ದಾರೆ. ಶೀಶ್‌ಪಾಲ್‌ ಎಂಬ ಯುವತಿ ಕಾಜಲ್‌ ತಂದೆ ಎಂಬುವವರೊಂದಿಗೆ ಸೋನು ಫೋನ್‌ ಮೂಲಕ ಮಾತನಾಡಿದ್ದಾನೆ. ಅವರು ಕೂಡ ಮದುವೆಗೆ ಸಮ್ಮತ್ತಿಸಿದ್ದರು. ಮದುವೆಯ ದಿನಾಂಕವನ್ನು ಜುಲೈ 11 ರಂದು ನಿಶ್ಚಿಯಿಸಿ ಮಂಟಪದ ವಿಳಾಸವನ್ನು ವರನ ಕಡೆಯವರಿಗೆ ನೀಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ; ‘ಚಾನ್ಸೇ ಇಲ್ಲ’ ಎಂದ ಕೇಂದ್ರ ಸಚಿವ ಮಾಂಝಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದುವೆಯ ಹಿಂದಿನ ದಿನ ಜುಲೈ 10ರಂದು ಆರತಕ್ಷತೆ ನಡೆಯುವ ದಿನ ಮಧುಮಗ ಸೋನು, ವದು ಕಾಜಲ್‌ನೊಂದಿಗೆ ಮಾತನಾಡಿದ್ದಾನೆ. ಸೋನುವಿನೊಂದಿಗೆ ಮಾತನಾಡುವ ಸಂದರ್ಭದಲ್ಲಿ ಆಕೆ ಮದುವೆಯ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು ಸಂಬಂಧಿಕರೆಲ್ಲರು ಮಂಟಪ ಹಾಗೂ ಮನೆಯ ಬಳಿ ಬಂದಿದ್ದಾರೆ ಎಂದು ಭರವಸೆ ನೀಡಿದ್ದಳು. ನಾನು ಈಗ ಹೆಚ್ಚು ಮಾತನಾಡುವುದಕ್ಕೆ ಸಾಧ್ಯವಿಲ್ಲ ನೀವು ಮೆರವಣಿಗೆಯೊಂದಿಗೆ ಮಂಟಪದ ಸ್ಥಳಕ್ಕೆ ಆಗಮಿಸಿ ಎಂದು ಫೋನ್‌ ಸ್ಥಗಿತಗೊಳಿಸಿದ್ದಳು.

ಇವರಿಬ್ಬರ ಈ ಮಾತಿನ ನಂತರ ಫೋನ್‌ ಸ್ವಿಚ್‌ ಆಫ್ ಆಗಿತ್ತು. ಕಾಜಲ್‌ ನೀಡಿದ್ದ ಲಖನೌದ ರಹೀಮಾಬಾದ್‌ ಪ್ರದೇಶದಲ್ಲಿ ಮಂಟಪದ ಸ್ಥಳ ಎನ್ನಲಾದ ಪ್ರದೇಶಕ್ಕೆ ಸೋನು ಹಾಗೂ ಆತನ ಕುಟುಂಬದವರು ಮೆರೆವಣಿಗೆಯೊಂದಿಗೆ ಆಗಮಿಸಿದಾಗ ಅಲ್ಲಿ ಮಂಟಪವು ಇರಲಿಲ್ಲ. ವಧು ಹಾಗೂ ಆಕೆಯ ಕುಟುಂಬದವರು ಮೊದಲೇ ಕಾಣಲಿಲ್ಲ. ಸ್ಥಳೀಯರನ್ನು ವಿಚಾರಿಸಿದಾಗ ಅಂತಹ ಸ್ಥಳ ಇಲ್ಲವೆಂದು ತಿಳಿಸಿದ್ದಾರೆ. ರಾತ್ರಿಯಿಡಿ ವಧು ಹಾಗೂ ಆಕೆಯ ಕುಟುಂಬದವರಿಗೆ ಫೋನ್‌ ಮಾಡಿದಾಗ ಎಲ್ಲರ ಮೊಬೈಲ್‌ಗಳು ಸ್ವಿಚ್‌ ಆಫ್‌ ಆಗಿದ್ದವು.

ಬೇಸರ ಹಾಗೂ ಆಕ್ರೋಶದೊಂದಿಗೆ ವರನ ಕುಟುಂಬ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಮೋಸ ಮಾಡಿದ ವಧುವಿನ ಕುಟುಂಬದ ವಿರುದ್ಧ ದೂರು ನೀಡಲಾಗಿದೆ. ಲಖನೌ ಜಂಟಿ ಆಯುಕ್ತ ಆಕಾಶ್ ಕುಲಾರಿ, ಪ್ರಕರಣ ದಾಖಲಿಸಲಾಗಿದೆ. ವಧು ಹಾಗೂ ಆಕೆಯ ಕುಟುಂಬದ ಸ್ಥಳವನ್ನು ಪತ್ತೆ ಹಚ್ಚುವುದಾಗಿ ಮಾಹಿತಿ ನೀಡಿದ್ದಾರೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...