ಉತ್ತರ ಪ್ರದೇಶ | ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರದಲ್ಲಿ ಮೆಣಸಿನಕಾಯಿ ಇಟ್ಟು ಚಿತ್ರಹಿಂಸೆ

Date:

ಇಬ್ಬರು ಬಾಲಕರಿಗೆ ಬಲವಂತವಾಗಿ ಮೂತ್ರ ಕುಡಿಸಿ ಅವರ ಗುದದ್ವಾರದಲ್ಲಿ ಮೆಣಸಿನಕಾಯಿ ಇಟ್ಟು ಅಮಾನುಷವಾಗಿ ಚಿತ್ರ ಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯ ಕೊಂಕಟಿ ಚೌರಾಹಾ ಪಟ್ಟಣದಲ್ಲಿ ನಡೆದಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ದೃಶ್ಯದಲ್ಲಿರುವಂತೆ ಕಳ್ಳತನದ ಆರೋಪದ ಮೇಲೆ 15 ಮತ್ತು 10 ವರ್ಷದ ಇಬ್ಬರು ಬಾಲಕರಿಗೆ ಬಲವಂತವಾಗಿ ಮೂತ್ರ ಕುಡಿಸಿ ಗುದದ್ವಾರದಲ್ಲಿ ಮೆಣಸಿನಕಾಯಿ ಉಜ್ಜಿ ಚಿತ್ರಹಿಂಸೆ ನಿಡಲಾಗಿದೆ. ಜೊತೆಗೆ ಕೆಲವು ಅಪರಿಚಿತ ಚುಚ್ಚುಮದ್ದನ್ನು ಸಹ ಅವರಿಗೆ ನೀಡಲಾಗಿದೆ.     

ಘಟನೆಯ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆರೋಪಿಗಳು ಇಬ್ಬರು ಅಪ್ರಾಪ್ತರನ್ನು ನಿಂದಿಸುತ್ತಿರುವುದನ್ನು ನೋಡಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜೈಪುರ | ಪತಿಯಿಂದ ಲಂಚ ಸ್ವೀಕಾರ: ಜೈಪುರ ಮೇಯರ್‌ ವಜಾ

ಸ್ಥಳೀಯ ಗೂಂಡಾಗಳೆಂದು ಗುರುತಿಸಲಾದ ಆರೋಪಿಗಳು ಅಪ್ರಾಪ್ತರ ಖಾಸಗಿ ಭಾಗಗಳಿಗೆ ಹಸಿರು ಮೆಣಸಿನಕಾಯಿ ಇಟ್ಟು ಉಚ್ಚಿದ ನಂತರ ಬಲವಂತವಾಗಿ ಮಕ್ಕಳಿಗೆ ಮೂತ್ರ ಕುಡಿಸಿದ್ದಾರೆ.

ವಿಡಿಯೋದಲ್ಲಿರುವಂತೆ ಮಕ್ಕಳಿಬ್ಬರಿಗೆ ಚುಚ್ಚುಮದ್ದು ನೀಡುತ್ತಿರುವಾಗ ಅವರು ಬೇಡ ಎಂದು ಕೈಗಳನ್ನು ಅಡ್ಡ ಇಡುತ್ತಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಪತ್ರಾ ಠಾಣಾ ಪ್ರದೇಶದ ಕೊಂಕಟಿ ಚೌಕ್ ಪ್ರದೇಶದಲ್ಲಿ ಆಗಸ್ಟ್‌ 4ರಂದು ಅರ್ಶನ್ ಎಂಬ ಕೋಳಿ ಮಾಂಸದಂಗಡಿಯಿಂದ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ.

ಮತ್ತೊಂದು ವಿಡಿಯೋದಲ್ಲಿ, ಹುಡುಗರು ತಮ್ಮ ಕೈಗಳನ್ನು ಬೆನ್ನಿನ ಹಿಂದೆ ಕಟ್ಟಿಕೊಂಡು, ಪ್ಯಾಂಟನ್ನು ಕೆಳಕ್ಕೆ ಎಳೆದುಕೊಂಡು ನೆಲದ ಮೇಲೆ ಮಲಗಿರುವುದನ್ನು ತೋರಿಸಲಾಗಿದೆ. ಒಬ್ಬ ವ್ಯಕ್ತಿ ಅವರ ಖಾಸಗಿ ಭಾಗಕ್ಕೆ ಹಸಿರು ಮೆಣಸಿನಕಾಯಿ ಉಜ್ಜಿದ್ದಾನೆ. ನೋವಿನಿಂದ ಬಾಲಕರು ಚೀರಾಡುತ್ತಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ವಿಡಿಯೋದ ಬಗ್ಗೆ ತಿಳಿದ ನಂತರ, ಸಿದ್ಧಾರ್ಥ ನಗರದ ಪೊಲೀಸರು ದಾಖಲಿಸಿರುವ ದೂರಿನ ಆಧಾರದ ಮೇಲೆ ಹಲ್ಲೆ ನಡೆಸಿದ 6 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಕಾನೂನಿನ ಸಂಬಂಧಿತ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...