‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

Date:

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ ನಿಗಮ್‌ ಅಗ್ರಸ್ಥಾನ ಪಡೆದಿದ್ದಳು. ಆಕೆ ಗಮನಾರ್ಹ ಯಶಸ್ಸನ್ನ ಸಾಧಿಸಿದರೂ ಸಹ ಆಕೆಯ ಮುಖಚಹರೆಯ ಕಾರಣಕ್ಕಾಗಿ ಕೆಲವರು ಆಕೆಯನ್ನು ಟ್ರೋಲ್ ಮಾಡಿ ಅಪಹಾಸ್ಯ ಮಾಡಿದ್ದರು. ಆದರೂ, ಧೃತಿಗೆಡದ 16 ವರ್ಷದ ವಿದ್ಯಾರ್ಥಿನಿ ಮಹಿಳೆಯರಿಗೆ ಒಂದು ಸಂದೇಶ ರವಾನಿದ್ದಾಳೆ. ಅದೇನೆಂದರೆ, “ಆತ್ಮೀಯ ಮಹಿಳೆಯರೇ, ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸುವ ಪ್ರಯತ್ನ ಮಾಡಬೇಡಿ”

ಹೌದು, ಭಾರತೀಯ ಖ್ಯಾತ ಸಂಗೀತಗಾರ ಅನೀಶ್ ಭಗತ್ ಅವರು ಯುಪಿ 10ನೇ ತರಗತಿಯ ಟಾಪರ್ ಪ್ರಾಚಿ ನಿಗಮ್ ಅವರನ್ನು ‘ಗ್ಲೋ ಅಪ್’ ವ್ಲಾಗ್‌ಗಾಗಿ ಭೇಟಿ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಶೇರ್ ಮಾಡಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ದುರದೃಷ್ಟವಶಾತ್, ಜನರ ಗಮನವು ಯುಪಿ ಬೋರ್ಡ್ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದಿದ್ದ ಪ್ರಾಚಿ ನಿಗಮ್ ಶೈಕ್ಷಣಿಕ ಯಶಸ್ಸಿನ ಮೇಲೆ ಇರಲಿಲ್ಲ. ಬದಲಾಗಿ ಆಕೆಯ ಮುಖದ ಮೇಲಿರುವ ಕೂದಲಿನಿಂದ ಹೆಚ್ಚಾಗಿ ಟ್ರೋಲ್‌ಗೆ ಒಳಗಾಗಿದ್ದಳು. ಹಲವರು ಆಕೆಯನ್ನು ಅಪಹಾಸ್ಯ ಮಾಡುತ್ತಿದ್ದರು. ಇನ್ನು ಕೆಲವು ರೇಜರ್ ಕಂಪನಿಗಳು ಆಕೆಯ ಹೆಸರು ಬಳಸಿಕೊಂಡು ಜಾಹೀರಾತು ನೀಡಲು ಆರಂಭಿಸಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಇದೆಲ್ಲ ಟ್ರೋಲ್, ಟೀಕೆಗಳ ಹೊರತಾಗಿಯೂ ಪ್ರಾಚಿ ನಿಗಮ್ ಅವರು ‘ಗ್ಲೋ-ಅಪ್’ ವೀಡಿಯೊದಲ್ಲಿ ಮಹಿಳೆಯರಿಗೆ ಶಕ್ತಿಯುತ ಸಂದೇಶ ನೀಡಿದ್ದಾಳೆ. ಆಕೆಯನ್ನು ಸಂದರ್ಶಿಸಿರುವ ಅನೀಶ್ ಭಗತ್, “ನಾನು ಇವತ್ತು ಉತ್ತರ ಪ್ರದೇಶದ ಸೀತಾಪುರದ ಮೆಹಮುದಾಬಾದ್‌ ನಗರಕ್ಕೆ ತೆರಳುತ್ತಿದ್ದೇನೆ. ಅಲ್ಲಿ ನಾವೆಲ್ಲರೂ ಹೆಮ್ಮೆ ಪಡುವಂತಹ ವ್ಯಕ್ತಿಯೊಬ್ಬರನ್ನು ಭೇಟಿ ಮಾಡಲು ತೆರಳುತ್ತಿದ್ದೇನೆ. ಅವರು ತಮ್ಮ 10ನೇ ತರಗತಿಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಟಾಪರ್‌ ಆಗಿದ್ದಾರೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

 

View this post on Instagram

 

A post shared by Anish Bhagat (@anishbhagatt)

ಆಕೆಯನ್ನು ಭೇಟಿ ಮಾಡಿದ ಭಗತ್ ಅವರು ಪ್ರಾಚಿಗೆ ಹೂವು ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು 10ನೇ ತರಗತಿಯ ಬೋರ್ಡ್ ಪರೀಕ್ಷೆಗಳ ನಂತರ ಆಕೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಆದವು. ಈ ವೇಳೆ, ಪ್ರಾಚಿ ಹಲವಾರು ಸಮಸ್ಯೆಗಳನ್ನು ಎದುರಿಸಿದರು. ಜನರು ಕ್ರಮೇಣ ಆಕೆಯ ಯಶಸ್ಸನ್ನು ಮರೆತು ಮುಖ ಚಹರೆ ಮೇಲೆ ಇದ್ದ ಕೂದಲಿಗೆ ಪ್ರಾಮುಖ್ಯತೆ ಕೊಟ್ಟು, ಟ್ರೋಲ್ ಮಾಡಿದರು. ಯಾಕೆ ಎಲ್ಲ ಮಹಿಳೆಯರು ತಮ್ಮ ಜೀವನದಲ್ಲಿ ಈ ರೀತಿಯ ಸಮಸ್ಯೆಯನ್ನು ಅನುಭವಿಸಬೇಕು ಎಂದು ಕೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ವಿಮಾನ ನಿಲ್ದಾಣ | ಶೌಚಾಲಯದ ಕನ್ನಡಿ ಮೇಲೆ ‘ಸ್ಫೋಟ ಮಾಡುವುದಾಗಿ’ ಬೆದರಿಕೆ ಸಂದೇಶ

ಮುಂದುವರೆದು ಭಗತ್ ಅವರು, ಪ್ರಾಚಿ ನಿಗಮ್ ಗ್ಲೋ ಅಪ್ ಮಾಡುತ್ತೇನೆ ಎಂದು ಹೇಳುತ್ತಾರೆ. ನೇಲ್‌ ಪಾಲಿಶ್ ಹಾಕಿ, ಮಸ್ಕರ್ ಹಾಕುವಂತೆ ಈ ವಿಡಿಯೋದಲ್ಲಿ ತೋರಿಸಲಾಗುತ್ತದೆ. ಆದರೆ, ಕೊನೆಗೆ ಪ್ರಾಚಿ ನಾನು ನಾನಾಗಿಯೇ ಇದೀನಿ ಎನ್ನುತ್ತಾಳೆ. ಅಲ್ಲದೇ, ಮಹಿಳೆಯರಿಗೆ ಒಂದು ಖಡಕ್ ಸಂದೇಶವನ್ನು ಕೂಡ ಈ ಸಮಯದಲ್ಲಿ ನೀಡಿದ್ದು, “ಆತ್ಮೀಯ ಮಹಿಳೆಯರೇ, ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿ ಪಡಿಸುವ ಪ್ರಯತ್ನ ಮಾಡಬೇಡಿ” ಎಂದಿದ್ದಾಳೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...