ಅಮೆರಿಕದಿಂದ ಗಡಿಪಾರಾದ 104 ಅಕ್ರಮ ವಲಸಿಗರು ಭಾರತಕ್ಕೆ ವಾಪಸ್

Date:

ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳನ್ನು ಹೊತ್ತ ಅಮೆರಿಕದ ಮಿಲಿಟರಿ ಸಿ -17 ವಿಮಾನವು ಇಂದು ಮಧ್ಯಾಹ್ನ ಪಂಜಾಬ್‌ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಿತು.

ಮಂಗಳವಾರ ಮಧ್ಯಾಹ್ನ ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಿಂದ ಹೊರಟ ಈ ವಿಮಾನದಲ್ಲಿ 11 ಸಿಬ್ಬಂದಿ ಮತ್ತು 45 ಅಮೆರಿಕದ ಅಧಿಕಾರಿಗಳು ಇದ್ದರು. ವರದಿಗಳ ಪ್ರಕಾರ ಗುಜರಾತ್ ಮತ್ತು ಹರಿಯಾಣ ಮೂಲದವರು ತಲಾ 33 ಜನರಿದ್ದಾರೆ. 30 ಜನರು ಪಂಜಾಬ್, ತಲಾ ಇಬ್ಬರು ಪ್ರಯಾಣಿಕರು ಉತ್ತರ ಪ್ರದೇಶ ಮತ್ತು ಚಂಡೀಗಢದವರು, ಮೂವರು ಮಹಾರಾಷ್ಟ್ರ ಮೂಲದವರು ಎಂದು ತಿಳಿದು ಬಂದಿದೆ.

ಇದರಲ್ಲಿ 25 ಮಹಿಳೆಯರು ಮತ್ತು 12 ಅಪ್ರಾಪ್ತ ವಯಸ್ಕರು ಸೇರಿದ್ದಾರೆ. 48 ಮಂದಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎನ್ನಲಾಗಿದೆ. ಪಂಜಾಬ್‌ನ 30 ಜನರಲ್ಲಿ ಹೆಚ್ಚಿನವರು ಗುರುದಾಸ್‌ಪುರ, ಅಮೃತಸರ ಮತ್ತು ತರಣ್ ಸೇರಿದಂತೆ ಗಾಜಾ ಪಟ್ಟಿಯಿಂದ ಬಂದವರು, ಇತರರು ಜಲಂಧರ್, ನವನ್‌ಶಹರ್, ಪಟಿಯಾಲ, ಮೊಹಾಲಿ ಮತ್ತು ಸಂಗ್ರೂರ್‌ನವರು ಎಂದು ಪಂಜಾಬ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

ಬಹುತೇಕ ಮಂದಿ ವಿಸಾ ಅವಧಿ ಅಂತ್ಯವಾದ ಬಳಿಕವೂ ಅಕ್ರಮವಾಗಿ ನೆಲೆಸಿದ್ದರು. ಅಮೆರಿಕಾದಿಂದ ಬರುವ ಭಾರತೀಯರಿಗಾಗಿ ಪಂಜಾಬ್ ಪೊಲೀಸರು ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಪಂಜಾಬ್ ಡಿಜಿಪಿ ಗೌರವ್ ಯಾದವ್, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಾವು ಇದರ ಬಗ್ಗೆ ಚರ್ಚಿಸಿದ್ದೇವೆ. ಪಂಜಾಬ್ ಸರ್ಕಾರ ಅವರನ್ನು ಸ್ನೇಹಪರ ರೀತಿಯಲ್ಲಿ ಸ್ವೀಕರಿಸಬೇಕೆಂದು ಅವರು ನಮ್ಮನ್ನು ಕೇಳಿಕೊಂಡಿದ್ದಾರೆ. ಇದಕ್ಕಾಗಿ ವಿಮಾನ ನಿಲ್ದಾಣದಲ್ಲಿ ನಮ್ಮ ಕೌಂಟರ್‌ಗಳನ್ನು ಸ್ಥಾಪಿಸಿದ್ದೇವೆ. ನಾವು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ನಮಗೆ ಯಾವುದೇ ಹೆಚ್ಚಿನ ಮಾಹಿತಿ ಸಿಕ್ಕಾಗಲೆಲ್ಲಾ ನಾವು ಅದನ್ನು ಹಂಚಿಕೊಳ್ಳುತ್ತೇವೆ. ಹೆಚ್ಚಿನ ಸಂಖ್ಯೆಯ ಜನರನ್ನು ಗಡಿಪಾರು ಮಾಡುವ ಸಾಧ್ಯತೆಯಿದೆ ಎಂಬ ದೃಢೀಕರಿಸದ ವರದಿಗಳು ಇನ್ನೂ ನಮ್ಮಲ್ಲಿವೆ ಎಂದು ಹೇಳಿದರು.

ಗಡಿಪಾರದ ಬಹುತೇಕರನ್ನು ಅಮೆರಿಕ – ಮೆಕ್ಸಿಕೊ ಗಡಿಯಲ್ಲಿ ಬಂಧಿಸಲಾಗಿತ್ತು. ಸೆರೆಸಿಕ್ಕವರ ಬಳಿ ಪಾಸ್‌ಪೋರ್ಟ್‌ ಇರಲಿಲ್ಲ. ಬಯೋಮೆಟ್ರಿಕ್‌ ಮೂಲಕ ಪತ್ತೆಹಚ್ಚಲಾಗಿತ್ತು. ಈ ಮೊದಲು 200 ಮಂದಿಯನ್ನು ಮೊದಲ ಹಂತದಲ್ಲಿ ಗಡಿಪಾರು ಮಾಡಲಾಗಿದೆಯೆಂದು ಹೇಳಲಾಯಿತಾದರೂ, ಆನಂತರ 104 ಎಂದು ದೃಢೀಕರಿಸಲಾಗಿದೆ.

ಅಮೆರಿಕದ ಇತಿಹಾಸದಲ್ಲಿಯೇ ಅತೀ ಹೆಚ್ಚು ಜನರನ್ನು ಗಡಿಪಾರು ಮಾಡಲಾಗುತ್ತಿದೆ. ಅಮೆರಿಕದ ಕಸ್ಟಮ್ಸ್‌ ಮತ್ತು ವಲಸೆ ಜಾರಿ ನಿರ್ದೇಶನಾಲಯವು ದಾಖಲೆರಹಿತ 18 ಸಾವಿರ ಭಾರತೀಯರನ್ನು ಗುರುತಿಸಿದೆ. ಸುಮಾರು 7 ಲಕ್ಷಕ್ಕೂ ಹೆಚ್ಚು ಭಾರತೀಯ ಅಕ್ರಮ ವಲಸಿಗರು ಅಮೆರಿಕದಲ್ಲಿ ನೆಲಸಿದ್ದಾರೆ ಎಂದು ಅಂದಾಜಿಸಲಾಗಿದೆ. ಮೆಕ್ಸಿಕೊ, ಎಲ್‌ ಸಾಲ್ವಡಾರ್‌ ನಂತರ ಭಾರತದವರು ಅತಿ ಹೆಚ್ಚು ಅಕ್ರಮ ವಲಸಿಗರಾಗಿದ್ದಾರೆ.

https://twitter.com/PTI_News/status/1887061990675456309?ref_src=twsrc%5Etfw%7Ctwcamp%5Etweetembed%7Ctwterm%5E1887061990675456309%7Ctwgr%5Ea739d8e7e03788ee00076ccfabbd8933cb9112e2%7Ctwcon%5Es1_&ref_url=https%3A%2F%2Fwww.deccanherald.com%2F%2Findia%2Fpunjab%2Fus-plane-carrying-104-deported-indians-lands-in-amritsar-3390539

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...