ತಿರುಪತಿ ಲಾಡು ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಬಳಕೆ, ಸಿಬಿಐನಿಂದ ನಾಲ್ವರ ಬಂಧನ

Date:

ತಿರುಪತಿಯ ಲಾಡು ಪ್ರಸಾದದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನಾಂಶವನ್ನು ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು ತಯಾರಿಸಲು ತುಪ್ಪ ಪೂರೈಸಿದ ಕಂಪನಿಗಳ ನಾಲ್ವರನ್ನು ಬಂಧಿಸಿದೆ. ಬಂಧಿತರನ್ನು ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೋಮಿಲ್ ಜೈನ್, ವೈಷ್ಣವಿ ಡೈರಿಯ ಅಪೂರ್ವ ಚಾವ್ಡಾ ಮತ್ತು ಎಆರ್ ಡೈರಿಯ ರಾಜು ರಾಜಶೇಖರನ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ನಾಲ್ಕು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಬಿಪಿನ್ ಜೈನ್ ಮತ್ತು ಪೋಮಿ ಜೈನ್ ಎಂಬವರು ಭೋಲೆ ಬಾಬಾ ಡೈರಿಯವರು. ವೈಷ್ಣವಿ ಡೈರಿಯ ಅಪೂರ್ವ ಚಾವ್ಡಾ ಮತ್ತು ಎಆರ್ ಡೈರಿಯ (ರಾಜು) ರಾಜಶೇಖರನ್” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇಂಗ್ಲಿಷ್ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಪ್ಪ ಪೂರೈಕೆಯ ಪ್ರತಿ ಹಂತದಲ್ಲೂ ಗಂಭೀರ ನಿಯಮ ಉಲ್ಲಂಘನೆಯು ಎಸ್​​ಐಟಿ ತನಿಖೆ ವೇಳೆ ಬಹಿರಂಗವಾಗಿದೆ. ಹೀಗಾಗಿ, ನಾಲ್ವರನ್ನು ಬಂಧಿಸಲಾಗಿದೆ. ವೈಷ್ಣವಿ ಡೈರಿ ಅಧಿಕಾರಿಗಳು ದೇವಸ್ಥಾನಕ್ಕೆ ತುಪ್ಪ ಪೂರೈಸಲು ಎಆರ್ ಡೈರಿ ಹೆಸರಿನಲ್ಲಿ ಟೆಂಡರ್‌ಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ, ಟೆಂಡರ್ ಪ್ರಕ್ರಿಯೆಯನ್ನು ತಿರುಚಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಬಂಧನʼ

ವೈಷ್ಣವಿ ಡೈರಿಯು ಭೋಲೆ ಬಾಬಾ ಡೈರಿಯಿಂದ ತುಪ್ಪವನ್ನು ಪಡೆಯಲಾಗಿದೆ ಎಂದು ಸುಳ್ಳು ಹೇಳಿದೆ. ಆದರೆ ತಿರುಪತಿ ದೇವಸ್ಥಾನಕ್ಕೆ ಅಗತ್ಯ ತುಪ್ಪದ ಬೇಡಿಕೆಯನ್ನು ಪೂರೈಸುವ ಸಾಮರ್ಥ್ಯವನ್ನು ಅದು ಹೊಂದಿಲ್ಲ ಎಂಬ ಅಂಶಗಳು ತನಿಖೆ ವೇಳೆ ಗೊತ್ತಾಗಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಎಂಬ ಆರೋಪದ ತನಿಖೆಗಾಗಿ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಕಳೆದ ವರ್ಷ ನವೆಂಬರ್‌ನಲ್ಲಿ ಐವರು ಅಧಿಕಾರಿಗಳ ಸಿಬಿಐ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ತಂಡದಲ್ಲಿ ಕೇಂದ್ರ ಸಂಸ್ಥೆಯ ಇಬ್ಬರು ಅಧಿಕಾರಿಗಳು, ಆಂಧ್ರಪ್ರದೇಶದ ಇಬ್ಬರು ಪೊಲೀಸರು ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಓರ್ವ ಅಧಿಕಾರಿ ಇದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು 2024ರ ಸೆಪ್ಟೆಂಬರ್‌ನಲ್ಲಿ ರಾಜ್ಯದಲ್ಲಿ ಹಿಂದಿನ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತದ ಅವಧಿಯಲ್ಲಿ, ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪ ಮಾಡಿದ್ದರು. ಆ ಬಳಿಕ ಈ ವಿಚಾರವು ದೇಶಾದ್ಯಂತ ಭಾರಿ ಚರ್ಚೆ, ವಿವಾದಕ್ಕೆ ಕಾರಣವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...